32 C
Mumbai
March 7, 2026
Mumbai News Kannada
ತುಳುನಾಡು

ಯುವವಾಹಿನಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ






ಮೂಲ್ಕಿ ಸಮಾಜಮುಖಿ ಚಿಂತನೆಯೊಂದಿಗೆ ಉತ್ತಮ ನಾಯಕತ್ವದ ಗುಣವನ್ನು ಬೆಳೆಸುವಲ್ಲಿ ಯುವವಾಹಿನಿಯು ಸಮಾಜದಲ್ಲಿ ಮುಂಚೂಣಿಯಲ್ಲಿದೆ. ಅಧ್ಯಕ್ಷ ಸ್ಥಾನವನ್ನು ಒಂದೇ ವರ್ಷಕ್ಕೆ ಮೀಸಲಿಟ್ಟು ಸಮಾಜದಲ್ಲಿ ನಾರಾಯಣಗುರುಗಳ ತತ್ವಾದರ್ಶವನ್ನು ಪಸರಿಸುತ್ತಿರುವ ಸಂಸ್ಥೆಯನ್ನು ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಮಂಗಳೂರಿನ ಖಾಸಗಿ ಛಾನೆಲ್‌ನ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ ಹೇಳಿದರು.
ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿಯ ಯುವವಾಹಿನಿಯ ನೂತನ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.


ಮೂಲ್ಕಿ ಯುವವಾಹಿನಿಯ ಅಧ್ಯಕ್ಷ ರಿತೇಶ್ ಮೂಲ್ಕಿ ಅಧ್ಯಕ್ಷತೆಯನ್ನು ವಹಿಸಿ, ನೂತನ ಅಧ್ಯಕ್ಷ ವಿನಯಕುಮಾರ್ ಮಟ್ಟು ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮೂಲ್ಕಿ ನಾರಾಯಣಗುರು ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಭೋಧಿಸಿದರು.
ತುಳುಭಾಷಾ ಸಂಶೋಧಕ ಮಹಿ ಮೂಲ್ಕಿ ಮೂಲ್ಕಿ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು, ಸಂಘಟನಾ ಕಾರ್ಯದರ್ಶಿ ಲೋಹಿತ್‌ ರೆಂಜಾಳ ಸುಳ್ಯ, ನೂತನ ಕಾರ್ಯದರ್ಶಿ ಪ್ರೇರಣಾ, ಕೋಶಾಧಿಕಾರಿ ಜ್ಯೋತಿ ರಾಮಚಂದ್ರ ಉಪಸ್ಥಿತರಿದ್ದರು.
ಮೂಲ್ಕಿ ಯುವವಾಹಿನಿಯ ಅಧ್ಯಕ್ಷ ರಿತೇಶ್ ಮೂಲ್ಕಿ ಸ್ವಾಗತಿಸಿದರು. ಕಾರ್ಯದರ್ಶಿ ಲತೀಶ್ ಸಾಲ್ಯಾನ್ ಕಾರ್ನಾಡು ವರದಿ ವಾಚಿಸಿ, ವಂದಿಸಿದರು.
ಮಾಜಿ ಅಧ್ಯಕ್ಷ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.



Related posts

ಗುರುಪುರ ಬಂಟರ ಮಾತೃ ಸಂಘ – ಹನ್ನೊಂದನೇ ವಾರ್ಷಿಕ ಸಮಾವೇಶ

Mumbai News Desk

ಹಿರಿಯ ಸಮಾಜ ಬಂಧುಗಳ ನಿಸ್ವಾರ್ಥ ಸೇವೆಯೇ ಸಂಘದ ಬೆಳವಣಿಗೆಗೆ ಅಡಿಪಾಯ – ಮೋಹನ್ ದಾಸ್ ಹೆಜ್ಮಾಡಿ

Mumbai News Desk

ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ ವಿತರಣೆ

Mumbai News Desk

ವಿಶ್ವ ಗಾಣಿಗರ ಚಾವಡಿ ಮಂಗಳೂರು – ಉಚಿತ ವೈದ್ಯಕೀಯ ಶಿಬಿರ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ

Mumbai News Desk

ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥ ರಿಂದ ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ

Mumbai News Desk