July 23, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ರಾಯರ ಆರಾಧನೆ







 ಮುಂಬಯಿ ಆ 12.ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿಯಲ್ಲಿರುವ ಪೇಜಾವರ ಮಠದಲ್ಲಿ  ಶ್ರೀರಾಘವೇಂದ್ರ ಗುರು ಸ್ವಾಮಿಗಳ   354ನೇ ಆರಾಧನಾ ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು,

 ಶ್ರೀ ವಿಶ್ವೇಶ ತೀರ್ಥ ಸಭಾಗೃಹದಲ್ಲಿ  ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಆದೇಶ, ಮಾರ್ಗದರ್ಶನದಂತೆ  ಪಂಚಾಮೃತ ಅಭಿಷೇಕ, ಅಷ್ಟೋತ್ತರ ಪಾರಾಯಣ, ರಾಯರ ಪ್ರವಚನ, ಭಗವದ್ಗೀತಾ ಪಾಠ, ಆಲಂಕಾರ ಸೇವೆಯನ್ನು ಮಠದ ಮುಖ್ಯ ಪ್ರಬಂಧಕರಾದ  ರಾಮದಾಸ ಉಪಾಧ್ಯಾಯ ರೆಂಜಾಳ ನಡೆಸಿದರು,

 ಬೆಳಿಗ್ಗೆ ಶ್ರೀಕೃಷ್ಣನ ಸನ್ನಿಧಾನದಲ್ಲಿ ಪೂಜೆನೆರವೇರಿಸಿ ಬಳಿಕ  ಶ್ರೀರಾಘವೇಂದ್ರ ಗುರುಗಳಿಗೆ ವಿಶೇಷ ಪೂಜೆಯೊಂದಿಗೆ ನಡೆಯಿತು.

ಆನಂತರ ಭಕ್ತರಿಗೆ ರಾಘವೇಂದ್ರ ಸ್ವಾಮಿಗಳ ಬಗ್ಗೆ ಧಾರ್ಮಿಕ ಪ್ರವಚನವನ್ನು ರಾಮದಾಸ ಉಪಾಧ್ಯಾಯ ನೀಡಿದರು,

ಪೇಜಾವರ ಮಠದ ಮದ್ದೇಶ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು,

ಕಾರ್ಯಕ್ರಮದಲ್ಲಿ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಅವಿನಾಶ್ ಶಾಸ್ತ್ರಿ ಮತ್ತಿತರ ಪದಾಧಿಕಾರಿಗಳು, ಶ್ರೀ ಪೇಜಾವರ ಮಠ ಮುಂಬಯಿ ಪ್ರಬಂಧಕರಾದ ಶ್ರೀಹರಿ ಭಟ್ ಪುತ್ತಿಗೆ ಮತ್ತು ನಿರಂಜನ್ ಗೋಗಟೆ, ಆರ್ಚಕರಾದ . ಪವನಕುಮಾ‌ರ್ ವಿಷ್ಣುತೀರ್ಥ ಸಾಲಿ, , ಪ್ರವೀಣ್ ಜೋಶಿ, ಶ್ರೀನಿವಾಸ ಭಟ್ ಪರೇಲ್ ಸೇರಿದಂತೆ ಸಹ ಪುರೋಹಿತರು, ಸದಸ್ಯರು ಹಾಗೂ ಭಕ್ತರನೇಕರು ಉಪಸ್ಥಿತರಿದ್ದು ರಾಯರ ಆರಾಧನೆಗೈದರು.

B. Dinesh Kulal

Mob.: 9821868674



Related posts

ಕನ್ನಡ ಕಲಾ ಸಮಾಜ ಕೋಟೆ ಮುಂಬಯಿ : ವಾರ್ಷಿಕ ಸ್ನೇಹ ಸಮ್ಮಿಲನ ಒಕ್ಕೂಟ ಸಭೆ

Mumbai News Desk

ದಹಿಸರ್ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದಲ್ಲಿ 40ನೇ ವಾರ್ಷಿಕ ಮಹಾಪೂಜಾ ಮಹೋತ್ಸವ (ಬಲಿ ಉತ್ಸವ, ಸಾಧಕರಿಗೆ ಸನ್ಮಾನ, ಯಕ್ಷಗಾನ ಪ್ರದರ್ಶನ)

Mumbai News Desk

ಮುಂಬೈ ನಿವಾಸಿಗಳಿಗೆ ಗುಡ್ ನ್ಯೂಸ್: 2016 ಕ್ಕಿಂತ ಹಳೆಯ ಕಟ್ಟಡಗಳಿಗೆ ‘OC’ ನೀಡಲು ಮಹಾನಗರ ಪಾಲಿಕೆ ನಿರ್ಧಾರ

Mumbai News Desk

ಬಿಎಂಸಿ ಚುನಾವಣೆ 2026: ಮುಂಬೈ ಮಹಾಸಮರಕ್ಕೆ ಕ್ಷಣಗಣನೆ; ನಾಳೆ ಮತದಾನ

Mumbai News Desk

ಬಿಲ್ಲವರ ಎಸೋಸಿಯೇಶನ್‌ನಿಂದ ‘ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆ’ಗೆ ಚಾಲನೆ

Mumbai News Desk

ಕಲಾತಂತ್ರ ಪ್ರೊಡಕ್ಷನ್ ಲೋಕಾರ್ಪಣೆ : ಜು. 28ರಂದು ‘ತುಡರ್’ ತುಳು ಚಿತ್ರ ಬಿಡುಗಡೆ.

Mumbai News Desk