.
ಮುಂಬಯಿ,ಜು.8: ಶ್ರೀ ನಿತ್ಯಾನಂದ ಸ್ವಾಮಿ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರು ಪೂರ್ಣಿಮೆಯ ಉತ್ಸವವನ್ನು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಜು.10ರಂದು ಬೆಳಿಗ್ಗೆ ಗಂಟೆ 10ರಿಂದ ಮಧ್ಯಾಹ್ನ 1ಗಂಟೆಯ ತನಕ ಆಚರಿಸಲಾಗುವುದು.
ಈ ಕಾರ್ಯಕ್ರಮವು ಮೀರಾ ರೋಡ್ ಪೂರ್ವದ ಜಹಾಂಗೀರ್ ಕಾಂಪ್ಲೆಕ್ಸ್ ರಸ್ತೆಯ ವಿಜಯಾ ಪಾರ್ಕ್ ಸಮೀಪದ ಸ್ವಸ್ತಿಕ್ ಅಂಬರ್ ಪ್ಲಾಝಾ ಸಭಾಗ್ರಹದಲ್ಲಿ ನಡೆಯಲಿದೆ.
ಅಂದು ಪರಿಸರದ ಭಜನಾ ಮಂಡಳಿಗಳಿಗೆ ಭಜನೆ, ಗುರು ಪೂಜೆ, ಮಹಾಆರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವದಲ್ಲಿ ಪಾಲ್ಗೊಂಡು ಗುರು ಕೃಪೆಗೆ ಪಾತ್ರರಾಗಬೇಕಾಗಿ ಸಂಸ್ಥೆಯ ಟ್ರಸ್ಟಿಗಳು, ಅದ್ಯಕ್ಷರು , ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.




