September 6, 2026
Mumbai News Kannada
ತುಳುನಾಡು

ಕಾಪು ಮೂರನೇ ಮಾರಿಯಮ್ಮ ದೇವಸ್ಥಾನ ರಜತ ಗದ್ದುಗೆ ವಿಜ್ಞಾಪನ ಪತ್ರ ಬಿಡುಗಡೆ.





ಕಾಪು, ಜು. 12 : ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತಕ್ಕೊಳಪಟ್ಟಿರುವ ಶ್ರೀ ಮೂರನೇ ಮಾರಿಯಮ್ಮ ದೇವಸ್ಥಾನ ಸ್ಥಾಪನೆಗೊಂಡು ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಪ್ರಯುಕ್ತ ಹಮ್ಮಿಕೊಂಡಿರುವ ದೇವಸ್ಥಾನದ ಜೀರ್ಣೋದ್ಧಾರ, ನೂತನ ರಜತ ಗದ್ದುಗೆ ಸಮರ್ಪಣಾ ಕಾರ್ಯಕ್ರಮದ ವಿಜ್ಞಾಪನ ಪತ್ರ ಬಿಡುಗಡೆ ಸಮಾರಂಭವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ದೇವಸ್ಥಾನದ ತಂತ್ರಿ ಕೆ.ಪಿ. ಶ್ರೀನಿವಾಸ ತಂತ್ರಿ ಮಡುಂಬು, ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತಸರ ಪ್ರಸಾದ್ ಶೆಣೈ ಮಾತನಾಡಿದರು. ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಹರ ಎಸ್. ಶೆಟ್ಟಿ ಕಾಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಹೊಸ ಮಾರಿಗುಡಿ

ದೇವಸ್ಥಾನದ ಆಡಳಿತ ಮೊಕ್ತಸರ ನಡಿಕೆರೆ ರತ್ನಾಕರ ಶೆಟ್ಟಿ ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಶ್ರೀ ಮೂರನೇ ಮಾರಿಯಮ್ಮ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವೈ. ಶಶಿಧರ ಕೆ. ಶೆಟ್ಟಿ ಕೋತ್ವಾಲಗುತ್ತು, ಮುಂಬಯಿ ಸಮಿತಿ ಅಧ್ಯಕ್ಷ ಶಶಿಧರ ಕೆ. ಶೆಟ್ಟಿ ಇನ್ನಂಜೆ, ಗೌರವಾಧ್ಯಕ್ಷ ಅನಿಲ್ ಬಲ್ಲಾಳ್ ಕಾಪು ಬೀಡು, ಪ್ರಧಾನ ಕಾರ್ಯದರ್ಶಿ ಶ್ರೀಕರ ಶೆಟ್ಟಿ ಕಲ್ಯ, ಮಾರಿಯಮ್ಮ ದೇವಸ್ಥಾನದ ದರ್ಶನ ಪಾತ್ರಿ ಗಿರೀಶ್ ಪಾತ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮೂರನೇ ಮಾರಿಯಮ್ಮ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಪ್ರಧಾನ ಸಂಚಾಲಕ ಅರುಣ್ ಶೆಟ್ಟಿ ಪಾದೂರು ಸ್ವಾಗತಿಸಿದರು. ಗೌರವ ಸಲಹೆಗಾರ ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

B. Dinesh Kulal

Mob.: 9821868674



Related posts

ಸ್ಯಾಬ್ರ ಕಟ್ಟೆ: ನಿವೃತ ಹಿರಿಯ ಬ್ಯಾಂಕ್ ಅಧಿಕಾರಿ ಗಳಿಗೆ ಸನ್ಮಾನ

Mumbai News Desk

ಉಡುಪಿ ಕೃಷ್ಣನಿಗೆ ‘ಪಾರ್ಥಸಾರಥಿ’ ಸುವರ್ಣ ರಥ ಸಮರ್ಪಣೆ

Mumbai News Desk

ಗಾಣಿಗರ ಸೇವಾ ಸಂಘ ಪಾಣೆಮಂಗಳೂರು: ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ ಹಾಗೂ ನವೀಕೃತ ಸುಮಂಗಲ ಕಲ್ಯಾಣ ಮಂಟಪದ ಲೋಕಾರ್ಪಣೆ

Mumbai News Desk

ಉಡುಪಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿದ ಶ್ರೀ ಗುರು ಪೂರ್ಣಿಮಾ ಮಹೋತ್ಸವ

Mumbai News Desk

ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಹರೀಶ್ ಕೋಟ್ಯಾನ್ ಆಯ್ಕೆ

Mumbai News Desk

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಸಂಭ್ರಮಾಚರಣೆ

Mumbai News Desk