28.4 C
Mumbai
March 7, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬಾಯಿ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ.





ಬಿಲ್ಲವರ ಅಸೋಸಿಯೇಷನ್ ಮುಂಬಾಯಿ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯು ಬಹಳ ವಿಜೃಂಭಣೆಯಿಂದ ವಿವಿಧ ಕಾರ್ಯಕ್ರಮದೊಂದಿಗೆ ಜರಗಿತು.


ಪ್ರಾರಂಭದಲ್ಲಿ ಅರ್ಚಕರಾದ ಈಶ್ವರ್ ಕೋಟ್ಯಾನ್ ಅವರಿಂದ ಗುರು ಪೂಜೆ ನೆರವೇರಿತು, ತದ ನಂತರ ರಾಧಾಕೃಷ್ಣ ಶನೀಶ್ವರ ದೇವಸ್ಥಾನದ ಅಧ್ಯಕ್ಷರಾದ ಶ್ರೀಯುತ ಸೋಮನಾಥ್ ಪೂಜಾರಿ ಇವರು ಮುಖ್ಯ ಅಥಿತಿಯಾಗಿ ಆಗಮಿಸಿ ರಾಷ್ಟ್ರ ಧ್ವಜಾರೋಹಣ ಮಾಡಿ ರಾಷ್ಟ್ರ ಧ್ವಜಕ್ಕೆ ಗೌರವಾರ್ಪಣೆ ಮಾಡಿದರು.
ತದ ನಂತರ ಜರಗಿದ ಸಭಾಕಾರ್ಯಕ್ರದ ಅಧ್ಯಕ್ಷತೆಯನ್ನು ಸ್ಥಳೀಯ ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಬಿ ಅಮೀನ್ ವಹಿಸಿದರು. ಮುಖ್ಯ ಅಥಿತಿಯಾದ ಸೋಮನಾಥ್ ಪೂಜಾರಿ , ಹಿರಿಯರಾದ ದೇವರಾಜ್ ಪೂಜಾರಿ, ರಾಜು ಪೂಜಾರಿ, ಪುರಂದರ ಪೂಜಾರಿ, ಮೋನಪ್ಪ ಕೋಟ್ಯಾನ್, ಮತ್ತು ಜಗನ್ನಾಥ ಸನಿಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾನ್ವಿ ಕೋಟ್ಯಾನ್ ಮತ್ತು ಲಿಖಿತ ಅಮೀನ್ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಯುವ ವಿಭಾಗ, ಮಹಿಳಾ ವಿಭಾಗ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ದೇಶ ಭಕ್ತಿಗೀತೆ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಮಾತಾಡಿದರು.


ಮುಖ್ಯ ಅತಿಥಿಯಾಗಿ ಆಗಮಿಸಿದ ಸೋಮನಾಥ ಪೂಜಾರಿಯವರು ಮಾತನಾಡುತ್ತಾ ಮಕ್ಕಳ ಮಾತಾಪಿತರು ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆ ಮತ್ತು ಧರ್ಮ, ದೈವ ದೇವರ ಬಗ್ಗೆ ಮನವರಿಕೆ ಮಾಡಬೇಕು ಇದರಿಂದ ಉತ್ತಮ ನಾಗರಿಕರಾಗಲು ಸಾಧ್ಯ ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ ಶ್ರೀಧರ್ ಬಿ ಅಮೀನ್ ರವರು ಮಾತನಾಡುತ್ತಾ ನಾವೆಲ್ಲರೂ ಭಾರತಾಂಬೆಯ ಮಕ್ಕಳು ಗುರುಗಳ ತತ್ವವನ್ನು ಅನುಸರಿಸಿ ಬಾಳಬೇಕು ಎಂದು ನೋಡಿದರು.
ಗೌರವ ಕಾರ್ಯದರ್ಶಿ ಜೆ ಜೆ ಕೋಟ್ಯಾನ್ ರವರು ಪ್ರಾಸ್ತವಿಕವಾಗಿ ಮಾತನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಜೊತೆ ಕಾರ್ಯದರ್ಶಿ ವಿಠಲ್ ಪಿ ಅಮೀನ್ ರವರು ವಂದಿಸಿದರು.



Related posts

39ನೇ ವಾರ್ಷಿಕ ಮಹಾಸಭೆ – ಶ್ರೀ ಶನಿ ಮಹಾತ್ಮ ಸೇವಾ ಸಮಿತಿಯ ಸಂಚಾಲಕತ್ವದಲ್ಲಿರುವ ಶ್ರೀ ದುರ್ಗಾಪರಮೇಶ್ವರೀ- ಶನೀ ಶ್ವರ ದೇವಸ್ಥಾನ, ರಾವಲ್ಪಾಡ, ದಹಿಸರ್ : ಅಧ್ಯಕ್ಷರಾಗಿ ಸಂತೋಷ್ ಪೂಜಾರಿ

Mumbai News Desk

ಕುಲಾಲ ಪರ್ಬ  ಮುಂಬೈಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ.

Mumbai News Desk

ಸಾಂತಾಕ್ರೂಸ್ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆ ಸಂಪನ್ನ,

Mumbai News Desk

ಸದ್ಗುರು ಅನಿರುದ್ಧ ಕನ್ನಡ ಉಪಾಸನಾ ಕೇಂದ್ರದ ಧಾರ್ಮಿಕ ಪ್ರವಾಸ.

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಮಲಾಡ್ ಪೂರ್ವದ ತುಳು  ಕನ್ನಡಿಗರ ಮನೆ ಮನೆಯಲ್ಲಿ ರಾಮ ನಾಮಸ್ಮರಣೆ

Mumbai News Desk

ಡೊಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ ಮಹಾಶಿವರಾತ್ರಿ ಉತ್ಸವ

Mumbai News Desk