32 C
Mumbai
March 7, 2026
Mumbai News Kannada
ಸುದ್ದಿ

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿಯಲ್ಲಿ 14ನೇ ರ‍್ಯಾಂಕ್‌ ಗಳಿಸಿದ ರಶ್ಮಿತಾ ರಾಜು ಕುಲಾಲ್ ಅವರ ಉನ್ನತ ವ್ಯಾಸಂಗಕ್ಕೆ ಕುಲಾಲ ಪ್ರತಿಷ್ಠಾನದಿಂದ 25 ಸಾವಿರದ ನೆರವು.





ಮಂಗಳೂರು: ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ 14ನೇ ರ‍್ಯಾಂಕ್‌ ಮತ್ತು ಮಂಗಳೂರಿಗೆ 6ನೇ ರ‍್ಯಾಂಕ್‌ ಗಳಿಸಿರುವ ಕುಮಾರಿ ರಶ್ಮಿತಾ ರಾಜು ಕುಲಾಲ್ ಇವರ ಉನ್ನತ ವ್ಯಾಸಾಂಗಕ್ಕೆ ಕುಲಾಲ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಸುಮಾರು 25 ಸಾವಿರ ರೂಪಾಯಿ ನೆರವನ್ನು ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯ ಯಾನೆ ಕುಲಾಲರ ಮಾತೃ ಸಂಘದಲ್ಲಿ ನೀಡಲಾಯಿತು.
ಕುಲಾಲ ಪ್ರತಿಷ್ಠಾನ ಸಮಾಜ ಕಲ್ಯಾಣ ಆಶ್ರಯದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಸೇವಾ ಕಾರ್ಯಗಳಿಗೆ ಸಹಕಾರವನ್ನು ನೀಡುವ ಉದ್ದೇಶದಿಂದ ನಿರಂತರ ಕುಲಾಲ ಸಮಾಜದ ಬಂಧುಗಳಿಗೆ ಸಹಕಾರವನ್ನು ನೀಡುತ್ತಾ ಬರುತ್ತಿದೆ.
ಜಿಲ್ಲಾ ಕುಲಾಲರ ಮಾತೃ ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲ್ ಅವರ ಉಪಸ್ಥಿತಿಯಲ್ಲಿ, ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಸುರೇಶ್ ಕುಲಾಲ್ ಮಂಗಳದೇವಿ,
ಟ್ರಸ್ಟಿಗಳಾದ ಪ್ರೇಮಾನಂದ ಕುಲಾಲ್, ದಿನೇಶ್ ಕುಲಾಲ್ ಇವರು ನೆರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮುಂಡರಿಕ್ಷ ಕುಲಾಲ್, ನ್ಯಾಯವಾದಿ ಕುಶಲಪ್ಪ, ಶ್ರೀ ದೇವಿ ದೇವಸ್ಥಾನದ ಅಧ್ಯಕ್ಷರಾದ ಸದಾಶಿವ ಕುಲಾಲ್ ಅತ್ತಾವರ,
ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಸುಂದರ ಕುಲಾಲ್ ಶಕ್ತಿನಗರ, ದೇವಸ್ಥಾನದ ಟ್ರಸ್ಟ್ ಗಿರಿಧರ್ ಜೆ ಮೂಲ್ಯ, ಪ್ರತಿಷ್ಠಾನದ ಮಹಾದಾನಿ ಸುನಿಲ್ ಆರ್ ಸಾಲ್ಯಾನ್, ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ ಅವರು ರಶ್ಮಿತಾ ಕುಲಾಲ್ಅವರಿಗೆ ಶುಭ ಹಾರೈಸಿದರು.



Related posts

ಶ್ರೀ ಸುಬ್ರಮಣ್ಯ ಮಹಾಗಣಪತಿ ಸ್ಪೋರ್ಟ್ ಕ್ಲಬ್ ತೋಕೂರು ಗೆ, ಅರಸು ಪ್ರಶಸ್ತಿ 2024

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದನೆ : ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು ಆರಂಭ

Mumbai News Desk

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk

ಸದಾನಂದ ಪೂಜಾರಿ ಆಕಸ್ಮಿಕ ಸಾವು

Mumbai News Desk

ಸುಳ್ಯದಲ್ಲಿ  ಐಕಳ ಹರೀಶ್ ಶೆಟ್ಟಿ ಯವರಿಂದ ಬಂಟರ ಸಮಾವೇಶ ಉದ್ಘಾಟನೆ:*

Mumbai News Desk

ನ್ಯಾಯವಾದಿ ರಾಘವ ಎಂ. ನೋಟರಿ ಪಬ್ಲಿಕ ಆಗಿ ನೇಮಕ

Mumbai News Desk