September 6, 2026
Mumbai News Kannada
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸಾನ್ ನಗರ ಥಾಣೆ ಆಗಸ್ಟ್ 17ರಂದು 19ನೇ ವಾರ್ಷಿಕ ರಕ್ತದಾನ ಶಿಬಿರ





ಥಾಣೆ ಪಶ್ಚಿಮ ಕಿಸಾನ್ ನಗರದ ಶ್ರೀ ಅಯ್ಯಪ್ಪ ಸೇವಾ ಸಮಿತಿಯು 25 ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದು, ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪ್ರಸಿದ್ಧಿಯನ್ನು ಪಡೆದ ಈ ಸಂಸ್ಥೆಯು ಸಮಾಜಪರ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದು, ಕಳೆದ 18 ವರ್ಷಗಳಿಂದ ಸತತವಾಗಿ ರಕ್ತದಾನ ಶಿಬಿರವನ್ನು ಆಯೋಜಿಸುತ್ತಾ ಬಂದಿದೆ.
19ನೇ ವರ್ಷದ ರಕ್ತದಾನ ಶಿಬಿರವು ಆಗಸ್ಟ್ 17ರ ರವಿವಾರದಂದು ಬೆಳಿಗ್ಗೆ 9:00ಗಂಟೆಯಿಂದ ಸಾಯಂಕಾಲ 4 ಗಂಟೆತನಕ, ಕಿಸನ್ ನಗರ ನಂ. 1, ಮುನ್ಸಿಪಲ್ ಮೈದಾನದ ಹತ್ತಿರದ ಓಧವ್ ಬಾಗ್ ಹಾಲ್ ನಲ್ಲಿ ನಡೆಯಲಿದೆ.
ಕೇವಲ ಮುಂಬೈ ಮತ್ತು ಥಾಣೆ ಈ ಎರಡು ಜಿಲ್ಲೆಗಲ್ಲಿಯೇ ಥಲಲ್ಸೇಮಿಯ ಮೇಜರ್ ( Thalassemia Major )ಎಂಬ ರಕ್ತದ ಕೊರತೆಯಿಂದ ಆಗುವ ಕಾಯಿಲೆಯಿಂದ ಸಾವಿರಾರು ಮಂದಿ ಬಳಲುತ್ತಿದ್ದಾರೆ. ಅವರಿಗೆ ಸರಾಸರಿ 21 ದಿನಗಳ ಅಂತರದಲ್ಲಿ ರಕ್ತ ನೀಡಬೇಕಾಗುತ್ತದೆ. ರಕ್ತದ ಕೊರತೆಯಾದಲ್ಲಿ ಪ್ರಾಣಕ್ಕೆ ಅಪಾಯವಿರುತ್ತದೆ . ಮುಲುಂಡ್ ಮತ್ತು ಥಾಣೆ ಪರಿಸರದ ಖ್ಯಾತ ಶಿಶು ಸದ್ಯ ಡಾ. ಸತ್ಯಪ್ರಕಾಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮತ್ತು ಸಾರ್ವಜನಿಕ ಮಕ್ಕಳ ಮತ್ತು ಪರಿಸರದ ಕಲ್ಯಾಣ ಚಟುವಟಿಕೆಗಳಿಗೆ ಸ್ವಯಂಪ್ರೇರಿತ ಸಂಸ್ಥೆಯಾದ ಥಿಂಕ್ ಫೌಂಡೇಶನ್ ಸಂಸ್ಥೆಯ ಉಪಾಧ್ಯಕ್ಷ ವಿನಯ್ ಶೆಟ್ಟಿ ಅವರ ಸಹಕಾರದೊಂದಿಗೆ ಶ್ರೀ ಅಯ್ಯಪ್ಪ ಸೇವಾ ಸಮಿತಿ ಆಯೋಜಿಸುತ್ತಿರುವ ರಕ್ತದಾನ ಶಿಬರದಲ್ಲಿ ರಕ್ತದಾನಿಗಳು ಪಾಲ್ಗೊಂಡು ಸಹಕರಿಸಬೇಕಾಗಿ ಸಮಿತಿಯ ಅಧ್ಯಕ್ಷ ಜಯರಾಮ್ ಪೂಜಾರಿ ಮತ್ತು ಪದಾಧಿಕಾರಿಗಳು, ಸದಸ್ಯರು ವಿನಂತಿಸಿಕೊಂಡಿದ್ದಾರೆ.
ಹೆಚ್ಚಿನ ವಿವರಗಳಿಗೆ : 7021869714/ 7498169626 ಸಂಪರ್ಕಿಸಬಹುದು.



Related posts

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ : ಮೀರಾ ಭಾಯಂದರ್ ಶಾಖೆಯ ವತಿಯಿಂದ ಜನೆವರಿ 18ರಂದು ‘ಕ್ರೀಡಾಕೂಟ – 2026’

Mumbai News Desk

ದಹಿಸರ್ ಪೂರ್ವ, ರಾವಲ್ಪಾಡ: ಶ್ರೀ ಶನೀಶ್ವರ ಚಾಮುಂಡೇಶ್ವರಿ ಮಂದಿರದಲ್ಲಿ ಆ. 22ರಂದು 27ನೇ ವರ್ಷದ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಏಪ್ರಿಲ್ 1 ರಿಂದ 8 ರವರೆಗೆ ಜಾತ್ರೆ; ಏಪ್ರಿಲ್ 7 ರಂದು ರಥೋತ್ಸವ

Mumbai News Desk

ಡಿ. 03. ಥಾಣೆಯಲ್ಲಿ ಪ್ರಸಾದ್ ಪೂಜಾರಿ ಕಲ್ಯಾ ಇವರ ಸೇವೆಯಲ್ಲಿ ಮಂತ್ರ ದೇವತೆಯ 6ನೇ ವಾರ್ಷಿಕ ಪೂಜೆ ಹಾಗೂ ನೇಮೋತ್ಸವ

Mumbai News Desk

ಡಿ. 29. ಕನಕದಾಸ ಜಯಂತಿ, ಕುವೆಂಪು ಜಯಂತಿ ಗೌರವಾರ್ಥ,ಕರ್ನಾಟಕ ರಾಜ್ಯೋತ್ಸವ ಸಂಭ್ರಮ – ಕರುನಾಡ ಡಿಂಡಿಮ – 2024.

Mumbai News Desk

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk