30.9 C
Mumbai
June 8, 2026
Mumbai News Kannada
ಪ್ರಕಟಣೆ

ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ.ಅ.17ರಂದು ಪೂಜಾ ದೇವರುಗಳ ರಜತ ಬಿಂಬ ಪ್ರತಿಷ್ಟಾಪನೆ, ಸತ್ಯನಾರಾಯಣ ಪೂಜೆ





ಮುಂಬಯಿ.ಅ.16:ಭಾಯಂದರ್ ಪೂರ್ವ ನವಘರ್ ಪೋಲೀಸ್ ಸ್ಟೇಷನ್ ಬದಿಯ ನ್ಯೂ ಅಂಕಿತಾ ಅಪಾರ್ಟ್ಮೆಂಟ್ ನಲ್ಲಿರುವ ಅಯ್ಯಪ್ಪ ಆರಾಧನಾ ಭಕ್ತ ಮಂಡಲದಲ್ಲಿ ಆರಾಧ್ಯ ದೇವರುಗಳ ರಜತ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಆದಿತ್ಯವಾರ ಅ.17ರಂದು ಕಾಶಿ ಗಾಂವ್ ಮಹಾಲಿಂಗೇಶ್ವರ ಮಂದಿರದ ಪ್ರಧಾನ ಅರ್ಚಕರಾದ ಸಾಣೂರು ಸಾಂತಿಂಜ ಜನಾರ್ಧನ ಭಟ್ ಅವರ ಪೌರೋಹಿತ್ಯದಲ್ಲಿ ನಡೆಯಲಿದೆ. ಬೆಳಿಗ್ಗೆ 6 ಗಂಟೆಗೆ ಗಣಹೋಮ ನಡೆದು ರಜತ ಬಿಂಬ ಪ್ರತಿಷ್ಟಾಪನೆ ನಡೆಯಲಿದೆ. 10.30 ಗಂಟೆಗೆ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಲಿದ್ದು ತದನಂತರ ಆರಾಧನಾ ಹಾಗೂ ಆಮಂತ್ರಿತ ಭಜನಾ ಮಂಡಳಿಗಳಿಂದ ಭಜನೆ, ಪ್ರಸಾದ ವಿತರಣೆ ನಡೆಯಲಿದೆ. ಸುದೇಶ್ ಶೆಟ್ಟಿ, ರಾಜೇಶ್ ಶೆಟ್ಟಿ ತೆಳ್ಳಾರು ಕಡಪುಲಾಜೆ ಪರಿವಾರದವರ ವತಿಯಿಂದ ಅನ್ನಸಂತರ್ಪಣೆ ನಡೆಯಲಿದ್ದು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಅಯ್ಯಪ್ಪ ಭಕ್ತರು ಭಾಗವಹಿಸಿ ಅಯ್ಯಪ್ಪ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಮಂಡಲದ ಗುರುಸ್ವಾಮಿ ಸುಧಾಕರ್ ಜಿ.ಪೂಜಾರಿ, ಗೌರವಾಧ್ಯಕ್ಷರುಗಳಾದ ಪ್ರಮೋದ್ ಕೆ.ಕೋಟ್ಯಾನ್, ರವಿಕಾಂತ್ ಶೆಟ್ಟಿ ಇನ್ನ, ಅಶೋಕ್ ಎನ್.ಶೆಟ್ಟಿ, ಅಧ್ಯಕ್ಷ ಸುಕೇಶ್ ಶೆಟ್ಟಿ, ಉಪಾಧ್ಯಕ್ಷ ಉದಯ ಹೆಗ್ಡೆ, ಕಾರ್ಯದರ್ಶಿ ನವೀನ್ ಕೆ.ಸುವರ್ಣ, ಜೊತೆ ಕಾರ್ಯದರ್ಶಿ ನಿತಿನ್ ಜಿ.ಶೆಟ್ಟಿ, ಕೋಶಾಧಿಕಾರಿ ನವೀನ್ ಶೆಟ್ಟಿ, ಜೊತೆ ಕೋಶಾಧಿಕಾರಿ ನಾರಾಯಣ ಸುವರ್ಣ, ಪೂಜಾ ಸಮಿತಿಯ ಕಾರ್ಯಾಧ್ಯಕ್ಷ ಉದಯ ಸುವರ್ಣ, ಆರಾಧನಾ ಫ್ರೆಂಡ್ಸ್ ನ ಕಾರ್ಯಾಧ್ಯಕ್ಷೆ ಪ್ರೇಮಾ ಮಾಧವ ಹೆಗ್ಡೆ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ



Related posts

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk

ಡಿ.10 ರಂದು ಕರ್ನಾಟಕ ಸಂಘ, ಡೊಂಬಿವಲಿಯ ನಾಡಹಬ್ಬ ಸಮಾರಂಭ

Mumbai News Desk

ಐತಿಹಾಸಿಕ ಕಾಪು ಪಿಲಿ ಕೋಲ: ಮೇ 16 ರಂದು ಕರಾವಳಿಯ ವಿಶಿಷ್ಟ ಪ್ರಕೃತಿ ಆರಾಧನೆ

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಫಲಿಮಾರು : ಮೇ. 3ರಿಂದ ಮೇ 9ರ ತನಕ ನಾಗದೇವರಿಗೆ ಅಶ್ಲೇಷ ಬಲಿ, ನೂತನ ಗೋಪುರ ಸಮರ್ಪಣೆ, ನಾಗದೇವರ ಧರ್ಮದೈವಗಳ ವಾರ್ಷಿಕ ಉತ್ಸವ, ಧರ್ಮದೈವಗಳ ನೇಮೋತ್ಸವ.

Mumbai News Desk

ಒಕ್ಕಲಿಗರ ಸಂಘ ಮಹಾರಾಷ್ಟ್ರ: ಜ. 18ರಂದು ಸಂಕ್ರಾಂತಿ ಸಂಭ್ರಮ .

Mumbai News Desk

ಆಗಸ್ಟ್ 2 ಥಾಣೆಯಲ್ಲಿ : ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬೈ ಮತ್ತು ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ ಇದರ ಜಂಟಿ ಆಯೋಜನೆಯಲ್ಲಿ “ರಾಮ ದರ್ಶನ- ಗದಾಯುದ್ಧ” ಯಕ್ಷಗಾನ ಪ್ರದರ್ಶನ.

Mumbai News Desk