32 C
Mumbai
March 7, 2026
Mumbai News Kannada
ಪ್ರಕಟಣೆ

ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ ಮತ್ತು ಯಕ್ಷಗಾನ ಸಮಾರಾಧನೆಯ ತ್ರಿಶಂತ್ ಉತ್ಸವವ ಆಮಂತ್ರಣ ಪತ್ರಿಕೆ ಬಿಡುಗಡೆ.





ಮುಂಬೈಯಲ್ಲಿನ ಕಟೀಲಿನ ಭಕ್ತರ ಸಂಪೂರ್ಣ ಸಹಕಾರವಿರಲಿ:
ಕಮಲಾ ದೇವಿ‌ಪ್ರಸಾದ್ ಆಸ್ರಣ್ಣ

ಕಟೀಲು; ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಸಮಿತಿ‌ ಮುಂಬೈ- ಯು.ಎ.ಇ ವತಿಯಿಂದ ಅಗಸ್ಟ್ 2 ರಂದು ಮುಂಬೈ ಕುರ್ಲ ಬಂಟರ ಭವನದಲ್ಲಿ ಆಸ್ರಣ್ಣ ಸಂಸ್ಮರಣೆ ಮತ್ತು ಯಕ್ಷಗಾನ ಸಮಾರಾಧನೆಯ ತ್ರಿಶಂತ್ ಉತ್ಸವವ ನಡೆಯಲಿದ್ದು ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಟೀಲು ದೇವಳದಲ್ಲಿ ನಡೆಯಿತು.

ಕಟೀಲು ದೇವಳದ ಪ್ರಧಾನ ಅರ್ಚಕರಾದ ಲಕ್ಷೀ ನಾರಾಯಣ ಆಸ್ರಣ್ಣ ಮತ್ತು ಕಮಲಾ ದೇವಿ‌ಪ್ರಸಾದ್ ಆಸ್ರಣ್ಣ ಅಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಲಕ್ಷೀನಾರಾಯಣ ಆಸ್ರಣ್ಣ ಕಳೆದ 30 ವರ್ಷಗಳಿಂದ
ದಿ. ಗೋಪಾಲಕೃಷ್ಣ ಆಸ್ರಣ್ಣ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಆಸ್ರಣ್ಣ ಅಭಿಮಾನಿಗಳು ಹಮ್ಮಿಕೊಂಡು ಬಂದಿದ್ದಾರೆ, ಈ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಂಬೈಯಲ್ಲಿನ ಕಟೀಲಿನ ಭಕ್ತರು ಸಂಪೂರ್ಣ ಸಹಕಾರ ನೀಡುತ್ತಿರುವುದು ಅಭಿನಂದನೀಯ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಸಂಸ್ಮರಣಾ ಕಾರ್ಯಕ್ರಮವನ್ನು ಪ್ರಾರಂಭದಲ್ಲಿ ಉದ್ಘಾಟನೆ ಮಾಡಿದ್ದು ನಂತರದ ದಿನಗಳಲ್ಲಿ ವರ್ಷದದಿಂದ ವರ್ಷಕ್ಕೆ ವಿಜೃಂಭಣೆಯಿಂದ ಕಾರ್ಯಕ್ರಮ ನಡೆಯುತ್ತಾ ಬಂದಿದೆ ಎಂದರು.
ಈ ಸಂದರ್ಭ ಗೋಪಾಲಕೃಷ್ಣ ಸಂಸ್ಮರಣಾ ಸಮಿತಿ ಪ್ರವರ್ತಕ ಪದ್ಮನಾಭ ಕಟೀಲು ಆಮಂತ್ರಣ ಪತ್ರಿಕೆಯನ್ನು ಕಟೀಲು ಕ್ಷೇತ್ರದಲ್ಲಿ ವಿಶೇಷ ಪೂಜ್ಯ ಸಲ್ಲಿಸಿ ಬಿಡುಗಡೆಗೊಳಿಸಿದರು.
ಲಕ್ಷ್ಮಿ ನಾರಾಯಣ ಆಸ್ರಣ್ಣ ಶ್ರೀ ದುರ್ಗೆಗೆ ವಿಶೇಷ ಪೂಜ್ಯ ಸಲ್ಲಿಸಿ, ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಲಿ,ಪಾಲ್ಗೊಂಡವರಿಗೂ ವೀಕ್ಷಿಸಿದವರಿಗೂ ಶ್ರೀದೇವಿ ಅನುಗ್ರಹಿಸಲು ಎಂದರು.

ಅಗಸ್ಟ್ 2 ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಕಟೀಲು ಮೇಳದ ಆಯ್ದ ಕಲಾವಿದರಿಂದ ಶ್ರೀ ದೇವಿ‌ಮಹಾತ್ಮೆ ಯಕ್ಷಗಾನ ನಡೆಯಲಿದೆ.



Related posts

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk

ಜ. 24:ಪರಮ ಪೂಜ್ಯ ಶ್ರೀ ವಿಜಯಾನಂದ ಸ್ವಾಮೀಜಿ ಅವರ 75ನೇ ಜನ್ಮದಿನಾಚರಣೆಯ ಅಂಗವಾಗಿ ವಜ್ರ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ

Mumbai News Desk

ಶ್ರೀ ಜ್ವಾಲಾ ಮಹಾಮ್ಮಾಯಿ – ಕಾಲ ಭೈರವ ದೇವಸ್ಥಾನ ಅಲಂಗಾರು, ಮರೋಳಿ, ಮಂಗಳೂರು : ಫೆ 21ರಿಂದ ಪ್ರತಿಷ್ಠಾ ಮಹೋತ್ಸವ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸಾನ್ ನಗರ ಥಾಣೆ ಆಗಸ್ಟ್ 17ರಂದು 19ನೇ ವಾರ್ಷಿಕ ರಕ್ತದಾನ ಶಿಬಿರ

Mumbai News Desk

ಸೆ.7 ರಂದು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಐಕಳ ಹರೀಶ್ ಶೆಟ್ಟಿ ಅವರಿಗೆ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರಧಾನ ಸಮಾರಂಭ

Mumbai News Desk

ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ತಾ.29/11/2025 ರಂದು ಕೃತಿ ಸಮೀಕ್ಷೆ ಕಾರ್ಯಕ್ರಮ

Mumbai News Desk