September 6, 2026
Mumbai News Kannada
ಕರ್ನಾಟಕ

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ. ಶಿವಕುಮಾರ್ – ನಂತರ ಸ್ಪಷ್ಟನೆ !





ಬೆಂಗಳೂರು, ಆ.22 –
ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ಘಟನೆ ಇಂದು ವಿಧಾನಸಭೆಯಲ್ಲಿ ನಡೆಯಿತು. ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಕಸ್ಮಿಕವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಸಿದ್ಧ ಗೀತೆ “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಅನ್ನು ಹಾಡಿದರು.

ಸಭಾ ವಾತಾವರಣದಲ್ಲಿ ಈ ಅಪ್ರತೀಕ್ಷಿತ ಹಾಡು ಎಲ್ಲರ ಗಮನ ಸೆಳೆಯಿತು. ಕೆಲವೇ ಕ್ಷಣಗಳಲ್ಲಿ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಯಿತು.

ಆದರೆ, ಈ ಬಗ್ಗೆ ತಕ್ಷಣವೇ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ತಮ್ಮ ನಡೆಗೆ ರಾಜಕೀಯ ಅರ್ಥ ಹುಡುಕಬಾರದು ಎಂದು ಸ್ಪಷ್ಟನೆ ನೀಡಿದರು.
“ನಾನು ಹುಟ್ಟಿನಿಂದಲೂ ಕಾಂಗ್ರೆಸ್ ಕಾರ್ಯಕರ್ತ. ಪ್ರತಿಪಕ್ಷ ಸಂಘಟನೆಗಳ ಕಾರ್ಯಪದ್ದತಿ, ಶಿಸ್ತು ಹಾಗೂ ಗೀತೆಗಳನ್ನು ತಿಳಿದುಕೊಳ್ಳುವುದು ಅಧ್ಯಯನದ ಭಾಗ. ಅದಕ್ಕೆ ಮಾತ್ರ ನಾನು ಆ ಗೀತೆ ಹಾಡಿದೆ. ನನ್ನ ರಾಜಕೀಯ ನಿಷ್ಠೆ ಕಾಂಗ್ರೆಸ್‌ಗೇ” ಎಂದು ಅವರು ಸ್ಪಷ್ಟಪಡಿಸಿದರು.

ಈ ಘಟನೆಯ ನಂತರ ಕಾಂಗ್ರೆಸ್ ಪಕ್ಷದ ಒಳಗೂ ಹೊರಗೂ ಚರ್ಚೆಗಳು ಜೋರಾಗಿದ್ದು, ವಿರೋಧ ಪಕ್ಷಗಳು ಇದನ್ನು ರಾಜಕೀಯ ದ್ವಂದ್ವದ ಸಾಕ್ಷಿ ಎಂದು ವ್ಯಾಖ್ಯಾನಿಸುತ್ತಿವೆ. ಆದರೆ ಶಿವಕುಮಾರ್ ಅವರ ಸ್ಪಷ್ಟೀಕರಣವು ಗೊಂದಲಕ್ಕೆ ಕಡಿವಾಣ ಹಾಕುವ ಪ್ರಯತ್ನ ಮಾಡಿದೆ.



Related posts

ಮೊಟ್ಟ ಮೊದಲ ಬಾರಿಗೆ ಶ್ರೀ ರಾಘವೇಂದ್ರ ಮಹಿಮೆ ಯಕ್ಷಗಾನ ರೂಪಕದಲ್ಲಿ

Mumbai News Desk

ಕರ್ನಾಟಕ SSLC ಫಲಿತಾಂಶ 2026 ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ದ್ವಿತೀಯ ಮತ್ತು ಕಲಬುರಗಿ ಕೊನೆಯ ಸ್ಥಾನ

Mumbai News Desk

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

Mumbai News Desk

ಸಚಿವ ಡಿ. ಸುಧಾಕರ್ ನಿಧನ: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖಿಕ ಸಚಿವ ಇನ್ನಿಲ್ಲ

Mumbai News Desk

ಬಸ್ ಸಂಚಾರ ಸ್ಥಗಿತ: ಪಳ್ಳಿ-ನಿಂಜೂರು ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

Mumbai News Desk

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ ರಾಜ್ಯ ಸರ್ಕಾರದ ಗಮನಕ್ಕೆ

Mumbai News Desk