30 C
Mumbai
April 24, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ರಾಯರ ಆರಾಧನೆ





 ಮುಂಬಯಿ ಆ 12.ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿಯಲ್ಲಿರುವ ಪೇಜಾವರ ಮಠದಲ್ಲಿ  ಶ್ರೀರಾಘವೇಂದ್ರ ಗುರು ಸ್ವಾಮಿಗಳ   354ನೇ ಆರಾಧನಾ ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು,

 ಶ್ರೀ ವಿಶ್ವೇಶ ತೀರ್ಥ ಸಭಾಗೃಹದಲ್ಲಿ  ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಆದೇಶ, ಮಾರ್ಗದರ್ಶನದಂತೆ  ಪಂಚಾಮೃತ ಅಭಿಷೇಕ, ಅಷ್ಟೋತ್ತರ ಪಾರಾಯಣ, ರಾಯರ ಪ್ರವಚನ, ಭಗವದ್ಗೀತಾ ಪಾಠ, ಆಲಂಕಾರ ಸೇವೆಯನ್ನು ಮಠದ ಮುಖ್ಯ ಪ್ರಬಂಧಕರಾದ  ರಾಮದಾಸ ಉಪಾಧ್ಯಾಯ ರೆಂಜಾಳ ನಡೆಸಿದರು,

 ಬೆಳಿಗ್ಗೆ ಶ್ರೀಕೃಷ್ಣನ ಸನ್ನಿಧಾನದಲ್ಲಿ ಪೂಜೆನೆರವೇರಿಸಿ ಬಳಿಕ  ಶ್ರೀರಾಘವೇಂದ್ರ ಗುರುಗಳಿಗೆ ವಿಶೇಷ ಪೂಜೆಯೊಂದಿಗೆ ನಡೆಯಿತು.

ಆನಂತರ ಭಕ್ತರಿಗೆ ರಾಘವೇಂದ್ರ ಸ್ವಾಮಿಗಳ ಬಗ್ಗೆ ಧಾರ್ಮಿಕ ಪ್ರವಚನವನ್ನು ರಾಮದಾಸ ಉಪಾಧ್ಯಾಯ ನೀಡಿದರು,

ಪೇಜಾವರ ಮಠದ ಮದ್ದೇಶ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು,

ಕಾರ್ಯಕ್ರಮದಲ್ಲಿ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಅವಿನಾಶ್ ಶಾಸ್ತ್ರಿ ಮತ್ತಿತರ ಪದಾಧಿಕಾರಿಗಳು, ಶ್ರೀ ಪೇಜಾವರ ಮಠ ಮುಂಬಯಿ ಪ್ರಬಂಧಕರಾದ ಶ್ರೀಹರಿ ಭಟ್ ಪುತ್ತಿಗೆ ಮತ್ತು ನಿರಂಜನ್ ಗೋಗಟೆ, ಆರ್ಚಕರಾದ . ಪವನಕುಮಾ‌ರ್ ವಿಷ್ಣುತೀರ್ಥ ಸಾಲಿ, , ಪ್ರವೀಣ್ ಜೋಶಿ, ಶ್ರೀನಿವಾಸ ಭಟ್ ಪರೇಲ್ ಸೇರಿದಂತೆ ಸಹ ಪುರೋಹಿತರು, ಸದಸ್ಯರು ಹಾಗೂ ಭಕ್ತರನೇಕರು ಉಪಸ್ಥಿತರಿದ್ದು ರಾಯರ ಆರಾಧನೆಗೈದರು.

B. Dinesh Kulal

Mob.: 9821868674



Related posts

ಮುಂಬಯಿ: ನಾನಿಲ್ತಾರ್ ಅಭಿಮಾನಿ ಬಳಗದಿಂದ ಸಂಭ್ರಮದ ‘ಅರಿಶಿನ ಕುಂಕುಮ’ ಕಾರ್ಯಕ್ರಮ

Mumbai News Desk

ಬಂಟರ ಸಂಘ ಮುಂಬಯಿ – ವಸಯಿ ಡಹಣು ಪ್ರಾದೇಶಿಕ ಸಮಿತಿಯ ವತಿಯಿಂದ ವಿಶ್ವ ಯೋಗ ದಿನಾಚರಣೆ. 

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ತನಿಶ್ ಕಿರೋಡಿಯನ್ ಗೆ ಶೇ 88 ಅಂಕ.

Mumbai News Desk

ವಿದ್ಯಾದಾಯಿನಿ ಸಭಾ ಮುಂಬಯಿ – ಶತ ಸಂಭ್ರಮದ ಉದ್ಘಾಟನೆ.

Mumbai News Desk

ಬಂಟರ ಸಂಘ ಮುಂಬಯಿ ವಸಾಯಿ ದಹಾಣ ಪ್ರಾದೇಶಿಕ ಸಮಿತಿ ಯಿಂದ.ಸಮಾಜದ ಅರ್ಥಿಕವಾಗಿ ಹಿಂದುಳಿದ ಪರಿವಾರ ಮತ್ತು ವಿದ್ಯಾರ್ಥಿಗಳೀಗೆ 2025-26 ಸಾಲಿನ ಆರ್ಥಿಕ ಸಹಾಯ ವಿತರಣೆ.

Mumbai News Desk

ಎಸ್ ಎಸ್ ಸಿ ಯಲ್ಲಿ ಅದಿತಿ ಆರ್ ಶೆಟ್ಟಿ ಯವರಿಗೆ ಶೇಕಡಾ 96.20 ಅಂಕ

Mumbai News Desk