
ಮುಂಬಯಿ.ಅ.16:ಭಾಯಂದರ್ ಪೂರ್ವ ನವಘರ್ ಪೋಲೀಸ್ ಸ್ಟೇಷನ್ ಬದಿಯ ನ್ಯೂ ಅಂಕಿತಾ ಅಪಾರ್ಟ್ಮೆಂಟ್ ನಲ್ಲಿರುವ ಅಯ್ಯಪ್ಪ ಆರಾಧನಾ ಭಕ್ತ ಮಂಡಲದಲ್ಲಿ ಆರಾಧ್ಯ ದೇವರುಗಳ ರಜತ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಆದಿತ್ಯವಾರ ಅ.17ರಂದು ಕಾಶಿ ಗಾಂವ್ ಮಹಾಲಿಂಗೇಶ್ವರ ಮಂದಿರದ ಪ್ರಧಾನ ಅರ್ಚಕರಾದ ಸಾಣೂರು ಸಾಂತಿಂಜ ಜನಾರ್ಧನ ಭಟ್ ಅವರ ಪೌರೋಹಿತ್ಯದಲ್ಲಿ ನಡೆಯಲಿದೆ. ಬೆಳಿಗ್ಗೆ 6 ಗಂಟೆಗೆ ಗಣಹೋಮ ನಡೆದು ರಜತ ಬಿಂಬ ಪ್ರತಿಷ್ಟಾಪನೆ ನಡೆಯಲಿದೆ. 10.30 ಗಂಟೆಗೆ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಲಿದ್ದು ತದನಂತರ ಆರಾಧನಾ ಹಾಗೂ ಆಮಂತ್ರಿತ ಭಜನಾ ಮಂಡಳಿಗಳಿಂದ ಭಜನೆ, ಪ್ರಸಾದ ವಿತರಣೆ ನಡೆಯಲಿದೆ. ಸುದೇಶ್ ಶೆಟ್ಟಿ, ರಾಜೇಶ್ ಶೆಟ್ಟಿ ತೆಳ್ಳಾರು ಕಡಪುಲಾಜೆ ಪರಿವಾರದವರ ವತಿಯಿಂದ ಅನ್ನಸಂತರ್ಪಣೆ ನಡೆಯಲಿದ್ದು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಅಯ್ಯಪ್ಪ ಭಕ್ತರು ಭಾಗವಹಿಸಿ ಅಯ್ಯಪ್ಪ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಮಂಡಲದ ಗುರುಸ್ವಾಮಿ ಸುಧಾಕರ್ ಜಿ.ಪೂಜಾರಿ, ಗೌರವಾಧ್ಯಕ್ಷರುಗಳಾದ ಪ್ರಮೋದ್ ಕೆ.ಕೋಟ್ಯಾನ್, ರವಿಕಾಂತ್ ಶೆಟ್ಟಿ ಇನ್ನ, ಅಶೋಕ್ ಎನ್.ಶೆಟ್ಟಿ, ಅಧ್ಯಕ್ಷ ಸುಕೇಶ್ ಶೆಟ್ಟಿ, ಉಪಾಧ್ಯಕ್ಷ ಉದಯ ಹೆಗ್ಡೆ, ಕಾರ್ಯದರ್ಶಿ ನವೀನ್ ಕೆ.ಸುವರ್ಣ, ಜೊತೆ ಕಾರ್ಯದರ್ಶಿ ನಿತಿನ್ ಜಿ.ಶೆಟ್ಟಿ, ಕೋಶಾಧಿಕಾರಿ ನವೀನ್ ಶೆಟ್ಟಿ, ಜೊತೆ ಕೋಶಾಧಿಕಾರಿ ನಾರಾಯಣ ಸುವರ್ಣ, ಪೂಜಾ ಸಮಿತಿಯ ಕಾರ್ಯಾಧ್ಯಕ್ಷ ಉದಯ ಸುವರ್ಣ, ಆರಾಧನಾ ಫ್ರೆಂಡ್ಸ್ ನ ಕಾರ್ಯಾಧ್ಯಕ್ಷೆ ಪ್ರೇಮಾ ಮಾಧವ ಹೆಗ್ಡೆ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ




