July 23, 2026
Mumbai News Kannada
ಪ್ರಕಟಣೆ

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ







ಮುಂಬೈ ಹಾಗೂ ಉಪನಗರದ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಎಂಬ ಉದ್ದೇಶದಿಂದ ಹುಟ್ಟಿಕೊಂಡ 9 ಹ್ಯಾಂಡ್ಸ್ ಫೌಂಡೇಶನ್ ಕಳೆದ 7 ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಹಾಗೂ ಪುಸ್ತಕ, ಪರಿಕರಗಳನ್ನು ನೀಡುತ್ತಾ ಬರುತಿದೆ.
ಸಂಸ್ಥೆಯು ಪ್ರತಿವರ್ಷ ಆಯ್ದ ವಿದ್ಯಾರ್ಥಿಗಳಿಗೆ ವಾರ್ಷಿಕ ಶಾಲಾ ಶುಲ್ಕವನ್ನು ನೀಡುತ್ತಿದ್ದು, ಈ ವರ್ಷದ ಆರ್ಥಿಕ ವಿತರಣಾ ಕಾರ್ಯಕ್ರಮ ಜುಲೈ 13ರ ಆದಿತ್ಯವಾರ ಸಂಜೆ 4. 30 ಗಂಟೆಗೆ ಅಂಧೇರಿ ಪಶ್ಚಿಮ, ವೀರ ದೇಸಾಯಿ ಮಾರ್ಗದ ಮೊಗವೀರ ಭವನದ 2ನೇ ಮಹಡಿಯ ಸಭಾಗ್ರಹದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಯಾಗಿ ಸಾಯಿ ಗ್ರೂಪ್ ಆಫ್ ಹೊಟೇಲ್ಸ್ ನ ಆಡಳಿತ ನಿರ್ದೇಶಕ ರವಿ ಸುಂದರ್ ಶೆಟ್ಟಿ, ಗೌರವ ಅತಿಥಿಗಳಾಗಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಟ್ರಸ್ಟಿ ಅಜಿತ್ ಸುವರ್ಣ, ಮೊಗವೀರ ವ್ಯವಸ್ಥಾಪಕ ಮಂಡಳಿಯ ನೂತನ ಅಧ್ಯಕ್ಷ ಗಣೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ಬಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಕಾಂಚನ್, ಸಮಾಜ ಸೇವಕ ರವೀಂದ್ರ ಎಲ್ ಕರ್ಕೇರ, ಮೊಗವೀರ ಮಹಾಜನ ಸೇವಾ ಸಂಘ ಬಗ್ಬಾಡಿ ಹೋಬಳಿಯ ಮಾಜಿ ಅಧ್ಯಕ್ಷ ಗೋಪಾಲ್ ಪುತ್ರನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು.
ಶಿಕ್ಷಣ ಪ್ರೇಮಿಗಳು, ದಾನಿಗಳು, ಸಂಸ್ಥೆಯ ಹಿತ ಚಿಂತಕರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ನೈನ್ ಹ್ಯಾಂಡ್ಸ್ ಫೌಂಡೇಶನ್ ನ ಈ ಮಹಾನ್ ಕಾರ್ಯಕ್ಕೆ ಸ್ಪಂದಿಸುವಂತೆ ಅಧ್ಯಕ್ಷ ಸಂತೋಷ್ ಕರ್ಕೇರ, ಸ್ಕ್ರಟಿನಿ(Scrutiny) ಕಮಿಟಿ ಕಾರ್ಯಧ್ಯಕ್ಷ ಭಾಸ್ಕರ್ ಸಾಲಿಯಾನ್, ಕಾರ್ಯದರ್ಶಿ ದೇವರಾಜ್ ಅಮೀನ್, ಟ್ರಸ್ಟಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಶ್ರೀ ಮಹಾವಿಷ್ಣು ಮಂದಿರ – ಡೊಂಬಿವಲಿ, ತಾ.26 ಮತ್ತು 27 ಅಕ್ಟೋಬರ್ ರಂದು 47ನೇ ವಾರ್ಷಿಕ ಭಜನಾ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ  ಶ್ರೀಪಾದರು ಡಿ.20ರಿಂದ 22 ವರೆಗೆ ಸಾಂತಾಕ್ರೂಜ್  ಪೇಜಾವರ ಮಠದಲ್ಲಿ

Mumbai News Desk

ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರ ಹೆಜಮಾಡಿ : ಎ. 21(ಇಂದು) ರಂದು ವಾರ್ಷಿಕ ಮಂಗಳೋತ್ಸವ, ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವತಿಯಿಂದ ಆ 15 ರಂದು ಹದಿನೆಂಟನೆಯ ವರ್ಷದ ಸಾಮೂಹಿಕ ಸತ್ಯನಾರಾಯಣ ಮಹಾ ಪೂಜೆ

Mumbai News Desk

ಬಂಟರ ಸಂಘ ಮುಂಬಯಿ : ಎ. 18 ರಂದು ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ  ಅರೋಗ್ಯ ಉಪನ್ಯಾಸ

Mumbai News Desk

ಪೇಜಾವರ ಮಠದಲ್ಲಿ ಹರಿಕಥಾ ವಿದ್ವಾನ್ “ವಿಶ್ವೇಶ ದಾಸ” ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ  “ತ್ರಿದಿನ ಹರಿಕಥಾ ಸಂಕೀರ್ತನೆ”

Mumbai News Desk