September 6, 2026
Mumbai News Kannada
ಸುದ್ದಿ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ





ಸೌಜನ್ಯ ಪರ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಉಡುಪಿಯ ಬ್ರಹ್ಮಾವರ ಪೊಲೀಸರು ಬೆಳ್ತಂಗಡಿಗೆ ಆಗಮಿಸಿ  ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆಪಡೆದಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ದಾಖಲಾದ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯಲಾಗಿದೆ.  ಎಎಸ್ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಅರೆಸ್ಟ್​ ಮಾಡಿ ಕರೆದುಕೊಂಡು ಹೋಗಿದ್ದಾರೆ.
ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಉಡುಪಿಯಿಂದ ಭಾರೀ ಬಂದೋಬಸ್ತ್ ನೊಂದಿಗೆ ಆಗಮಿಸಿದ ಪೊಲೀಸರು ಉಜಿರೆ ಸಮೀಪದ ಮನೆಯಿಂದ ತಿಮರೋಡಿ ಅವರನ್ನು ವಶಕ್ಕೆ ಪಡೆದುಕೊಂಡರು. ಉಡುಪಿ ಜಿಲ್ಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ . ಈ ವೇಳೆ ಮಾತನಾಡಿದ ತಿಮರೋಡಿ, ಸುಳ್ಳು ಕೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ. ಬಿಜೆಪಿಯವರ ಸುಳ್ಳು ದಾಖಲೆ. ಬಿಜೆಪಿಯವರ ಪಾಪದ ಕೂಸು, ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ. ಸ್ಟೇಷನ್ ನಲ್ಲಿ ಪೊಲೀಸ್ರಿಗೆ ಹೇಳಿಕೆ ಕೊಡುತ್ತೇನೆ. ಸರಿಯಾದ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದ್ದಾರೆ. ಖಾಸಗಿ ವಾಹನದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹೋಗಿದ್ದು, ಇವರಿಗೆ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಕೂಡಾ ಸಾಥ್ ನೀಡಿದ್ದಾರೆ.

ತಿಮರೋಡಿ ಮೇಲೆ ಫೇಸ್​​ಬುಕ್​ ಪೇಜ್​ನಲ್ಲಿ ಬಿ.ಎಲ್ .ಸಂತೋಷ್ ಅವರನ್ನು ತೇಜೋವಧೆ ಮಾಡಿದ ಆರೋಪ ಇದೆ. ಅಲ್ಲದೇ ಹಿಂದೂ ಧರ್ಮದ ನಾಯಕನ ನಿಂದನೆ ಮಾಡಿ ಧರ್ಮ ಸಮುದಾಯಗಳ ನಡುವೆ ವೈಮನಸ್ಸಿನ ಉಂಟು ಮಾಡಿದ ಹಿನ್ನೆಲೆ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಎಂಬುವರು ದೂರು ದಾಖಲಿಸಿದ್ದರು. ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಯುಎಸ್​ 196(1), 352, 353 (2), ಬಿಎನ್​ಎಸ್​ನಂತೆ ಪ್ರಕರಣ ದಾಖಲು ಮಾಡಲಾಗಿದೆ.



Related posts

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk

ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಕಾರ್ಕಳದ ಪ್ರತಿಭೆ ಸಿಂಚನ್ ಎ. ಪೂಜಾರಿ ಆಯ್ಕೆ: ಕರ್ನಾಟಕಕ್ಕೆ ಹೆಮ್ಮೆಯ ಗೌರವ

Mumbai News Desk

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ರಂಗಸಾರಥಿ ಶ್ರೀವಿಶ್ವನಾಥ್ ಶೆಟ್ಟಿ ಅಯ್ಕೆ

Mumbai News Desk

ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿ ಬೆಹರೈನ್ ನಲ್ಲಿ 10 ನೇ ವಿಶ್ವ ದಾಖಲೆ.

Mumbai News Desk

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 58 ನೇ ಆರ್ ಎನ್ ಉಚ್ಚಿಲ್ ಸ್ಮಾರಕ ವಾರ್ಷಿಕ ಅಥ್ಲೆಟಿಕ್ಸ್ ಮೀಟ್

Mumbai News Desk