July 23, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ : ಕುರ್ಲಾ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ








ಸಹಕಾರಿ ಸಂಘದ ಜನಪ್ರಿಯ ಬ್ಯಾಂಕುಗಳಲ್ಲಿ ಒಂದಾದ ಭಾರತ್ ಬ್ಯಾಂಕ್‌ನ ಎಲ್.ಬಿ.ಎಸ್. ಮಾರ್ಗ, ಕಾಮಾನಿ, ಕುರ್ಲಾ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಶಾಖೆಯ 12ನೇ ವಾರ್ಷಿಕೋತ್ಸವವನ್ನು ಭವ್ಯವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕ್‌ನ ಗ್ರಾಹಕರು, ಉದ್ಯಮಿಗಳು ಹಾಗೂ ಗಣ್ಯರಾದ ಅಡ್ವೊಕೆಟ್ ಎಸ್. ಕೆ. ದುಬೆಜ್, ವಿಜಯಕುಮಾರ್ ಪಾಲ್, ನವೀನ್ ಪೂಜಾರಿ, ಶಿಂಮ್ಶನ್ ಗಾಲ್ಸುರ್ಕರ್, ಸಂತೋಷ ಸಲೂಂಕೆ, ರತ್ನಾಕರ್ ಶೆಟ್ಟಿ ಮತ್ತು ಸಾದಿಕ್ ಶೇಖ್‌ರವರು ಉಪಸ್ಥಿತರಿದ್ದರು.

ಜ್ಞಾನ ಮತ್ತು ಸಮೃದ್ಧಿಯ ಪ್ರತೀಕವಾದ ದೀಪವನ್ನು ಬೆಳಗಿಸಿ, ನಂತರ ಕೇಕ್‌ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬ್ಯಾಂಕ್‌ ಪ್ರಬಂಧಕರು ಹಾಗೂ ಸಿಬ್ಬಂದಿಗಳ ಸೇವೆಯನ್ನು ಶ್ಲಾಘಿಸಿ, ಎಲ್ಲರಿಗೂ ಶುಭಾಶಯ ಕೋರಲಾಯಿತು.

ಶಾಖಾ ಪ್ರಬಂಧಕ ಮೋಹನದಾಸ್ ಪೂಜಾರಿ ಸ್ವಾಗತಿಸಿದರು. ಉಪಪ್ರಬಂಧಕಿ ಆಶಾ ಆರ್. ಕೋಟ್ಯಾನ್ ಹಾಗೂ ಇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.




Related posts

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ ಭಾಯಂದರ್ 16ನೇ ವಾರ್ಷಿಕ ಪಾದಯಾತ್ರೆ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ – ಕಲ್ವಾ ಸ್ಥಳೀಯ ಕಚೇರಿಯ “ಆಟಿಡೊಂಜಿ ದಿನ” ಸಾಂಸ್ಕೃತಿಕ ಉತ್ಸವ

Mumbai News Desk

ಘಾಟ್ಕೋಪರ್ ಶ್ರೀ ಭವಾನಿ ಶನೀಶ್ವರ ದೇವಸ್ಥಾನದ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆಟಿಡೊಂಜೆ ಬಂಟರೆ ಕೂಟ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಸಿದ್ಧಿ ಪ್ರದೀಪ್ ಶೆಟ್ಟಿಶೇಕಡಾ 94% ಅಂಕ.

Mumbai News Desk

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಉಪಾಸನಾ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ.

Mumbai News Desk