31.6 C
Mumbai
June 7, 2026
Mumbai News Kannada
ತುಳುನಾಡು

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ





ನಮ್ಮ ಹಿರಿಯರ ಕಾಲದ ಸಂಸ್ಕಾರ, ಸಂಸ್ಕೃತಿ ಹಾಗೂ ವಿಧಿ,ನಿಯಮಗಳನ್ನು ನೆನಪು ಮಾಡಿ ಜನರಿಗೆ ಹೇಳಿಕೊಂಡು ಮುಂದುವರಿದರೆ ಒಳ್ಳೆಯದೆಂದು ಆಟಿಯ ಒಂದು ದಿನದ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಮಂಗಳೂರು ಅಖಿಲ ಭಾರತ ಬಿಲ್ಲವರ ಯೂನಿಯನ್‌ನ ಅಧ್ಯಕ್ಷ ನವೀನ್ ಚಂದ್ರ ಡಿ ಸುವರ್ಣ ಹೇಳಿದರು. ಅವರು ಯುವವಾಹಿನಿ ಮೂಲ್ಕಿ ಘಟಕದ ಅಶ್ರಯದಲ್ಲಿ ನಡೆದ 23ನೇ ವರ್ಷದ ಆಟಿಡೊಂಜಿ ದಿನ
ಕಾರ್ಯಕ್ರಮದಲ್ಲಿ ಆಟಿಯ ತಮ್ಮನ, ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.


ಪುತ್ತೂರು ಅಕ್ಷಯ ಕಾಲೇಜಿನ ಮುಖ್ಯಸ್ಥ ಜಯಂತ್ ನಡುಬೈಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಆಟಿ ತಿಂಗಳನ್ನು ಯಾವ ರೀತಿಯಲ್ಲಿ ಕಳೆಯುತಿದ್ದರು ಎಂಬ ಬಗ್ಗೆ
ಮಾತನಾಡುತ್ತಾ ಪ್ರಕೃತಿಯಲ್ಲಿ ಸಿಗುವಂತಹ ಗೆಡ್ಡೆ ಗೆಣಸುಗಳನ್ನು ತಿಂದು ಹಾಗೂ ಗಿಡಮೂಲಿಕೆಯ ಮದ್ದುಗಳನ್ನು
ಸೇವಿಸಿ ನೆಮ್ಮದಿಯಲ್ಲಿ ಬದುಕುತ್ತಿದ್ದರು ಎಂದು ಹೇಳಿದರು
ಮುಖ್ಯ ಅತಿಥಿಯಾಗಿ ಭಾಷಣಕಾರರಾಗಿ ಜಾನಪದ ವಿದ್ವಾಂಸ ದಿನೇಶ್ ಸುವರ್ಣ ರಾಯಿ ಮಾತನಾಡುತ್ತಾ ತುಳುವರು ಆಟಿ ತಿಂಗಳನ್ನು ಧಾರ್ಮಿಕ ವಿಧಿ ವಿಧಾನಗಳಿಗೆ ಅನುಸಾರವಾಗಿ ಬಹಳ ಕಷ್ಟದ
ದಿನಗಳನ್ನು ಆ ಕಾಲದಲ್ಲಿ ಯಾವ ರೀತಿಯಲ್ಲಿ ಕಳೆಯುತ್ತಿದ್ದರು ಹಾಗೂ ಆಟಿ ತಿಂಗಳ ಬಗ್ಗೆ ಬೇರೆಬೇರೆ ಗಾದೆಗಳನ್ನು ಬಿಡಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


ಚಿತ್ರ ನಟ ಹಾಗೂ ನಿರ್ಮಾಪಕ ಶೋಧನ್ ಶೆಟ್ಟಿ
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್
ಕೋಟ್ಯಾನ್ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿನಯ ಕುಮಾರ್ ಮಟ್ಟು ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ಕೂಟದ ತಮೇರಿಯಾಗಿ ಮಾತನಾಡಿದರು. ನಿದೇರ್ಶಕಿ ಶಕೀಲಾ ಹರೀಂದ್ರ ಸುವರ್ಣ, ಕಾರ್ಯದರ್ಶಿ
ಪ್ರೇರಣಾ ಹಾಗೂ ಕೋಶಾಧಿಕಾರಿ ಪ್ರತ್ವಿಕ್ ಡಿ. ಕೋಟ್ಯಾನ್ ವೇದಿಕೆಯಲ್ಲಿದ್ದರು.
ಮಾಜಿ ಅಧ್ಯಕ್ಷ ವಿಜಯ ಕುಮಾರ್ ಕುಬೆವೂರು ಪ್ರಾಸ್ತಾವಿಸಿ ಉದಯ ಅಮೀನ್ ಮಟ್ಟು ನಿರೂಪಿಸಿದರು.



Related posts

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಿಮೆ ಸಾರುವ ವೀಡಿಯೋ ಆಲ್ಬಮ್ ಬಿಡುಗಡೆ

Mumbai News Desk

ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

Mumbai News Desk