32 C
Mumbai
March 7, 2026
Mumbai News Kannada
ಮುಂಬಯಿ

ಶ್ರೀ ಜಗದಂಬಾ ಮಂದಿರ ಡೊಂಬಿವಲಿ – ನಾಗರ ಪಂಚಮಿ ಆಚರಣೆ






ಡೊಂಬಿವಲಿಯ ತುಳು ಕನ್ನಡಿಗರಿಂದ ಸ್ಥಾಪಿಸಲ್ಪಟ್ಟ ಶ್ರೀ ಜಗದಂಬ ಮಂದಿರದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನಾಗರ ಪಂಚಮಿ ಪೂಜೆಯು ಮಂದಿರದ ಪ್ರದಾನ ಅರ್ಚಕರಾದ ಸುಬ್ರಹ್ಮಣ್ಯ ರಾವ್ ಭಟ್ ಮೀರಾ ರೋಡ್ ಹಾಗು ಜಗದೀಶ್ ಭಟ್ ರವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರಗಿತು.

ಬೆಳಿಗ್ಗೆ ಪ್ರಾತಃ ಕಾಲ ಶ್ರೀ ದೇವಿಗೆ ಅಭಿಷೇಕ, ನಿತ್ಯ ಪೂಜೆ ನಡೆದು 8.30 ರಿಂದ ನಾಗ ತನು, ಅಭಿಷೇಕ ಹಾಗು 11.30 ರಿಂದ ಆಶ್ಲೇಷ ಬಲಿ ಪೂಜೆ ನಡೆದು 12:30 ಗೆ ಮಹಾಮಂಗಳಾರತಿ ಬೆಳಗಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.

ಈ ಧಾರ್ಮಿಕ ಉತ್ಸವದಲ್ಲಿ ಮಂದಿರದ ಅಧ್ಯಕ್ಷರಾದ ದಿವಾಕರ್ ರೈ ದಂಪತಿಗಳು ಉಪಾಧ್ಯಕ್ಷರಾದ ರವೀಂದ್ರ ವೈ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಸಂತೋಷ್ ಶೆಟ್ಟಿ ದಂಪತಿಗಳು, ಜೊತೆ ಕೋಶಾಧಿಕಾರಿ ಹರೀಶ್ ಕೋಟ್ಯಾನ್, ಮಂದಿರದ ಸಲಹೆಗಾರರಾದ ಸತೀಶ್ ಶೆಟ್ಟಿ ಅಜೆಕಾರು ದಂಪತಿಗಳು, ಡೊಂಬಿವಲಿಯ ಸಮಾಜ ಸೇವಕ ಬಿಜೆಪಿ ಸೌತ್ ಸೇಲ್ ಅಧ್ಯಕ್ಷರಾದ ರತನ್ ಪೂಜಾರಿ, ಬಿಲ್ಲವರ ಅಸೋಸಿಯೇಷನ್ ಮುಂಬಯಿ ಯ ಕೋಶಾಧಿಕಾರಿ ರವಿ ಸನಿಲ್ ದಂಪತಿಗಳು, ಸಾಯಿನಾಥ್ ಮಿತ್ರ ಮಂಡಳಿಯ ಅಧ್ಯಕ್ಷರಾದ ಮೋಹನ್ ಸಾಲ್ಯಾನ್, ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿಯ ದಿನೇಶ್ ಮೊಗವೀರ, ಉದ್ಯಮಿ ಲಕ್ಷ್ಮಣ ಪೂಜಾರಿ, ಉದ್ಯಮಿ ರವಿ ಪೂಜಾರಿ ಹಾಗೂ ಅನೇಕ ಡೊಂಬಿವಲಿಯ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಂದಿರದ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರು ಸಹಕರಿಸಿದರು. ಹೆಚ್ಚಿನ ಭಕ್ತರು ಬಂದು ಪೂಜೆ ಹಾಗೂ ಅನ್ನಸಂರ್ಪಣೆ ಯಲ್ಲಿ ಪಾಲ್ಗೊಂಡರು.



Related posts

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅನನ್ಯ ರಾಜು ಪೂಜಾರಿ ಗೆ ಶೇ. 86.60 ಅಂಕ.

Mumbai News Desk

ಗೋರೆಗಾಂವ್: ಜಯ ಸುವರ್ಣ ನಿವಾಸದಲ್ಲಿ ಭಕ್ತಿ ಸಂಭ್ರಮದ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಧನ್ವೀ ಶ್ರೀಧರ್ ಕಾರ್ನಾಡ್ ಗೆ ಶೇ 93.20% ಅಂಕ.

Mumbai News Desk

ಗೋರೆಗಾಂವ್ ಪೂರ್ವ   ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ  59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ ಯಕ್ಷಗಾನ ಬಯಲಾಟ,

Mumbai News Desk

ಮದರ್ ಇಂಡಿಯಾ 19ನೇ ಈಸ್ಟ್ ಬಾಂಬೆ ಹಳೇ ವಿದ್ಯಾರ್ಥಿ ಸ್ಕೌಟ್ ಬಳಗದ 4ನೇ ವಾರ್ಷಿಕ ಸ್ನೇಹ ಸಮ್ಮಿಲನ.

Mumbai News Desk

ಗೊರೆಗಾಂವ್ ಪೂರ್ವ ನಿತ್ಯಾನಂದ ಆಶ್ರಮದಲ್ಲಿ ಉಚಿತ ವೈದ್ಯಕೀಯ ಶಿಬಿರ

Mumbai News Desk