32 C
Mumbai
March 7, 2026
Mumbai News Kannada
ತುಳುನಾಡು

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.





ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಆಟಿ ದೊಂಜಿ ದಿನ ಕಾರ್ಯಕ್ರಮವು ನೆರವೇರಿತು. ಸುವರ್ಣ ರೆಸಿಡೆನ್ಸಿ ತಾರೆ ತೋಟ ಮಂಗಳೂರು ಇಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ಇವರು ಉದ್ಘಾಟಿಸಿ ಆಟಿದ ದಿನದ ವೈಶಿಷ್ಟತೆಯನ್ನು ತಿಳಿಸಿದರು, ಹಾಗೂ ಟ್ರಸ್ಟಿನ ಕಾರ್ಯ ವೈಕ್ಯರಿಯನ್ನು ಮೆಚ್ಚಿದರು.


ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ,ದೈಜಿವರ್ಲ್ಡ್ ಸಂಸ್ಥಾಪಕರಾದ ವಾಲ್ಟರ್ ನಂದಳಿಕೆ, ಕೇಶವ ಮರೋಲಿ, ಬಿಜೆಪಿಯ ಜಿಲ್ಲಾ ಕಾರ್ಯದರ್ಶಿ ಜಯಕುಮಾರ್, ಸುವರ್ಣ ರೆಸಿಡೆನ್ಸಿಯ ಅಧ್ಯಕ್ಷರಾದ ಯಡಿಪಡಿತಾಯ, ಉಪಸ್ಥಿದ್ದರು.
ಉಪಸ್ಥಿತರಿದ್ದ ಎಲ್ಲಾ ಅತಿಥಿಗಳಿಗೆ ತುಳುನಾಡಿನ ಸಾಂಪ್ರದಾಯಿಕ ಶೈಲಿಯಲ್ಲಿ ಸನ್ಮಾನಿಸಲಾಯಿತು. ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಕೋಟ್ಯಾನ್, ಟ್ರಸ್ಟಿಗಳಾದ ಕಲ್ಪನಾ ಕೋಟ್ಯಾನ್, ಲಕ್ಷ್ಮೀಶ ಕೋಟಿಯನ್, ಶೈನಿ ಮೂಲತ್ವ, ಅಕ್ಷತ ಕದ್ರಿ , ಟ್ರಸ್ಟಿನ ಎಲ್ಲಾ ಸದಸ್ಯರು, ಪರಿಸರದವರು ಭಾಗವಹಿಸಿದರು.ಕೊನೆಗೆ ಟ್ರಸ್ಟಿನ ಸದಸ್ಯರು ಆಟಿದ ದಿನದ ಸಾಂಪ್ರದಾಯಿಕ ಶೈಲಿಯ ಊಟ ಉಪಚಾರಗಳನ್ನು ಮಾಡಿ ಬಡಿಸಿದರು.
ಶೈನಿ ಮೂಲತ್ವ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು, ಮಮತಾ ಕಾರ್ಯಕ್ರಮ ನಿರೂಪಿಸಿದರೆ, ಜಯಶ್ರೀ ವಂದಿಸಿದರು.



Related posts

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ

Mumbai News Desk

ಹೆಜಮಾಡಿ ಕೋಡಿಕರೆ ಬಿಲ್ಲವರ ಸಮಿತಿ – ವಿದ್ಯಾರ್ಥಿವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಉಡುಪಿ ಕೃಷ್ಣನಿಗೆ ‘ಪಾರ್ಥಸಾರಥಿ’ ಸುವರ್ಣ ರಥ ಸಮರ್ಪಣೆ

Mumbai News Desk

ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 16ನೇ ವರ್ಷದ ವಾರ್ಷಿಕೋತ್ಸವ

Mumbai News Desk

ಮೂಲ್ಕಿ ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ಕುಬೇವೂರು ಶ್ರೀ ಜಾರಂದಾಯ ದೇವಸ್ಥಾನದ ಅರ್ಚಕ ಶೇಖರ್ ಪೂಜಾರಿ ಅವರಿಗೆ ಗೌರವ

Mumbai News Desk

ಉಡುಪಿ: ಜಿಲ್ಲಾಡಳಿತದ ನಿಷೇಧಾಜ್ಞೆ ನಡುವೆಯೇ ಕಂಬಳ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

Mumbai News Desk