September 6, 2026
Mumbai News Kannada
ಪ್ರಕಟಣೆ

ಆಗಸ್ಟ್ 22 ರಂದು ಭಾರತ್ ಬ್ಯಾಂಕಿನ 49ನೇ ವಾರ್ಷಿಕ ಮಹಾಸಭೆ





ಮಹಾರಾಷ್ಟ್ರ , ಕರ್ನಾಟಕ ಮತ್ತು ಗುಜರಾತ್ ನಲ್ಲಿ ನೂರಕ್ಕಿಂತ ಹೆಚ್ಚು ಶಾಖೆ ಹೊಂದಿರುವ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಮುಂಬಯಿ ಲಿ. ನ 49ನೇ ವಾರ್ಷಿಕ ಮಹಾಸಭೆ ಆಗಸ್ಟ್ 22 ರಂದು ಬೆಳಗ್ಗೆ 10 ರಿಂದ ಗೋರೆಗಾಂವ್ ಪೂರ್ವದ ಬ್ರಿಜ್ವಾಸಿ ಪ್ಯಾಲೇಸ್ ಹಾಲ್‌ನಲ್ಲಿ ನಡೆಯಲಿದೆ.

ಮುಂಬಯಿ ಮಹಾನಗರದಲ್ಲಿ ಭಾರತ್ ಬ್ಯಾಂಕ್ ಎಂದು ಕರೆಯಲ್ಪಡುವ ಬ್ಯಾಂಕ್ 21ಆಗಸ್ಟ್ 1978 ರಂದು ಸ್ಥಾಪನೆಗೊಂಡಿದೆ. ಕಳೆದ 4 ದಶಕಗಳಿಂದ ಮಹಾರಾಷ್ಟ್ರ ಸಹಿತ ಕರ್ನಾಟಕ ಮತ್ತು ಗುಜರಾತ್ ರಾಜ್ಯಗಳಲ್ಲಿ ಸೇವೆ ಒದಗಿಸುತ್ತ ಬರುತ್ತಿದೆ.

ಭಾರತ್‌ ಬ್ಯಾಂಕ್‌ ಗ್ರಾಹಕ ಸ್ನೇಹಿ ಬ್ಯಾಂಕ್ ಆಗಿ ಪ್ರಸಿದ್ಧಿ ಪಡೆದಿದೆ. ಅದರ ಪ್ರೀಮಿಯಂ ಠೇವಣಿ ಖಾತೆಗಳು ಮತ್ತು ಉದ್ಯಮಿಗಳಿಗೆ ಅನುಗುಣವಾಗಿ ಸಾಲಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ. ಭಾರತ್ ಬ್ಯಾಂಕ್ ವಿದೇಶಿ ವಿನಿಮಯ ವ್ಯವಹಾರ ಮಾಡುವ ಕೆಲವೇ ಕೆಲವು ಸಹಕಾರಿ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ವರ್ಗ ಒಂದರ ಅಧಿಕೃತ ಡೀಲರ್ ಆಗಿ ಪ್ರಸಿದ್ದಿ ಪಡೆದಿದೆ.

ಭಾರತ್ ಬ್ಯಾಂಕಿನ ಹೆಚ್ಚಿನ ಶಾಖೆಗಳ ಕಟ್ಟಡ ಬ್ಯಾಂಕಿನ ಮಾಲಕತ್ವದ್ದಾಗಿರುವುದು ಮತ್ತೊಂದು ವಿಶೇಷತೆಯಾಗಿದೆ.

ಪ್ರಸ್ತುತ ಕಾರ್ಯಾಧ್ಯಕ್ಷ ಶ್ರೀ ಸೂರ್ಯಕಾಂತ್ ಜಯ ಸುವರ್ಣರ ನೇತೃತ್ವದಲ್ಲಿ ಭಾರತ್ ಬ್ಯಾಂಕನ್ನು ವೃತ್ತಿಪರವಾಗಿ ಬ್ಯಾಂಕಿಂಗ್ ಮತ್ತು ಇತರ ಕ್ಷೇತ್ರಗಳಲ್ಲಿ ಪರಿಣಿತರನ್ನು ಒಳಗೊಂಡ ಸಮರ್ಥ ನಿರ್ದೇಶಕರ ಮಂಡಳಿ ಮತ್ತು ಬೋರ್ಡ್ ಆಫ್ ಮ್ಯಾನೇಜ್ಮೆಂಟ್ ನಿರ್ವಹಿಸುತ್ತಿದೆ. ಇದು ಬ್ಯಾಂಕನ್ನು ಅಭಿವೃದ್ಧಿಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ತನ್ನ ಗ್ರಾಹಕರ ಮತ್ತು ಷೇರುದಾರರ ಅಚಲ ವಿಶ್ವಾಸ ಬ್ಯಾಂಕಿನ ಯಶಸ್ಸಿಗೆ ಮುಖ್ಯ ಕಾರಣವಾಗಿದೆ.

70 ಕ್ಕಿಂತ ಹೆಚ್ಚು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಭಾರತ್ ಬ್ಯಾಂಕ್ ಪಡೆದಿರುತದೆ.



Related posts

ಸೆ. 15 ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್ ಡೊಂಬಿವಲಿಯ ಉದ್ಘಾಟನಾ ಕಾರ್ಯಕ್ರಮ.

Mumbai News Desk

ಸೆ.7: ಸಾಫಲ್ಯ ಸೇವಾ ಸಂಘ, ಮುಂಬೈ – ವಿದ್ಯಾರ್ಥಿ ಸಹಾಯಧನ, ಮಹಿಳೆಯರಿಗೆ ಘರ್‌ಘಂಟಿ ವಿತರಣೆ ಹಾಗೂ ನಾನಾ ಸಮಾಜಮುಖಿ ಕಾರ್ಯಕ್ರಮಗಳು

Mumbai News Desk

ವಿದ್ಯಾವಿಹಾರ್ ದೇವಸ್ಥಾನದಲ್ಲಿ ನಾಳೆ (ಮಾರ್ಚ್ 15) ‘ಶ್ರೀ ರಾಮ ವನಗಮನ’ ತಾಳಮದ್ದಳೆ: ಇಬ್ಬರು ಹಿರಿಯ ಕಲಾವಿದರಿಗೆ ಸನ್ಮಾನ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಜ13:   ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನದ ಕಾರ್ಯಕರ್ತರ ಅಭಿನಂದನೆ ಮಹಾಸಭೆ

Mumbai News Desk

ಉದ್ಯಾವರ ಶ್ರೀ ಭಗವತಿ ಕ್ಷೇತ್ರ ಮಂಜೇಶ್ವರ : ಡಿ. 14ರಿಂದ 17ರ ತನಕ ನಡಾವಳಿ ಮಹೋತ್ಸವ ಹಾಗೂ ಭೇಟಿ ಉತ್ಸವ

Mumbai News Desk