32 C
Mumbai
April 24, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕಿನ ಬೈಕುಲ್ಲಾ ಶಾಖೆಯಲ್ಲಿ 49ನೇ ಸಂಸ್ಥಾಪನಾ ದಿನಾಚರಣೆ: ಯಶಸ್ವಿ ಆಚರಣೆ





ಮುಂಬೈ, : ಮುಂಬೈನ ಬೈಕುಲ್ಲಾ ಶಾಖೆಯಲ್ಲಿ ಭಾರತ್ ಬ್ಯಾಂಕ್ ತನ್ನ 49ನೇ ಸಂಸ್ಥಾಪನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಗ್ರಾಹಕರು, ಹಿತೈಷಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

​ಶಾಖೆಯ ಮುಖ್ಯ ಪ್ರಬಂಧಕರಾದ ಅಕ್ಷಯ್ ಆರ್. ಅಮೀನ್ ಅವರು ಎಲ್ಲರನ್ನೂ ಸ್ವಾಗತಿಸಿ, ಬ್ಯಾಂಕಿನ ವ್ಯವಹಾರಿಕ ಬೆಳವಣಿಗೆಗಳು ಮತ್ತು ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.

​ಕಾರ್ಯಕ್ರಮದಲ್ಲಿ ಬ್ಯಾಂಕಿನ ಮಾಜಿ ಮುಖ್ಯ ಜನರಲ್ ಮ್ಯಾನೇಜರ್ ಅನಿಲ್ ಕುಮಾರ್ ಆರ್. ಅಮೀನ್ ಭಾಗವಹಿಸಿದ್ದರು. ಹಾಗೆಯೇ, ಗ್ರಾಹಕರಾದ ಮಹೇಂದ್ರ ಶಿಂಧೆ, ಸಂತೋಷ್ ಸುವರ್ಣ, ಮತ್ತು ಗಣೇಶ್ ಗುಪ್ತ ಸೇರಿದಂತೆ ಅನೇಕ ಗ್ರಾಹಕರು ಆಗಮಿಸಿ ಶುಭ ಹಾರೈಸಿದರು.

​ಬ್ಯಾಂಕಿನ ಉಪಪ್ರಬಂಧಕಿ ತಿಲಕಾ ಆರ್. ಕುಂದರ್, ಅಧಿಕಾರಿ ಚೇತನ್ ಡಿ. ಕೆಲ್ಜಿ ಮತ್ತು ಸಿಬ್ಬಂದಿಗಳಾದ ತನ್ವಿ ಯು. ಪೂಜಾರಿ, ಚಿನ್ಮಯ್ ವಿ. ಪೂಜಾರಿ, ಮತ್ತು ಕಾರ್ತಿಕ್ ಎಲ್. ಪೂಜಾರಿ ಕೂಡ ಈ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

​ದೀಪ ಬೆಳಗಿಸಿ, ಕೇಕ್ ಕತ್ತರಿಸುವ ಮೂಲಕ ಈ ಸಂಭ್ರಮಕ್ಕೆ ಚಾಲನೆ ನೀಡಲಾಯಿತು.



Related posts

ಧರ್ಮಪಾಲ ದೇವಾಡಿಗರಿಗೆ  ದೇವಾಡಿಗ ಸಂಘದ ಗೌರವ. ಸಮಾಜದ ಅಭಿವೃದ್ಧಿ ಕಾರ್ಯಕ್ಕೆ ಧರ್ಮಪಾಲರ ಕೊಡುಗೆ ಅಪಾರ: ರವಿ ದೇವಾಡಿಗ

Mumbai News Desk

ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಲ್ಲಿ, ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಧನ ಸಹಾಯ ವಿತರಣೆ ಹಾಗೂ ಟಾಟಾ ಐಐಎಸ್ – ಸಂಜೀವಿನಿ ಲೋಕಾರ್ಪಣೆ

Mumbai News Desk

ಬಂಟ್ಸ್ ನ್ಯಾಯ ಮಂಡಳಿ ಮುಂಬಯಿ : ನೂತನ ಅಧ್ಯಕ್ಷರಾಗಿ  ಅಂತರಾಷ್ಟ್ರೀಯ ಕಬ್ಬಡಿ ತೀರ್ಪುಗಾರ ಜಯ ಎ ಶೆಟ್ಟಿ ಶಿಮಂತೂರು  ಆಯ್ಕೆ,

Mumbai News Desk

PVSNM ಮಹಿಳಾ ವಿಭಾಗದ ಹಳದಿ ಕುಂಕುಮ.

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ವಾರ್ಷಿಕ ಮಹಾಸಭೆ.

Mumbai News Desk

ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ ಸಂಪನ್ನ.

Mumbai News Desk