July 23, 2026
Mumbai News Kannada
ತುಳುನಾಡು

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.







ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಆಟಿ ದೊಂಜಿ ದಿನ ಕಾರ್ಯಕ್ರಮವು ನೆರವೇರಿತು. ಸುವರ್ಣ ರೆಸಿಡೆನ್ಸಿ ತಾರೆ ತೋಟ ಮಂಗಳೂರು ಇಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ಇವರು ಉದ್ಘಾಟಿಸಿ ಆಟಿದ ದಿನದ ವೈಶಿಷ್ಟತೆಯನ್ನು ತಿಳಿಸಿದರು, ಹಾಗೂ ಟ್ರಸ್ಟಿನ ಕಾರ್ಯ ವೈಕ್ಯರಿಯನ್ನು ಮೆಚ್ಚಿದರು.


ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ,ದೈಜಿವರ್ಲ್ಡ್ ಸಂಸ್ಥಾಪಕರಾದ ವಾಲ್ಟರ್ ನಂದಳಿಕೆ, ಕೇಶವ ಮರೋಲಿ, ಬಿಜೆಪಿಯ ಜಿಲ್ಲಾ ಕಾರ್ಯದರ್ಶಿ ಜಯಕುಮಾರ್, ಸುವರ್ಣ ರೆಸಿಡೆನ್ಸಿಯ ಅಧ್ಯಕ್ಷರಾದ ಯಡಿಪಡಿತಾಯ, ಉಪಸ್ಥಿದ್ದರು.
ಉಪಸ್ಥಿತರಿದ್ದ ಎಲ್ಲಾ ಅತಿಥಿಗಳಿಗೆ ತುಳುನಾಡಿನ ಸಾಂಪ್ರದಾಯಿಕ ಶೈಲಿಯಲ್ಲಿ ಸನ್ಮಾನಿಸಲಾಯಿತು. ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಕೋಟ್ಯಾನ್, ಟ್ರಸ್ಟಿಗಳಾದ ಕಲ್ಪನಾ ಕೋಟ್ಯಾನ್, ಲಕ್ಷ್ಮೀಶ ಕೋಟಿಯನ್, ಶೈನಿ ಮೂಲತ್ವ, ಅಕ್ಷತ ಕದ್ರಿ , ಟ್ರಸ್ಟಿನ ಎಲ್ಲಾ ಸದಸ್ಯರು, ಪರಿಸರದವರು ಭಾಗವಹಿಸಿದರು.ಕೊನೆಗೆ ಟ್ರಸ್ಟಿನ ಸದಸ್ಯರು ಆಟಿದ ದಿನದ ಸಾಂಪ್ರದಾಯಿಕ ಶೈಲಿಯ ಊಟ ಉಪಚಾರಗಳನ್ನು ಮಾಡಿ ಬಡಿಸಿದರು.
ಶೈನಿ ಮೂಲತ್ವ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು, ಮಮತಾ ಕಾರ್ಯಕ್ರಮ ನಿರೂಪಿಸಿದರೆ, ಜಯಶ್ರೀ ವಂದಿಸಿದರು.



Related posts

ಸಂಸ್ಕೃತಿ, ಬಾಂಧವ್ಯ ಮತ್ತು ಸಾಮರಸ್ಯದ ಸಂಗಮ: ಹೆಜಮಾಡಿಯಲ್ಲಿ ಕಳೆಗಟ್ಟಿದ ‘ಆಟಿಡೊಂಜಿ ದಿನ’ ಉತ್ಸವ

Mumbai News Desk

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ದಾರದ ನಿಮ್ಮಿತ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk

ಕಟಪಾಡಿ : ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ

Mumbai News Desk

ಮುಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ರಾಜ್ಯ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳ ಮನೆಗೆ ಭೇಟಿ: ಗೌರವ ಸಮರ್ಪಣೆ

Mumbai News Desk

ಬಂಟರ ಸಂಘ ಸುರತ್ಕಲ್ ನಿಂದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ

Mumbai News Desk