September 6, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕಿನ ಬೈಕುಲ್ಲಾ ಶಾಖೆಯಲ್ಲಿ 49ನೇ ಸಂಸ್ಥಾಪನಾ ದಿನಾಚರಣೆ: ಯಶಸ್ವಿ ಆಚರಣೆ





ಮುಂಬೈ, : ಮುಂಬೈನ ಬೈಕುಲ್ಲಾ ಶಾಖೆಯಲ್ಲಿ ಭಾರತ್ ಬ್ಯಾಂಕ್ ತನ್ನ 49ನೇ ಸಂಸ್ಥಾಪನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಗ್ರಾಹಕರು, ಹಿತೈಷಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

​ಶಾಖೆಯ ಮುಖ್ಯ ಪ್ರಬಂಧಕರಾದ ಅಕ್ಷಯ್ ಆರ್. ಅಮೀನ್ ಅವರು ಎಲ್ಲರನ್ನೂ ಸ್ವಾಗತಿಸಿ, ಬ್ಯಾಂಕಿನ ವ್ಯವಹಾರಿಕ ಬೆಳವಣಿಗೆಗಳು ಮತ್ತು ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.

​ಕಾರ್ಯಕ್ರಮದಲ್ಲಿ ಬ್ಯಾಂಕಿನ ಮಾಜಿ ಮುಖ್ಯ ಜನರಲ್ ಮ್ಯಾನೇಜರ್ ಅನಿಲ್ ಕುಮಾರ್ ಆರ್. ಅಮೀನ್ ಭಾಗವಹಿಸಿದ್ದರು. ಹಾಗೆಯೇ, ಗ್ರಾಹಕರಾದ ಮಹೇಂದ್ರ ಶಿಂಧೆ, ಸಂತೋಷ್ ಸುವರ್ಣ, ಮತ್ತು ಗಣೇಶ್ ಗುಪ್ತ ಸೇರಿದಂತೆ ಅನೇಕ ಗ್ರಾಹಕರು ಆಗಮಿಸಿ ಶುಭ ಹಾರೈಸಿದರು.

​ಬ್ಯಾಂಕಿನ ಉಪಪ್ರಬಂಧಕಿ ತಿಲಕಾ ಆರ್. ಕುಂದರ್, ಅಧಿಕಾರಿ ಚೇತನ್ ಡಿ. ಕೆಲ್ಜಿ ಮತ್ತು ಸಿಬ್ಬಂದಿಗಳಾದ ತನ್ವಿ ಯು. ಪೂಜಾರಿ, ಚಿನ್ಮಯ್ ವಿ. ಪೂಜಾರಿ, ಮತ್ತು ಕಾರ್ತಿಕ್ ಎಲ್. ಪೂಜಾರಿ ಕೂಡ ಈ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

​ದೀಪ ಬೆಳಗಿಸಿ, ಕೇಕ್ ಕತ್ತರಿಸುವ ಮೂಲಕ ಈ ಸಂಭ್ರಮಕ್ಕೆ ಚಾಲನೆ ನೀಡಲಾಯಿತು.



Related posts

ಚಿಣ್ಣರ ಬಿಂಬ: ನೈರುತ್ಯ ವಲಯದ ಮಕ್ಕಳ ಉತ್ಸವದ ಸಮಾರೋಪ ಸಮಾರಂಭ

Mumbai News Desk

ಪುತ್ರನ್ ಮೂಲಸ್ಥಾನ ಮುಂಬಯಿ- ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ.

Mumbai News Desk

‘ಧೀಮಂತ ಧರ್ಮಪಾಲ’ ಗೌರವ ಗ್ರಂಥ ಲೋಕಾರ್ಪಣೆ ಯಶಸ್ವಿ: ಸ್ನೇಹಕೂಟ

Mumbai News Desk

ಡೊಂಬಿವಲಿಯಲ್ಲಿ ಮಹಿಳೆಯರ ಹಳದಿ-ಕುಂಕುಮ ಸಂಭ್ರಮ: ಸಾಂಪ್ರದಾಯಿಕ ಉಡುಗೆ, ನೃತ್ಯದ ಮೆರುಗು

Mumbai News Desk

ವರ್ಲಿ ಶ್ರೀ ಅಪ್ಪಾಜಿ ಬೀಡು ಫೌಂಡೇಶನ್: ರಮೇಶ್ ಗುರುಸ್ವಾಮಿ ಗೆ ನುಡಿ ನಮನ.

Mumbai News Desk

ಡೊಂಬಿವಲಿ: ಬಡ ರೋಗಿಗಳಿಗೆ ಆಸರೆಯಾದ ಉಚಿತ ಡಯಾಲಿಸಿಸ್ ಕೇಂದ್ರ ಲೋಕಾರ್ಪಣೆ: ಮೊಗವೀರ ವ್ಯವಸ್ಥಾಪಕ ಮಂಡಳಿಯಿಂದ ಜನಪರ ಆರೋಗ್ಯ ಸೇವೆಗೆ ಚಾಲನೆ

Mumbai News Desk