September 6, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ರಾಯರ ಆರಾಧನೆ





 ಮುಂಬಯಿ ಆ 12.ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿಯಲ್ಲಿರುವ ಪೇಜಾವರ ಮಠದಲ್ಲಿ  ಶ್ರೀರಾಘವೇಂದ್ರ ಗುರು ಸ್ವಾಮಿಗಳ   354ನೇ ಆರಾಧನಾ ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು,

 ಶ್ರೀ ವಿಶ್ವೇಶ ತೀರ್ಥ ಸಭಾಗೃಹದಲ್ಲಿ  ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಆದೇಶ, ಮಾರ್ಗದರ್ಶನದಂತೆ  ಪಂಚಾಮೃತ ಅಭಿಷೇಕ, ಅಷ್ಟೋತ್ತರ ಪಾರಾಯಣ, ರಾಯರ ಪ್ರವಚನ, ಭಗವದ್ಗೀತಾ ಪಾಠ, ಆಲಂಕಾರ ಸೇವೆಯನ್ನು ಮಠದ ಮುಖ್ಯ ಪ್ರಬಂಧಕರಾದ  ರಾಮದಾಸ ಉಪಾಧ್ಯಾಯ ರೆಂಜಾಳ ನಡೆಸಿದರು,

 ಬೆಳಿಗ್ಗೆ ಶ್ರೀಕೃಷ್ಣನ ಸನ್ನಿಧಾನದಲ್ಲಿ ಪೂಜೆನೆರವೇರಿಸಿ ಬಳಿಕ  ಶ್ರೀರಾಘವೇಂದ್ರ ಗುರುಗಳಿಗೆ ವಿಶೇಷ ಪೂಜೆಯೊಂದಿಗೆ ನಡೆಯಿತು.

ಆನಂತರ ಭಕ್ತರಿಗೆ ರಾಘವೇಂದ್ರ ಸ್ವಾಮಿಗಳ ಬಗ್ಗೆ ಧಾರ್ಮಿಕ ಪ್ರವಚನವನ್ನು ರಾಮದಾಸ ಉಪಾಧ್ಯಾಯ ನೀಡಿದರು,

ಪೇಜಾವರ ಮಠದ ಮದ್ದೇಶ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು,

ಕಾರ್ಯಕ್ರಮದಲ್ಲಿ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಅವಿನಾಶ್ ಶಾಸ್ತ್ರಿ ಮತ್ತಿತರ ಪದಾಧಿಕಾರಿಗಳು, ಶ್ರೀ ಪೇಜಾವರ ಮಠ ಮುಂಬಯಿ ಪ್ರಬಂಧಕರಾದ ಶ್ರೀಹರಿ ಭಟ್ ಪುತ್ತಿಗೆ ಮತ್ತು ನಿರಂಜನ್ ಗೋಗಟೆ, ಆರ್ಚಕರಾದ . ಪವನಕುಮಾ‌ರ್ ವಿಷ್ಣುತೀರ್ಥ ಸಾಲಿ, , ಪ್ರವೀಣ್ ಜೋಶಿ, ಶ್ರೀನಿವಾಸ ಭಟ್ ಪರೇಲ್ ಸೇರಿದಂತೆ ಸಹ ಪುರೋಹಿತರು, ಸದಸ್ಯರು ಹಾಗೂ ಭಕ್ತರನೇಕರು ಉಪಸ್ಥಿತರಿದ್ದು ರಾಯರ ಆರಾಧನೆಗೈದರು.

B. Dinesh Kulal

Mob.: 9821868674



Related posts

ನವಿ ಮುಂಬೈ ವಿಮಾನ ನಿಲ್ದಾಣ : ಡಿಸೆಂಬರ್ 25 ರಿಂದ ಕಾರ್ಯಾಚರಣೆ ಆರಂಭ

Mumbai News Desk

ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಸರಣಿ ತಾಳಮದ್ದಳೆಯ 11ನೇ ಪ್ರಸ್ತುತಿ; ಸನ್ಮಾನ

Mumbai News Desk

ಮುಂಬಾಯಿ ಮೊಗವೀರ ಮಹಾ ಸಭೆ ಹಾಗೂ ಮಹಿಳಾ ಮಂಡಳಿ ವತಿಯಿಂದ “ ಆಟಿದ ಒಂಜಿ ಕೂಟ” ಹಾಗೂ “ಅಭಿನಂದನಾ ಕಾರ್ಯಕ್ರಮ”

Mumbai News Desk

ಗೊರೆಗಾಂವ್ ಪೂರ್ವ ನಿತ್ಯಾನಂದ ಆಶ್ರಮದಲ್ಲಿ ಉಚಿತ ವೈದ್ಯಕೀಯ ಶಿಬಿರ

Mumbai News Desk

ಕುಮಾರಕ್ಷತ್ರಿಯ ಸಂಘ ವಾರ್ಷಿಕ ಸ್ನೇಹ ಸಮ್ಮಿಲನ, ಧಾರ್ಮಿಕ ಕಾರ್ಯಕ್ರಮ.

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ (ರಿ ) ಮಹಿಳಾ ವಿಭಾಗದ ವತಿಯಿಂದ ಖಾರ್ ಘರ್ ನಲ್ಲಿರುವ ಗಿರಿಜಾ ವೆಲ್ಫೇರ್ ಅನಾಥಾಶ್ರಮಕ್ಕೆ ಭೇಟಿ

Mumbai News Desk