30.5 C
Mumbai
June 8, 2026
Mumbai News Kannada
ಸುದ್ದಿ

ಮೂಲ್ಕಿ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಹರ್ಷರಾಜ್ ಶೆಟ್ಟಿ ಜಿ ಎಂ ಆಯ್ಕೆ





ಮುಲ್ಕಿ ಲಯನ್ಸ್ ಕ್ಲಬ್ ನ 2025 – 26 ರ ಸಾಲಿನ ಅಧ್ಯಕ್ಷರಾಗಿ ಹರ್ಷರಾಜ್ ಶೆಟ್ಟಿ ಜಿ ಎಂ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಮಲಾಕ್ಷ ಬಡಗುಹಿತ್ಲು, ಪ್ರವೀಣ್ ಶೆಟ್ಟಿ, ಕಾರ್ಯದರ್ಶಿ ಶೀತಲ್ ಸುಶೀಲ್, ಕೋಶಾಧಿಕಾರಿ ಸುಶೀಲ್ ಎಸ್ ಬಂಗೇರ, ಎಲ್ ಸಿ ಐ ಎಫ್ ಕೋರ್ಡಿನೇಟರ್ ಪೌಲ್ ರೋಲ್ಟಿ ಡಿ ಕೋಸ್ತ, ಜೊತೆ ಕಾರ್ಯದರ್ಶಿ ನಿರೂಪಮ ಪಿ ಶೆಟ್ಟಿ , ಜೊತೆ ಕೋಶಾಧಿಕಾರಿ ಸುದರ್ಶನ್ ಪಂಜ, ವಿವಿಧ ಸಮಿತಿಗಳ ಚೇರ್ ಪರ್ಸನ್ ಗಳಾಗಿ ಧರ್ಮದರ್ಶಿ ಹರಿಕೃಷ್ಣ ಪುನರೂರು, ವಿಜಯಕುಮಾರ್ ಕುಬೆವೂರು, ಪ್ರಮೋದ್ ಕುಡ್ವ, ಕ ಮೋಹನ್ ದಾಸ್ ಶೆಟ್ಟಿ, ಸದಾಶಿವ ಹೊಸದುರ್ಗ, ಸುಜಿತ್ ಸಾಲಿಯನ್, ಪ್ರಶಾಂತ್ ಶೆಟ್ಟಿ, ಲತಾ ಶೇಖರ್ ನಿರ್ದೇಶಕರುಗಳಾಗಿ ಶೇಖರ್ ಪೂಜಾರಿ, ನವೀನ್ ಶೆಟ್ಟಿ, ರೋಸ್ ಮರಿಯಾ ಡಿ ಕೋಸ್ತ, ಪುರುಷೋತ್ತಮ ಸುವರ್ಣ, ವೆಂಕಟೇಶ್ ಬಂಗೇರ ರವೀಂದ್ರ ಶೆಟ್ಟಿ ಉದಯ ಶೆಟ್ಟಿ ರಂಗನಾಥ್ ಶೆಟ್ಟಿ, ಉದಯ ಶೆಟ್ಟಿ, ರಂಗನಾಥ ಶೆಟ್ಟಿ, ಶಾಂತ ಹೊಸದುರ್ಗ, ಭಾನುಮತಿ ಶೆಟ್ಟಿ, ಮೋಹನ್ ದಾಸ್ ಹೆಜಮಾಡಿ, ಡಾ. ಸುರೇಶ್ ಆರಾನ್ಹ, ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ, ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಕಾಂಗ್ರೆಸ್ ನಾಯಕ ಮಿಥುನ್ ರೈ,, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಹಳೆಯಂಗಡಿ ಸಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಮಾಜಿ ಅಧ್ಯಕ್ಷ ಸುನಿಲ್ ಆಳ್ವ, ಮುಖ್ಯಾಧಿಕಾರಿ ಮಧುಕರ್, ಸದಸ್ಯರಾದ ಪುತ್ತು ಭಾವ, ಬಾಲಚಂದ್ರ ಕಾಮತ್, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಡಾ ಹರಿಶ್ಚಂದ್ರ ಪಿ ಸಾಲಿಯನ್, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ್ ಬರ್ನಾಡ್, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಟಾರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಲ. ಪುಷ್ಪರಾಜು ಚೌಟ, ಉದಯಕುಮಾರ್ ಶೆಟ್ಟಿ ಆದಿಧನ್ ಮತ್ತಿತರರು ಅಭಿನಂದಿಸಿದ್ದಾರೆ.

ಹರ್ಷರಾಜ್ ಶೆಟ್ಟಿ ಅವರು ವಿವಿಧ ಸಂಘ-ಸಂಸ್ಥೆ, ಪಕ್ಷ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ, ಅಂತರ್ ರಾಷ್ಟ್ರೀಯ ಕ್ಲಬ್ ಗಳಾದ JC ಲಯನ್ ಇತ್ಯಾದಿಯಲ್ಲಿ ತೊಡಗಿಸಿ ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದು, ಸರಳ ವ್ಯಕ್ತಿತ್ವದವರು. ಹರ್ಷರಾಜ್ ಶೆಟ್ಟಿ ಜಿಎಂ ಅವರು ಮೂಲ್ಕಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರಿಗೆ ಮೂಲ್ಕಿಯ ಸಂಘಟನೆಗಳ ಪದಾಧಿಕಾರಿಗಳು, ಪಕ್ಷದ ನಾಯಕರು, ಗಣ್ಯರು ಸಂತೋಷ ವ್ಯಕ್ತಪಡಿಸಿ ಶುಭಕೋರಿದ್ದಾರೆ.



Related posts

ಉದ್ಯಮಿ ಎನ್. ಟಿ.ಪೂಜಾರಿ ಅವರಿಗೆ ಪಿತೃ ವಿಯೋಗ

Mumbai News Desk

ಶ್ರೀ ಸುಬ್ರಮಣ್ಯ ಮಹಾಗಣಪತಿ ಸ್ಪೋರ್ಟ್ ಕ್ಲಬ್ ತೋಕೂರು ಗೆ, ಅರಸು ಪ್ರಶಸ್ತಿ 2024

Mumbai News Desk

ಸುಧಾಮೂರ್ತಿ ರಾಜ್ಯಸಭೆಗೆ ನೇಮಕ

Mumbai News Desk

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು

Mumbai News Desk

ಗುಜರಾತ್ ಭರುಚ್ ಶ್ರೀ ಗುಮನ್ ದೇವ್ ಮಂದಿರದಲ್ಲಿ ಅದ್ದೂರಿಯ ಶ್ರೀ ಬಾಲಾಜಿ ವೆಂಕಟೇಶ್ವರ ಸ್ವಾಮಿ ಪ್ರಾಣಪ್ರತಿಷ್ಠೆ , ಬ್ರಹ್ಮಕಲಶೋತ್ಸವ , ಶ್ರೀನಿವಾಸ ಕಲ್ಯಾಣ.

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk