30.5 C
Mumbai
June 8, 2026
Mumbai News Kannada
ಮುಂಬಯಿ

ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ , ವರ್ಲಿ : ಮಹಿಳಾ ವಿಭಾಗದ ವತಿಯಿಂದ ಆಟಿದ ಕೂಟ.ಆಟಿದ ಕೂಟದ  ಮೂಲಕ ಸಂಬಂಧಗಳು ಗಟ್ಟಿಯಾಗುತ್ತದೆ – ರಮೇಶ್ ಗುರುಸ್ವಾಮಿ





ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಅಪ್ಪಾಜಿ ಬೀಡು, ವರ್ಲಿಯ, ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ವಿಭಾಗ ವತಿಯಿಂದ
ತುಳುನಾಡ ಸಂಸ್ಕೃತಿದ ಆಟಿದ ಕೂಟ ಕಾರ್ಯಕ್ರಮ ಜು28 ರಂದು ನಡೆಯಿತು.
   ಸಮಿತಿಯ  ಸದಸ್ಯರಿಂದ ಸಂಜೆ  ಭಜನೆ, ಬಳಿಕ ಆರತಿ ನಡೆಯಿತು.  ಪೂಜಾ ವಿಧಿಗಳು ನಡೆದ ಬಳಿಕಆಟಿದ ಕೂಟ  ಬಗ್ಗೆ ಫೌಂಡೇಶನ್ ನ  ಟ್ರಸ್ಟಿ ರಘುನಾಥ್ ಎನ್ ಶೆಟ್ಟಿ ಮಾತನಾಡಿ ಹಿಂದೆ  ತುಳುನಾಡಿನಲ್ಲಿ ನಮ್ಮವರು ಆಚರಿಸಿಕೊಂಡು ಬರುತ್ತಿದ್ದ ಆಚರಣೆಗಳು, ವಿಚಾರಗಳು, ಅಂದಿನ ತಿಂಡಿ ತಿನಿಸುಗಳು ತಿಳಿಸುತ್ತಾ ಯುವ ಸಮುದಾಯ ಇದನ್ನೆಲ್ಲ ತಿಳಿಸುವುದಕ್ಕೆ ಸಂಘ ಸಂಸ್ಥೆಗಳು ಇಂಥ ಕಾರ್ಯಕ್ರಮಗಳನ್ನು ಆಚರಿಸ್ಕೊಂಡು ಬರುತ್ತಿದೆ ಎಂದು ತಿಳಿಸಿದರು, 

ಫೌಂಡೇಶನ್ ನ ಸಂಸ್ಥಾಪಕ ರಮೇಶ್ ಗುರುಸ್ವಾಮಿ ಪಡುಬಿದ್ರಿ  ಮಾತನಾಡುತ್ತಾ ಮಹಿಳೆಯರು ಧಾರ್ಮಿಕತೆಯೊಂದಿಗೆ ಸಾಮಾಜಿಕ ಸೇವೆಗಳನ್ನು ಮಾಡುತ್ತಾ ವರ್ಷಕ್ಕೆ ಒಂದು ಸರಿಯಾದರೂ ತಮ್ಮ ಮನೆಯಲ್ಲಿ ಮಾಡಿದ ಸವಿಯಾದ ರುಚಿ ರುಚಿಯಾದ ತಿಂಡಿ ತಿನಿಸುಗಳನ್ನು ಎಲ್ಲರಿಗೂ ನೀಡುವ ಉದ್ದೇಶದಿಂದ ಈ ಕೂಟ ಆಯೋಜಿಸಿದರೆ, ಬಹಳ ಅರ್ಥಪೂರ್ಣವಾಗಿದೆ. ಮುಂದಿನ ಯುವ ಪೀಳಿಗೆಗೆ ಆದರ್ಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ, ಆಡಳಿತ ಮಂಡಳಿ ಪದಾಧಿಕಾರಿಗಳು ಸದಸ್ಯರು ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ವಿಭಾಗ  ಕಾರ್ಯಾಧ್ಯಕ್ಷೆ ಕವಿತಾ ಶೆಟ್ಟಿ ಸ್ವಾಗತಿಸಿದರು. ಉಪಕಾರ್ಯಧ್ಯಕ್ಷೆ ದಿವ್ಯ  ಪಿ. ಶೆಟ್ಟಿ ತಿಂಡಿ ತಿನಿಸುಗಳನ್ನು ಮಾಡಿ ತಂದಿರುವ ಮಹಿಳಾ ಸದಸ್ಯರ ಹೆಸರನ್ನು ವಾಚಿಸಿದರು. ಮಹಿಳಾ ಸದಸ್ಯರು ಮತ್ತು ರಮೇಶ್ ಗುರುಸ್ವಾಮಿ ಎಲ್ಲರಿಗೂ ಉಡುಗೊರೆಯನ್ನು ನೀಡಿ ಗೌರವಿಸಿದರು.



Related posts

ದಿ. ಕರ್ನಾಟಕ ಕೋಆಪರೇಟಿವ್ ಕ್ರೆಡಿಟ್ ಸೊಸೈಟಿ 28ನೇ ವಾರ್ಷಿಕ ಮಹಾಸಭೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಸೆ. 5 ರಂದು ಜರಗಿದ 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ ಸಮಾರಂಭದಲ್ಲಿ ಕರ್ನಾಟಕದ ಸ್ಪೀಕರ್ ಯು. ಟಿ. ಖಾದರ್ ಅವರ ಮನದಾಳದ ನುಡಿ

Mumbai News Desk

ವಸಾಯಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ವಿಶ್ವನಾಥ್ ಪಿ.ಶೆಟ್ಟಿ, ಅಧ್ಯಕ್ಷರಾಗಿ ದೇವೇಂದ್ರ ಬುನ್ನನ್

Mumbai News Desk

ಬಂಟ್ಸ್ ಫೋರಮ್ ಮೀರಾ ಭಾಯಂದರ್ ವತಿಯಿಂದ ‘ಆಟಿಡೊಂಜಿ ದಿನ’ ಆಚರಣೆ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ದೇವಿಕಾ ಸುರೇಶ್ ಪೂಜಾರಿ ಗೆ ಶೇ 92% ಅಂಕ.

Mumbai News Desk