28.4 C
Mumbai
March 7, 2026
Mumbai News Kannada
ಸುದ್ದಿ

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ.





 ಸಚಿತ್ರ ವರದಿ : ಪಿ.ಆರ್.ರವಿಶಂಕರ್

ಬೊಯಿಸರ್ : ತಾ.10 ಜುಲೈ 2025

       ನಿತ್ಯಾನಂದರ ಅಸೀಮ ಭಕ್ತರಾದ  ದಿ. ಶ್ರೀ ಕೋಡಿಕಲ್ ದಾಮೋದರ್ ನಾಯ್ಕ್ ರವರು ಸ್ಥಾಪಿಸಿ ಲೋಕಾರ್ಪಣೆ ಮಾಡಿದ ಮಹಾರಾಷ್ಟ್ರ ಕರಾವಳಿಯಲ್ಲಿನ   ಪಾಲ್ಘರ್ ಜಿಲ್ಲೆಯ ಬೊಯಿಸರ್ ಪಶ್ಚಿಮದಲ್ಲಿನ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಆಷಾಡ ಪೂರ್ಣಿಮೆಯಂದು ಗುರುಪೂರ್ಣಿಮೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.  
ಪ್ರಾತಃಕಾಲದ ಕಲಶಪೂಜೆಯನ್ನು ಶ್ರೀಮತಿ ಪದ್ಮಾವತಿ ಹಾಗೂ ಸತ್ಯಾ ಕೋಟ್ಯಾನ್ ದಂಪತಿಗಳು ನೆರವೇರಿಸಿದರು. ಆನಂತರ ಶ್ರೀ ಗುರುದೇವರಿಗೆ ಪಂಚಾಮೃತ ಅಭಿಷೇಕದ ಬಳಿಕ ಜರಗಿದ  ಸಾರ್ವಜನಿಕ ಸೀಯಾಳ ಅಭಿಷೇಕದಲ್ಲಿ ಭಕ್ತಾಭಿಮಾನಿಗಳೆಲ್ಲರೂ ಭಾಗವಹಿಸಿದ್ದರು. 


     ಆನಂತರ ಸದ್ಗುರು ಭಜನಾ ಮಂಡಳಿಯ ವತಿಯಿಂದ ವಿವಿಧ ಭಕ್ತಿಗೀತೆ ಹಾಗೂ ಭಜನಾ ಕಾರ್ಯಕ್ರಮ ಜರಗಿತು. ಧಾರ್ಮಿಕ ವಿಧಿವಿಧಾನಗಳನ್ನು ಪುರೋಹಿತ ಹರೀಶ್ ಶಾಂತಿ ಮತ್ತು  ಪುರೋಹಿತ ರಾಜೇಶ್  ಶಾಂತಿ ಜರಗಿಸಿದರು . ವಿಶೇಷ ಗುರು ಪೂಜೆ ಹಾಗೂ ಮದ್ಯಾಹ್ನದ ಮಂಗಳ ಆರತಿಯ ಬಳಿಕ ಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
  ಈ ಕಾರ್ಯಕ್ರಮದಲ್ಲಿ ಪಾಲ್ಘರ್ ತಾಲೂಕು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ರಘುರಾಮ್ ಕೆ. ರೈ , ಡಹಾಣೂ ಹೋಟೆಲ್ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಎಸ್. ಶೆಟ್ಟಿ ,  ಮಂದಿರದ ವಿಶ್ವಸ್ಥ ಮಂಡಳಿಯ ಶ್ರೀನಿವಾಸ್ ಕೋಟ್ಯಾನ್ , ಸತ್ಯಾ ಕೋಟ್ಯನ್ , ಭಕ್ತ ವೃಂದದ ಸದಸ್ಯರು , ಸದ್ಗುರು ಭಜನಾ ಮಂಡಳಿಯ ಸದಸ್ಯರು , ಪಾಲ್ಘರ್ ಜಿಲ್ಲೆಯ   ವಿವಿಧ ಸಂಸ್ಥೆಯ ಪದಾಧಿಕಾರಿಗಳು  ಹಾಗೂ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 
ಕಾರ್ಯಕ್ರಮ ವ್ಯವಸ್ಥಾಪನೆಯ ಉಸ್ತುವಾರಿಯಲ್ಲಿ ರಮಾನಂದ ಪೂಜಾರಿ ಮತ್ತು ಸಂಗಡಿಗರು ಸಹಕರಿಸಿದರು.
   ಚಿತ್ರ ಹಾಗೂ ಸುದ್ದಿ : ಪಿ.ಆರ್.ರವಿಶಂಕರ್
                    8483980035



Related posts

ಮೈಲ್ ಸ್ಟೋನ್ ಪೆಜೇಂಟ್ಸ್ ನ ಆಯೋಜನೆಯಲ್ಲಿ ದುಬೈ ಯಲ್ಲಿ ” ಜಾಗತಿಕ ಮಹಿಳಾ ಸಮಾವೇಶ” ಮುಂಬೈಯ ಪ್ರಭಾ ಎನ್ ಸುವರ್ಣ ಅವರಿಂದ ಉಪನ್ಯಾಸ

Mumbai News Desk

ವಿಜಯಾ ಕಾಲೇಜು ಮೂಲ್ಕಿ ಗ್ಲೋಬಲ್ ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್, ಸಾಧಕರಿಗೆ ಸನ್ಮಾನ,

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025 ಪ್ರದಾನ ಸಮಾರಂಭ, ಪೂರ್ವಭಾವಿ ಸಭೆ

Mumbai News Desk

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ

Mumbai News Desk

ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ದ್ವಾರಕಾಮಯಿ ಮಠ ಶ್ರೀ ಕ್ಷೇತ್ರ ಶಂಕರಪುರದ ವತಿಯಿಂದ ಪುಲ್ವಾಮ ದಾಳಿಯಲ್ಲಿ ಮಡಿದ ಯೋಧರಿಗೆ ನುಡಿ -ನಮನ

Mumbai News Desk