30.5 C
Mumbai
June 8, 2026
Mumbai News Kannada
ತುಳುನಾಡು

ಪಡುಬಿದ್ರಿ ನಡಿಪಟ್ಣದಲ್ಲಿ ಮೀನುಗಾರರಿಂದ ಸಮುದ್ರ ಪೂಜೆ





ಮಳೆಗಾಲದ ವಿರಾಮದ ನಂತರ ಮೀನುಗಾರಿಕೆ ಚಟುವಟಿಕೆಗಳನ್ನು ಪುನರಾರಂಭಿಸುವ ಮೊದಲು ಮೀನುಗಾರರು ಸಮುದ್ರ ಪೂಜೆ ಸಲ್ಲಿಸುವುದು ವಾಡಿಕೆಯಾಗಿದೆ.
ಅದರಂತೆ ಇಂದು (ಆಗಸ್ಟ್ 9) ಶನಿವಾರ, ಬೆಳಿಗ್ಗೆ ಪಡುಬಿದ್ರಿ ನಡಿಪಟ್ಣದಲ್ಲಿಸಮುದ್ರಕ್ಕೆ ದನದ ಹಾಲು ಮತ್ತು ತೆಂಗಿನಕಾಯಿಯನ್ನು ಅರ್ಪಿಸುವ ಮೂಲಕ ಸಮುದ್ರ ಪೂಜೆ ನಡೆಸಲಾಯಿತು. ಇದು ಪ್ರತಿ ವರ್ಷ ಮಳೆಗಾಲ ಮುಗಿದು ಸಮುದ್ರದಲ್ಲಿ ಮೀನು ಹಿಡಿಯುವ ಮುನ್ನ ಮಾಡುವ ದೇವತಾ ಕಾರ್ಯ.


ಶ್ರೀ ವಿಷ್ಣು ಮಂದಿರ ನಡಿಪಟ್ಣ ಇದರ ಅರ್ಚಕರಾದ ಸತೀಶ್ ಮೆಂಡನ್, ಶ್ರೀ ವಿಷ್ಣು ದೇವರಿಗೆ ,ವಾಯುದೇವರಿಗೆ ಪೂಜೆಯನ್ನು ಸಲ್ಲಿಸಿ, ಸಮುದ್ರ ಕಿನಾರೆಗೆ ತೆರಳಿ, ಅಲ್ಲಿ ಪ್ರಸ್ತುತ ಅಧ್ಯಕ್ಷರಾದ ಹರೀಶ್ ಪುತ್ರನ್ ದೀಪ ಪ್ರಜ್ವಲಿಸಿದರೆ ,ಮಾಜಿ ಅಧ್ಯಕ್ಷರಾದ ಗಂಗಾಧರ್ ಕರ್ಕೇರ ಸಮುದ್ರ ಪೂಜೆ ಮಾಡುವ ಉದ್ದೇಶದ ಬಗ್ಗೆ ವಿಸ್ತಾರವಾಗಿ ಮುಂದಿನ ಜನಾಂಗಕ್ಕೆ ತಿಳಿಯ ಹೇಳಿದರು.
ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಕಾಂಚನ್ ,ಕಾಡಿಪಟ್ಣ ನಡಿಪಟ್ಣ ವಿದ್ಯಾ ಪ್ರಚಾರಕ ಸಂಘದ ಅಧ್ಯಕ್ಷರಾದ ಸುಕುಮಾರ್ ಶ್ರೀಯಾನ್,ವಿಜಯ ಬ್ಯಾಂಕ್ ನ ಮಾಜಿ ಉದ್ಯೋಗಿ ಕೆ ಎನ್ ಚಂದ್ರಶೇಖರ್ಹಾಗೂ ಕಾರ್ಯಕರ್ತರು, ಸದಸ್ಯರು ಉಪಸ್ಥಿತರಿದ್ದರು.
ಪ್ರತಿ ವರ್ಷ ಋಗುಪಕರ್ಮ ದಿನದಂದು ಮೀನುಗಾರರು ಮತ್ಸ್ಯ ಸಂಪತ್ತು ವೃದ್ಧಿ, ಮೀನುಗಾರಿಕೆಯಲ್ಲಿ ಯಶಸ್ಸು, ಹಾಗೂ ಸುರಕ್ಷತೆಗಾಗಿ ಸಮುದ್ರಕ್ಕೆ ಪೂಜೆ ಸಲ್ಲಿಸಿ ಪ್ರಾರ್ಥಿಸುವುದು, ಮೀನುಗಾರ ಸಮುದಾಯದಲ್ಲಿ ಒಂದು ಸಾಂಪ್ರದಾಯವಾಗಿದೆ.



Related posts

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಉಡುಪಿ ಕೃಷ್ಣನಿಗೆ ‘ಪಾರ್ಥಸಾರಥಿ’ ಸುವರ್ಣ ರಥ ಸಮರ್ಪಣೆ

Mumbai News Desk

ಮುಲ್ಕಿ ಅರಸು ಕಂಬಳದಲ್ಲಿ ಗುತ್ತಿನಾರ್ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ :

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

Mumbai News Desk

ಸಾಲ್ಯಾನ್ ಮೂಲಸ್ಥಾನ ಕದಿಕೆ, ಹಳೆಯಂಗಡಿ – ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ.

Mumbai News Desk