ಮಂಗಳೂರು ಜು 8. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆಯು ಜುಲೈ 08ರಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ ಮೂಲ್ಕಿ ಇಲ್ಲಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಜರಗಿತು.
*ಸಭೆಯಲ್ಲಿ ಕಾಮಗಾರಿಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುವ ಇಂಜಿನಿಯರ್ ಗೋಪಾಲ್ ಭಟ್ ಮತ್ತು ಕಂಟ್ರಾಕ್ಟರ್ ಶಿವಪ್ರಸಾದ್ ರೈ ಯವರು ಮುಂದಿನ ಹಂತದ ಕಾಮಗಾರಿಯ ಕುರಿತು ಅಧ್ಯಕ್ಷರಲ್ಲಿ ಸಮಾಲೋಚನೆ ನಡೆಸಿದರು.*
*ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಕಾಮಗಾರಿಯ ವೀಕ್ಷಣೆ ಮಾಡಿ ಮುಂದಿನ ಹಂತದ ಕಾಮಗಾರಿ ಆದಷ್ಟು ತೀವ್ರ ಗತಿಯಲ್ಲಿ ಸಾಗಿಸುವರೇ ಕಂಟ್ರಾಕ್ಟರಿಗೆ ಸಲಹೆ ನೀಡಿದರು.*
*ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು ಮತ್ತು ಕಾಮಗಾರಿಗೆ ಸಂಬಂಧಪಟ್ಟವರು ಉಪಸ್ಥಿತರಿದ್ದರು.*
B. Dinesh Kulal
Mob.: 9821868674




