29 C
Mumbai
March 6, 2026
Mumbai News Kannada
ಪ್ರಕಟಣೆ

ಜಗಜ್ಯೋತಿ ಕಲಾವೃಂದದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಮತ್ತು ಕವಿತಾ ಸ್ಪರ್ಧೆ – 2025





ಮುಂಬಯಿ ಸಾಹಿತ್ಯ–ಸಾಂಸ್ಕೃತಿಕ ಹಾಗೂ ಸಾಂಘಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿದ್ದರೂ, ಕನ್ನಡ ಸಾಹಿತ್ಯ ಲೋಕ ಬಹಳ ನಿರೀಕ್ಷಿಸುತ್ತಿದ್ದ ಸಮಯದಲ್ಲೇ ಇಹಯಾತ್ರೆಯನ್ನು ಮುಗಿಸಿದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಅವರ ಸ್ಮರಣಾರ್ಥವಾಗಿ ಜಗಜ್ಯೋತಿ ಕಲಾವೃಂದವು ಕಳೆದ 27 ವರ್ಷಗಳಿಂದ ಕಥಾ ಮತ್ತು ಕವಿತಾ ಸ್ಪರ್ಧೆ ಆಯೋಜಿಸುತ್ತಿದೆ.

2025 ನೇ ಸಾಲಿನ ಸ್ಪರ್ಧೆಗಾಗಿ ದೇಶದಾದ್ಯಂತದ ಕನ್ನಡ ಮಹಿಳೆಯರಿಗೆ ಮುಕ್ತವಾಗಿರುವ ಈ ಅಖಿಲ ಭಾರತ ಮಟ್ಟದ ಸ್ಪರ್ಧೆಯಲ್ಲಿ, ಕಥಾ ವಿಭಾಗ ಮತ್ತು ಕವಿತಾ ವಿಭಾಗ ತಲಾ ರೂಪಾಯಿ 10,000/- ನಗದು ಬಹುಮಾನ, ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಲಾಗಲಿದೆ.

ಸ್ಪರ್ಧೆಯ ನಿಯಮಗಳು

  1. ಈ ಸ್ಪರ್ಧೆ ದೇಶದಾದ್ಯಂತದ ಸಮಸ್ತ ಕನ್ನಡ ಮಹಿಳೆಯರಿಗಾಗಿ.
  2. ಕೃತಿಗಳು ಪ್ರಕಟಣೆಗೆ ಸಿದ್ಧವಾಗಿರುವ ಸ್ವರಚಿತ ಕಥಾ/ಕವಿತಾ ಸಂಗ್ರಹವಾಗಿರಬೇಕು.
  3. ಕಥಾ ಸ್ಪರ್ಧಗೆ – ಒಂದು ಕಥಾ ಸಂಕಲನ ಕಳುಹಿಸಬೇಕು.
    ಕವಿತಾ ಸ್ಪರ್ಧೆಗೆ – ಒಂದು ಕವಿತಾ ಸಂಕಲನ ಕಳುಹಿಸಬೇಕು.
    (ಒಬ್ಬ ಸ್ಪರ್ಧಿ ಎರಡೂ ವಿಭಾಗಗಳಲ್ಲಿ ಭಾಗವಹಿಸಬಹುದು.)
  4. ಕಥೆ/ಕವಿತೆಗಳನ್ನು ಹಾಳೆಯ ಒಂದೇ ಮಗ್ಗುಲಲ್ಲಿ ಸ್ಪಷ್ಟವಾಗಿ ಬರೆದು/ಟೈಪ್ ಮಾಡಿರಬೇಕು.
    ಕಾರ್ಬನ್ ಪ್ರತಿಗಳು, ಝೆರಾಕ್ಸ್ ಪ್ರತಿಗಳು ಹಾಗೂ ಪ್ರಕಟಿತ ಕೃತಿಗಳನ್ನು ಸ್ವೀಕರಿಸಲಾಗುವುದಿಲ್ಲ.
  5. ಕಥಾ ಸಂಕಲನ – ಕನಿಷ್ಠ 100 ಪುಟಗಳು, ಗರಿಷ್ಠ 130 ಪುಟಗಳ ಮಿತಿಯಲ್ಲಿರಬೇಕು.
  6. ಕವಿತಾ ಸಂಕಲನ – ಕನಿಷ್ಠ 30 ಕವಿತೆಗಳಿರಬೇಕು.
    (ಖಂಡಕಾವ್ಯ, ಚುಟುಕು, ಹನಿಗವನಗಳನ್ನು ಪರಿಗಣಿಸಲಾಗುವುದಿಲ್ಲ.)
  7. ಹಸ್ತಪ್ರತಿಯಲ್ಲಿ ಹೆಸರು ನಮೂದಿಸಬಾರದು.
    ಹೆಸರು, ವಿಳಾಸ, ಪರಿಚಯ, ದೂರವಾಣಿ ಸಂಖ್ಯೆ ಹಾಗೂ ಇತ್ತೀಚಿನ ಭಾವಚಿತ್ರವನ್ನು ಪ್ರತ್ಯೇಕವಾಗಿ ಸೇರಿಸಬೇಕು.
  8. ಪ್ರವೇಶ ಶುಲ್ಕವಿಲ್ಲ.
  9. ಬಂದ ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ.
  10. ಪ್ರಶಸ್ತಿ ಪಡೆದ ಕೃತಿಗಳನ್ನು ಮುದ್ರಿಸುವಾಗ ಮುಖಪುಟದ ಮೇಲ್ಭಾಗದಲ್ಲಿ ಹಾಗೂ ಪ್ರಥಮ ಒಳಪುಟದಲ್ಲಿ –
    “ಜಗಜ್ಯೋತಿ ಕಲಾವೃಂದದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ/ಕವಿತಾ ಪ್ರಶಸ್ತಿ ವಿಜೇತ ಕೃತಿ – 2025” ಎಂದು ಮುದ್ರಿಸಬೇಕು.
  11. ಪ್ರಶಸ್ತಿ ಪ್ರದಾನ ಸಮಾರಂಭ ವೃಂದದ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯಲಿದೆ.
  12. ವಿಜೇತರನ್ನು ದೂರವಾಣಿ/ಪತ್ರದ ಮೂಲಕ ಸಂಪರ್ಕಿಸಲಾಗುವುದು.
  13. ಒಮ್ಮೆ ಒಂದು ವಿಭಾಗದಲ್ಲಿ ಪ್ರಶಸ್ತಿ ಪಡೆದವರು, ಅದೇ ವಿಭಾಗದಲ್ಲಿ ಮತ್ತೆ ಭಾಗವಹಿಸಲು ಅವಕಾಶವಿರುವುದಿಲ್ಲ.
  14. ಸ್ಪರ್ಧೆಯ ಕುರಿತು ಯಾವುದೇ ತೀರ್ಮಾನ ಕೈಗೊಳ್ಳುವ ಹಕ್ಕನ್ನು ವೃಂದವು ಕಾಯ್ದಿರಿಸಿಕೊಂಡಿದೆ.
  15. ಅನಾವಶ್ಯಕ ಪತ್ರವ್ಯವಹಾರಕ್ಕೆ ಅವಕಾಶವಿಲ್ಲ. ನಿರ್ಣಾಯಕರ ತೀರ್ಮಾನವೇ ಅಂತಿಮ.
  16. ಕೃತಿಗಳನ್ನು ಕಳುಹಿಸುವ ಕೊನೆಯ ದಿನಾಂಕ : 31.10.2025

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ

(ವಿಳಾಸವನ್ನು ಇಂಗ್ಲೀಷ್‌ನಲ್ಲಿ ಸ್ಪಷ್ಟವಾಗಿ ಬರೆದು ಕಳುಹಿಸಬೇಕು)

SUKUMAR N. SHETTY
C/o. S. N. Shetty Associates,
Ground Floor, Room No.5,
Neelkanth Sagar CHS,
Mahatma Phule Road,
Opp. Jadhavwadi,
Dombivli West – 421202
📧 Email : mail.sukumar@yahoo.in


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

📞 Santosh P. Shetty – 9892110826 / 9869824709
📞 Vasant Suvarna – 9892833623
📧 Email : santoshpshetty@gmail.com




Related posts

ಜ. 26 ; ಜೈ ಶ್ರೀ ವಿಶ್ವಕರ್ಮ ಭಜನಾ ಮಂಡಳಿ ಯ 15ನೇ ವಾರ್ಷಿಕೋತ್ಸವ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”

Mumbai News Desk

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 

Mumbai News Desk

ಡಿ. 8 ಗೋರೆಗಾಂವ್ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದ, ಆಮಂತ್ರಣ ಪತ್ರಿಕೆ ಬಿಡುಗಡೆ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಶ್ರೀ ಮಧೂರು ಮದನಂತೇಶ್ವರ-ಸಿದ್ಧಿವಿನಾಯಕ ದೇವಸ್ಥಾನ, ಬ್ರಹ್ಮ ಕಲಶೋತ್ಸವ, ಮಾ.13:ಮುಂಬಯಿ ಭಕ್ತರ ಸಭೆ,

Mumbai News Desk

ವರ್ಲಿ    ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್, ನ. 16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ 

Mumbai News Desk