31 C
Mumbai
September 9, 2026
Mumbai News Kannada
ಪ್ರಕಟಣೆ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ : ನ. 18ರಂದು ಉಡುಪಿಯಲ್ಲಿ ಸಮಾಲೋಚನೆ ಸಭೆ





ಮುಂಬಯಿ : ಕರಾವಳಿಯ ಉಭಯ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ಧಿಗಾಗಿ ಸುಮಾರು 24 ವರ್ಷಗಳ ಹಿಂದೆ ಮುಂಬಯಿಯ ಉದ್ಯಮಿ, ಸಮಾಜಸೇವಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಇವರ ಮುಂದಾಳುತ್ವದಲ್ಲಿ ಸ್ಥಾಪನೆಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಯ ವತಿಯಿಂದ ನ. 18, ಶನಿವಾರ ಬೆಳಿಗ್ಗೆ 10:30 ರಿಂದ ಕರಾವಳಿ ಕರ್ನಾಟಕದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿ ಹಾಗೂ ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ ಮತ್ತು ರುದ್ರಭೂಮಿಗಳಲ್ಲಿ  ವಿದ್ಯುತ್ ಚಿತೆ ನಿರ್ಮಿಸುವ ಯೋಜನೆ ಬಗ್ಗೆ ಸಮಾಲೋಚನಾ ಸಭೆಯು “ಶೇಷಶಯನ ಸಭಾಗೃಹ ಕಿದಿಯೂರು ಹೋಟೆಲ್,” ಉಡುಪಿ ಇಲ್ಲಿ ನಡೆಯಲಿದೆ.

ಸಮಿತಿಯ ಅಧ್ಯಕ್ಷರಾದ ಎಲ್ ವಿ ಅಮೀನ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭವನ್ನು ಕರ್ನಾಟಕ ಸರ್ಕಾರದ  ಮೀನುಗಾರಿಕಾ ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾದ ಮಾಂಕಾಳ್ ವೈದ್ಯ ಇವರು ಉದ್ಘಾಟಿಸಲಿರುವರು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಮತ್ತು ಬಂದರು ಜಲಸಾರಿಗೆ ಸಚಿವರಾದ ಶ್ರೀಪಾದ ನಾಯ್ಕ, ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್,  ರಾಜ್ಯ ಸರಕಾರದ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಕರ್ನಾಟಕದ ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ವಿನಯ್ ಕುಮಾರ್ ಸೊರಕೆ, ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಮತ್ತು ಸಮಿತಿಯ ಅಂತರಾಷ್ಟ್ರೀಯ ಉಪಾಧ್ಯಕ್ಷರಾದ ಯುಎಇ  ಯ ಡಾ. ಡೇವಿಡ್  ಫ್ರಾಂಕ್ ಫೆರ್ನಾಂಡಿಸ್ ಉಪಸ್ಥಿತರಿರುವರು.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಡಿ. ಆರ್. ರಾಜು ಅವರು ಪ್ರಸ್ತಾವನೆಯ ಮಾತುಗಳನ್ನು ಆಡಲಿರುವರು. ಈ ಸಮಾರಂಭಕ್ಕೆ ಸ್ಥಳೀಯ  ಎಲ್ಲಾ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಯ ಪರವಾಗಿ ಗೌ. ಅಧ್ಯಕ್ಷರಾದ ಪದ್ಮ ವಿಭೂಷಣ ಡಾ. ಬಿ. ಎಂ. ಹೆಗ್ಡೆ,  ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಗೌ. ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಮಾಜಿ ಅಧ್ಯಕ್ಷರುಗಳು,  ಉಪಾಧ್ಯಕ್ಷರುಗಳು, ಜಿಲ್ಲಾ ಉಪಾಧ್ಯಕ್ಷರುಗಳು, ಜಿಲ್ಲಾ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಹಾಗೂ ಎಲ್ಲಾ ಸದಸ್ಯರು ವಿನಂತಿಸಿದ್ದಾರೆ. ಕಾರ್ಯಕ್ರಮದ ಬಳಿಕ ಪ್ರೀತಿ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



Related posts

ಸಿದ್ದಿವಿನಾಯಕನ ಕ್ಷೇತ್ರದ *ಶ್ರೀ ಹಟ್ಟಿಯಂಗಡಿ ಮೇಳದ* 10 ನೇ. ವರ್ಷದ ಮುಂಬಯಿ  ತಿರುಗಾಟ – ಜುಲೈ 13 ರಿಂದ. 15 ವರೆಗೆ ಪೂನಾ, ಮುಂಬಯಿ  ಮಹಾನಗರದಲ್ಲಿ ಯಕ್ಷಗಾನ.

Mumbai News Desk

ಮುಲ್ಕಿ: ಉಚಿತ ಆರೋಗ್ಯ ತಪಾಸಣಾ ಶಿಬಿರ: ಸಾರ್ವಜನಿಕರಿಗೆ ಸೇವೆಯ ಸದುಪಯೋಗ ಪಡೆದುಕೊಳ್ಳಲು ಕರೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಲುಂಡ್ ಸ್ಥಳೀಯ ಕಚೇರಿ: ಸೆ.13 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ; ಶನೀಶ್ವರ ಮಹಾಪೂಜೆ.

Mumbai News Desk

ನ. 19 ರಂದು ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ಆರಂಗೇಟ್ರಂ

Mumbai News Desk

ವಿದ್ಯಾವಿಹಾರ್ ಪಶ್ಚಿಮದ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಜುಲೈ 11ರಂದು ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ – ಸೆ. 28ಕ್ಕೆ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣೆ

Mumbai News Desk