
ಸಾಫಲ್ಯ ಸೇವಾ ಸಂಘದ ಮಹಿಳಾ ವಿಭಾಗದ ಆಯೋಜನೆಯಲ್ಲಿ ಆಟಿಡ್ ಒಂಜಿ ದಿನ ಕಾರ್ಯಕ್ರಮವು ರವಿವಾರ ತಾ. 03/08/2025 ರಂದು ಮಧ್ಯಾಹ್ನ ಗಂಟೆ 2 ರಿಂದ ಕುರ್ಲಾ (ಪೂ)ದಲ್ಲಿರುವ ಬಂಟರ ಸಂಘದ ಅನೆಕ್ಸ್ ಹಾಲಿನಲ್ಲಿ ನಡೆಯಲಿದೆ.
ಸಭಾ ಸಮಾರಂಭವು ಮಹಿಳಾ ವಿಭಾಗದ ಅಧ್ಯಕ್ಷೆ ಲಕ್ಷ್ಮೀ ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅತಿಥಿಗಳಾಗಿ ಉದ್ಯಮಿ ಚೇತನ ವಿಜಯ ಅಮೀನ್, ಸಂಘದ ಹಿರಿಯ ಸದಸ್ಯ ಶಾರದಾ ಹೆಜಮಾಡಿ, ಲೇಖಕಿ ಸರ್ವಮಂಗಳ ಎನ್ ಶೆಟ್ಟಿ, ಶಿಕ್ಷಕಿ ದೀಪ ಹರೀಶ್ ಶೆಟ್ಟಿ ಇವರುಗಳು ಆಗಮಿಸಲಿದ್ದಾರೆ.
ಮಹಿಳಾ ವಿಭಾಗದ ಅಧ್ಯಕ್ಷೆ ಲಕ್ಷ್ಮೀ ಮೆಂಡನ್, ಮಹಿಳಾ ವಿಭಾಗದ ಸದಸ್ಯೆಯರು, ಆಡಳಿತ ಸಮಿತಿ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸಮಾರಂಭವು ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಪ್ರಾರಂಭಗೊಳ್ಳಲಿದೆ.
ಅಂದು ಆಷಾಢ ಮಾಸದ ವಿಶೇಷ ಖಾದ್ಯ ಪದಾರ್ಥಗಳ ಸ್ಪರ್ಧೆ, ತ್ಯಾಜ್ಯ ನಿರ್ವಹಣೆ ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದ್ದು ಈ ವಿಶೇಷ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ಸಾಫಲ್ಯ ಸೇವಾ ಸಂಘದ ಅಧ್ಯಕ್ಷರಾದ ಶ್ರೀನಿವಾಸ ಸಾಫಲ್ಯ, ಉಪಾಧ್ಯಕ್ಷರಾದ ಕುಮಾರ್ ಬಂಗೇರ, ಗೌ. ಪ್ರ. ಕಾರ್ಯದರ್ಶಿ ಭಾಸ್ಕರ್ ಸಪಳಿಗ, ಕೋಶಾಧಿಕಾರಿ ಹೇಮಂತ್ ಸಪಳಿಗ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲಕ್ಷ್ಮೀ ಮೆಂಡನ್ ಮತ್ತು ಪದಾಧಿಕಾರಿಗಳು, ಯುವ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ಪುತ್ರನ್ ಮತ್ತು ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.




