July 22, 2026
Mumbai News Kannada
ಸುದ್ದಿ

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ







ತೆಂಕು ಹಾಗೂ ಬಡಗು ತಿಟ್ಟಿನ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ (ಶೆಟ್ಟಿಗಾರ್) ಶನಿವಾರ ರಾತ್ರಿ (ಜೂ. 21) ರಂದು ನಿಧನರಾಗಿದ್ದಾರೆ .84 ವರ್ಷದ ಅವರು ವಯೋಸಹಜ ಅನಾರೋಗ್ಯದಿಂದ ಬಳಳುತ್ತಿದ್ದರು.

ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ ಐವತ್ತೈದು ವರ್ಷಗಳಿಂದ ಸೇವೆ ಸಲ್ಲಿಸಿದ ಕಿನ್ನಿಗೋಳಿ ಮುಖ್ಯಪ್ರಾಣ ಶೆಟ್ಟಿಗಾರ್ ಅವರು ಓದಿದ್ದು ಐದನೆಯ ತರಗತಿಯವರೆಗೆ ಮಾತ್ರ. ತೆಂಕು ತಿಟ್ಟಿನ ಹೆಸರಾಂತ ಹಾಸ್ಯಗಾರ ಮಿಜಾರು ಅಣ್ಣಪ್ಪನವರ ಮಾರ್ಗದರ್ಶನದಲ್ಲಿ ಪಾತ್ರಾಭಿನಯ ಪಡೆದುಕೊಂಡ ಮುಖ್ಯಪ್ರಾಣ ಕಿನ್ನಿಗೋಳಿ ಅವರು ಮೊದಲಿಗೆ ಕಲಾವಿದರಾಗಿ ಕಟೀಲು ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮೇಳದಲ್ಲಿ ಸೇವೆ ಆರಂಭಿಸಿದರು. ನಂತರ ಇರಾ ಸೋಮನಾಥೇಶ್ವರ, ಸಾಲಿಗ್ರಾಮ, ಕದ್ರಿ ಮೇಳಗಳಲ್ಲಿ ಪಾತ್ರ ನಿರ್ವಹಣೆ ಮಾಡಿದ ಕಿನ್ನಿಗೋಳಿ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ಸೇರಿದಂತೆ ಹಲವು ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.
ಕಿನ್ನಿಗೋಳಿಯ ಶಿಮಂತೂರು ಉದಯಗಿರಿಯ ಅವರ ನಿವಾಸದಲ್ಲಿ ಬೆಳಿಗ್ಗೆ 10 ರಿಂದ 12 ಗಂಟೆ ತನಕ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.



Related posts

ಸಾಧಕ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಭವ್ಯ ಸನ್ಮಾನ: ದೇಶದ ಭವಿಷ್ಯ ಕಟ್ಟಲು ಮಕ್ಕಳಿಗೆ ಸಂಸ್ಕಾರ ಅಗತ್ಯ – ಶ್ರೀ ಶೀರೂರು ಶ್ರೀಗಳು

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ, ಮುಂಬೈ ಹಾಗೂ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (28/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ.ಆರ್. ಪುತ್ರನ್ ಅವರಿಗೆ ನುಡಿನಮನ: ಅಂಧೇರಿಯಲ್ಲಿ ಸಂತಾಪ ಸಭೆ

Mumbai News Desk

ಟಿಎಂಸಿ ಭದ್ರಕೋಟೆ ಫಾಲ್ಟಾದಲ್ಲಿ ಬಿಜೆಪಿಯ ದೇಬಾಂಗ್ಶು ಪಾಂಡಾಗೆ ಐತಿಹಾಸಿಕ ಗೆಲುವು: ಇತಿಹಾಸ ಬರೆದ ಪಶ್ಚಿಮ ಬಂಗಾಳ ಉಪಚುನಾವಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (NGO); ಜಿಲ್ಲೆಯ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಕರಾವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಉಪಮುಖ್ಯಮಂತ್ರಿಗಳಿಗೆ ಮನವಿ

Mumbai News Desk