
ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ರಜತಾದ್ರಿ ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಇವರ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ ಸಂಭ್ರಮ ಪಂಚ ಗ್ಯಾರೆಂಟಿ ಸಮಿತಿ ಕಚೇರಿ ಮುಂಭಾಗದಲ್ಲಿ ನಡೆಯಿತು ಮಂಗಳೂರಿನಿಂದ ಉಡುಪಿ ಸರ್ಕಾರಿ ಬಸ್ ನಿಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು

ಕಾಪು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಶಕ್ತಿ ಯೋಜನೆ ಉಡುಪಿ ಜಿಲ್ಲಾಧ್ಯಂತ ಮಹಿಳೆಯರು ಇದರ ಪ್ರಯೋಜನವನ್ನು ಪಡೆದಿದ್ದಾರೆ ದೇವಾಲಯ ಸಂದರ್ಶನ ತಮ್ಮ ದೂರದ ಊರಿಗೆ ಪ್ರಯಾಣ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಸಿದ್ದರಾಮಯ್ಯರವರ ಅತ್ಯುತ್ತಮ ಯೋಚನೆ ಎಲ್ಲರೂ ಇದರ ಪ್ರಯೋಜನ ಪಡೆಯಲಿ ಅಂತ ಶುಭಹಾರೈಸಿದರು.

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು ತಾಲೂಕು ಅಧ್ಯಕ್ಷರು ಶ್ರೀ ನವೀನ್ ಚಂದ್ರ ಎಸ್ ಸುವರ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರುಗಳಾದ ಪ್ರಭಾಕರ ಆಚಾರ್ಯ ಕಟಪಾಡಿ, ಸುಧೀರ್ ಎಸ್ ಕರ್ಕೇರ, ಕೀರ್ತಿ ಕುಮಾರ್, ರೀನಾ ವಿನುತ ಡಿ ಸೋಜಾ, ಉದಯ್ ಸಿ , ಲವ ಕರ್ಕೇರ , ಕಾಪು ಪುರಸಭೆ ಸದಸ್ಯರಾದ ದೇವರಾಜ್ ಕೋಟ್ಯಾನ್ , ಕಾಪು ತಾಲೂಕು ಪಂಚಾಯತ್ ಸಿಬ್ಬಂದಿಗಳು, ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.




