32 C
Mumbai
March 7, 2026
Mumbai News Kannada
ಸುದ್ದಿ

ಕೇಮುಂಡೇಲು : ಅಂಗಾಗ ಕೃಷಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಕೆ. ಜಿ. ಸುರೇಶ್ ರಾವ್ ಅವರಿಗೆ ಹುಟ್ಟೂರ ಅಭಿನಂದನೆ.





ಕೆಮುಂಡೇಲು : ಮಾನವ ದೇಹದ ಅಮೂಲ್ಯ – ಅತ್ಯಗತ್ಯ “ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ” ತಜ್ಞತೆಯಲ್ಲಿ ಹೃದಯ ಹಾಗೂ ಶ್ವಾಸಕೋಶ ವಿಭಾಗದಲ್ಲಿ ಅಂತಾರಾಷ್ಟ್ರೀಯ ಶ್ರೇಷ್ಠತೆಯನ್ನು ಸುಮಾರು ನಾಲ್ನೂರು ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೂಲಕ ಪ್ರಮಾಣಪಡಿಸಿದ ಡಾ. ಕೆ.ಜಿ. ಸುರೇಶ ರಾವ್ ಅವರಿಗೆ ಹುಟ್ಟೂರು‌ ಕೆಮುಂಡೇಲಿನಲ್ಲಿ‌ ಅಭಿಮಾನ ಪೂರ್ವಕ ಗೌರವಾರ್ಪಣೆ ನೆರವೇರಿತು.
ಕೆಮುಂಡೇಲಿನ‌ ಶ್ರೀ ಪಾಂಡುರಂಗ ಭಜನಾ ಮಂಡಳಿ, ಕೆಮುಂಡೇಲು ಅನುದಾನಿತ ಹಿ. ಪ್ರಾಥಮಿಕ ಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘ ಮತ್ತು ಕೆಮುಂಡೇಲು, ಉಳ್ಳೂರು ಗ್ರಾಮಸ್ಥರು ಈ ಕಾರ್ಯಕ್ರಮವನ್ನು ಕೆಮುಂಡೇಲು ಭಜನಾ ಮಂಡಳಿಯಲ್ಲಿ ಸಂಘಟಿಸಿದ್ದರು.
ಮಹತ್ತನ್ನು ಸಾಧಿಸುವ ಸಂಕಲ್ಪ ವ್ಯಕ್ತಿಜೀವನವನ್ನು ಸುಸಂಪನ್ನಗೊಳಿಸಿ ದೇಶದ ಆಸ್ತಿಯನ್ನಾಗಿಸಿ ಸಮಾಜದಲ್ಲಿ ಬಹುಮಾನ್ಯತೆಯನ್ನು ಪಡೆಯುವ ಎತ್ತರಕ್ಕೆ ಏರಿಸುತ್ತದೆ ಎಂಬುದಕ್ಕೆ ನಮ್ಮ ಸುರೇಶ ರಾವ್ ಪ್ರತ್ಯಕ್ಷ ಸಾಕ್ಷಿ, ಯುವ ಸಂದಣಿಗೆ ಇವರ ಜೀವನ ವಿಧಾನ ಒಂದು ಆದರ್ಶ‌ – ಮಾರ್ಗದರ್ಶಿ ಎಂದು ಹುಟ್ಟೂರಿನ ಕುವರನನ್ನು ಶ್ಲಾಘಿಸಿ “ಅಭಿನವ ಧನ್ವಂತರಿ” ಉಪಾದಿಯನ್ನಿತ್ತು ಸಮ್ಮಾನಿಸಲಾಯಿತು. ಸುರೇಶ ರಾವ್ ಪತ್ನಿ ನೇತ್ರ ತಜ್ಞೆ ಡಾ. ಕಲ್ಪನಾ ಜೊತೆಗಿದ್ದರು.


‌ ಭಜನಾ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ‌ ಯುಎಸ್ ಎಎಂ ಎಸ್ ಅಕಾಡೆಮಿಕ್ಸ್ ಆ್ಯಂಡ್ ಟ್ರೈನಿಂಗ್ ನ ನಿರ್ದೇಶಕ ಡಾ.ಸಿ.ಕೆ.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ರಮೇಶ ಹಂದೆ, ಎನ್ ಎಸ್ ಯು ಎಂ ಪ.ಪೂ.ಕಾಲೇಜಿನ‌ ಪ್ರಾಚಾರ್ಯ ಪ್ರಕಾಶ ಶೆಣೈ ಅವರು ಡಾ.ಸುರೇಶ ರಾವ್ ಅವರ ಸಾಧನೆಗಳನ್ನು ವಿವರಿಸಿ ವಿದ್ಯಾರ್ಥಿ ಜೀವನದ ದಿನಗಳನ್ನು ನೆನಪಿಸಿಕೊಂಡು ಅಭಿನಂದಿಸಿದರು. ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಆಶೀರ್ವದಿಸಿದರು. ನಿವೃತ್ತ ಪಾಂಶುಪಾಲ ಬಿ.ಆರ್. ನಾಗರತ್ನ, ಕೆ. ಮುಂಡೇಲು ಶಾಲೆಯ
ಮುಖೋಪಾಧ್ಯಾಯ ಜಗನ್ನಾಥ ಶೆಟ್ಟಿ, ಭಜನಾ ಮಂಡಳಿಯ ಅರ್ಚಕ ಶ್ರೀಪತಿ ಆಚಾರ್ಯ, ಬಾಲಕೃಷ್ಣ ರಾವ್, ಕೆ.ಎಲ್.ಕುಂಡಂತಾಯ ಉಪಸ್ಥಿತರಿದ್ದರು.
ಭಜನಾ ಮಂಡಳಿಯ ಕಾರ್ಯದರ್ಶಿ ಕೃಷ್ಣಾನಂದ ರಾವ್ ಪ್ರಸ್ತಾವಿಸಿ, ಸ್ವಾಗತಿಸಿದರು. ಹರೀಶ ಕೋಟ್ಯಾನ್ ಡಾ. ಸುರೇಶ ರಾವ್ ಅವರಿಗೆ ನೀಡಲಾದ “ಅಭಿನಂದನೆಯ ಆಲೇಖ”ವನ್ನು ವಾಚಿಸಿದರು, ಪ್ರಾಧ್ಯಾಪಕ ದೇವಿಪ್ರಸಾದ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಅವರು ವಂದಿಸಿದರು.



Related posts

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.

Mumbai News Desk

ಭಾಯಂದರ್:ಸ್ನೇಹಲತಾ ವಿಶ್ವನಾಥ ಪೂಜಾರಿ ನಿಧನ

Mumbai News Desk

ಜಾಗತಿಕ ಮಟ್ಟದಲ್ಲಿ ಕಾರ್ಕಳದ ಪ್ರತಿಭೆ: ಇಥಿಯೋಪಿಯದಲ್ಲಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ನಿಟ್ಟೆಯ ವಿಶಾಲ್ ಪೂಜಾರಿ

Mumbai News Desk

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ : ಶರನ್ನವರಾತ್ರಿ ಉತ್ಸವ ಆರಂಭ

Mumbai News Desk

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ

Mumbai News Desk