30.9 C
Mumbai
June 8, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ : ಕುರ್ಲಾ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ






ಸಹಕಾರಿ ಸಂಘದ ಜನಪ್ರಿಯ ಬ್ಯಾಂಕುಗಳಲ್ಲಿ ಒಂದಾದ ಭಾರತ್ ಬ್ಯಾಂಕ್‌ನ ಎಲ್.ಬಿ.ಎಸ್. ಮಾರ್ಗ, ಕಾಮಾನಿ, ಕುರ್ಲಾ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಶಾಖೆಯ 12ನೇ ವಾರ್ಷಿಕೋತ್ಸವವನ್ನು ಭವ್ಯವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕ್‌ನ ಗ್ರಾಹಕರು, ಉದ್ಯಮಿಗಳು ಹಾಗೂ ಗಣ್ಯರಾದ ಅಡ್ವೊಕೆಟ್ ಎಸ್. ಕೆ. ದುಬೆಜ್, ವಿಜಯಕುಮಾರ್ ಪಾಲ್, ನವೀನ್ ಪೂಜಾರಿ, ಶಿಂಮ್ಶನ್ ಗಾಲ್ಸುರ್ಕರ್, ಸಂತೋಷ ಸಲೂಂಕೆ, ರತ್ನಾಕರ್ ಶೆಟ್ಟಿ ಮತ್ತು ಸಾದಿಕ್ ಶೇಖ್‌ರವರು ಉಪಸ್ಥಿತರಿದ್ದರು.

ಜ್ಞಾನ ಮತ್ತು ಸಮೃದ್ಧಿಯ ಪ್ರತೀಕವಾದ ದೀಪವನ್ನು ಬೆಳಗಿಸಿ, ನಂತರ ಕೇಕ್‌ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬ್ಯಾಂಕ್‌ ಪ್ರಬಂಧಕರು ಹಾಗೂ ಸಿಬ್ಬಂದಿಗಳ ಸೇವೆಯನ್ನು ಶ್ಲಾಘಿಸಿ, ಎಲ್ಲರಿಗೂ ಶುಭಾಶಯ ಕೋರಲಾಯಿತು.

ಶಾಖಾ ಪ್ರಬಂಧಕ ಮೋಹನದಾಸ್ ಪೂಜಾರಿ ಸ್ವಾಗತಿಸಿದರು. ಉಪಪ್ರಬಂಧಕಿ ಆಶಾ ಆರ್. ಕೋಟ್ಯಾನ್ ಹಾಗೂ ಇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.




Related posts

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅರುಷಿ ಕರುಣಾಕರ ಸುವರ್ಣ ಗೆ ಶೇ.91.60 ಅಂಕ.

Mumbai News Desk

ಮುಂಬಯಿಯಲ್ಲಿ “ಕುಲಾಲ ಭವನ ಮಂಗಳೂರು” ಲೋಕಾರ್ಪಣೆ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಗೋರೆಗಾಂವ್ ಶ್ರೀ ಶಾಂತಾ ದುರ್ಗಾದೇವಿ ದೇವಸ್ಥಾನ -ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ .

Mumbai News Desk

ಅಖಿಲ ಕರ್ನಾಟಕ ಜೈನ ಸಂಘದ ವತಿಯಿಂದ ಸಾಮೂಹಿಕ ಕರ್ಮ ದಹನ ಆರಾಧನಾ ಮಹೋತ್ಸವ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ನಲಾಸೋಪಾರ – ವಿರಾರ್  ಸ್ಥಳೀಯ ಸಮಿತಿಯ ಅರಸಿನ ಕುಂಕುಮ ಕಾರ್ಯಕ್ರಮ 

Mumbai News Desk

ಮುಂಬಯಿಯ  ಕುಲಾಲ ಸಂಘದ ಯುವ ವಿಭಾಗದವತಿಯಿಂದ ಕ್ರೀಡೋತ್ಸವ, ಬಹುಮಾನ ವಿತರಣೆ

Mumbai News Desk