July 23, 2026
Mumbai News Kannada
ಪ್ರಕಟಣೆ

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 








    ಮುಂಬಯಿ ಜು11. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಮತ್ತು ಸ್ವಾದಿ ಮಾತೆ ಶ್ರೀ ಮಾತಾನಂದಮಯಿ ಅವರು ಇದೇ ಬರುವ ಜುಲೈ 16ರಂದು ಮುಂಬಯಿಗೆ ಆಗಮಿಸಲಿದ್ದು. ಮುಂಬಯಿಯ ಹಾಗೂ ಥಾಣೆಯ ಉಪನಗರಗಳಲ್ಲಿ ಜುಲೈ 27 ರವರೆಗೆ ಉಪಸ್ಥಿತರಿದು ಭಕ್ತರಿಗೆ ಆಶೀರ್ವಚನ ನೀಡಲಿರುವರು. ಈ ಸಂದರ್ಭದಲ್ಲಿ ಮುಂಬಯಿಯ ಹಾಗೂ ಉಪನಗರದ ವಿವಿಧ ಕಡೆಗಳಲ್ಲಿ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಆಶೀರ್ವಚನ ಕಾರ್ಯಕ್ರಮವು ಜರಗಲಿರುದು. 

ಈ ಕಾರ್ಯಕ್ರಮಗಳ ಸಂಪೂರ್ಣ ವಿವರ ವಿರುವ ಆಮಂತ್ರಣ ಪತ್ರಿಕೆಯನ್ನು ಜುಲೈ 8ರಂದು ಸಯನ್ ಶ್ರೀ ನಿತ್ಯಾನಂದ ಸಭಾ ಗೃಹದಲ್ಲಿ ಮುಂಬಯಿಯ ಗುರುಭಕ್ತರು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕ ಸಮಿತಿಯು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಗುರುದೇವ ಸೇವಾ ಬಳಗ ಮುಂಬಯಿಯ ಅಧ್ಯಕ್ಷರಾದ ದಾಮೋದರ ಶೆಟ್ಟಿ, ನೆರೂಳ್,  ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಶೆಟ್ಟಿ, ಕೋಶಾಧಿಕಾರಿ ರವೀಂದ್ರ ಶೆಟ್ಟಿ, ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕ ಇದರ ಬೆಳ್ಳಿ ಹಬ್ಬ ಆಚರಣೆ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಕೆಪಿ ಪ್ರಕಾಶ್ ಎಲ್ ಶೆಟ್ಟಿ, ಉದ್ಯಮಿ ಚಂದ್ರಹಾಸ ರೈ, ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮಹಾರಾಷ್ಟ್ರ ಇದರ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ವೇತಾ ಚಂದ್ರಹಾಸ ರೈ,ಗುರುದೇವ ಸೇವಾ ಬಳಗ  ಯುವ ವಿಭಾಗದ ಮುಖ್ಯಸ್ಥರಾದ ಡಾಕ್ಟರ್  ಅಧಿಪ್ ಕೆ ಶೆಟ್ಟಿ, ಹಾಗೂ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಸದಸ್ಯರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಸದಸ್ಯರು  ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಜರಗಿದ ಪೂರ್ವಭಾವಿ ಸಭೆಯಲ್ಲಿ ಶ್ರೀಗಳ ಸಾರ್ವಜನಿಕ ಆಶೀರ್ವಚನ ಕಾರ್ಯಕ್ರಮ ಹಾಗೂ ಗುರುವಂದನಾ ಕಾರ್ಯಕ್ರಮಗಳನ್ನು  ಅತ್ಯಂತ ಯಶಸ್ವಿಯಾಗಿ ಆಚರಿಸಬೇಕು ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಮತ್ತು ಇದೇ ಸಂದರ್ಭದಲ್ಲಿ  ನಡೆಯುವ ಬೆಳ್ಳಿಯ ಸಮಾರಂಭವನ್ನು ಅತ್ಯಂತ ವಿಜ್ರಂಭಣೆಯಿಂದ ನಡೆಸಬೇಕು ಎಂದು ಅಧ್ಯಕ್ಷರು ನುಡಿದರು.



Related posts

    ಕುಲಾಲ ಸಂಘ ಮುಂಬಯಿ :  ಅ 27ರಂದು  94ನೇ ವಾರ್ಷಿಕ ಮಹಾಸಭೆ.

Mumbai News Desk

ಬೆಂಗಳೂರಿನ ಶ್ರೀ ಮಹಾಲಕ್ಷ್ಮೀ ಸನ್ನಿಧಿ, ನಂಬಿದ ಭಕ್ತರ ಪಾಲಿನ ಕರುಣಾನಿಧಿ

Mumbai News Desk

ವಿದ್ಯಾವಿಹಾರ್: ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ದೇವಸ್ಥಾನ,ಫೆ. 1ರಂದು ಇಪ್ಪತ್ನಾಲ್ಕು ಕಂತುಗಳ ಶ್ರೀರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ

Mumbai News Desk

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk

 ನ 29,30 ಮತ್ತು ಡಿ 1 ಸತತ ಮೂರು ದಿವಸ  ಮಕ್ಕಳ ಕಲರವದಲ್ಲಿ ನಾಟಕೋತ್ಸವ, ಯಕ್ಷಗಾನೋತ್ಸವ, ವಾರ್ಷಿಕೋತ್ಸವಗಳ ವಿಜೃಂಭಣೆಯ ಮಹಾಮೇಳ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಫೆಬ್ರವರಿ 14 ರಂದು 19ನೇ ವರ್ಷದ ಶ್ರೀ ಶನೀಶ್ವರ ಮಹಾಪೂಜೆ

Mumbai News Desk