July 23, 2026
Mumbai News Kannada
ತುಳುನಾಡು

ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ನೂತನ ಆಡಳಿತ ಮುಕ್ತೇಸರರಾಗಿ ಚಂದ್ರಶೇಖರ ಬೆಳ್ಚಡ ಆಯ್ಕೆ







ಮುಂಬಯಿ: ಈ ವರ್ಷ ಬ್ರಹ್ಮಕಲಶೋತ್ಸವವು ನಡೆಯಲಿರುವ ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ನೂತನ ಆಡಳಿತ ಮುಕ್ತೇಸರರಾಗಿ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷರೂ ಹಾಗೂ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷರೂ ಆಗಿರುವ ಶ್ರೀ ಚಂದ್ರಶೇಖರ ಬೆಳ್ಚಡ, ಕಟೀಲು ಅವರು ಆಯ್ಕೆಯಾಗಿದ್ದಾರೆ. ಹಾಗೆಯೇ, ಆಡಳಿತ ಸಮಿತಿಯ ಉಪಾಧ್ಯಕ್ಷರಾಗಿ ಉಡುಪಿ ಜಿಲ್ಲೆಯ ಪಂದಿಬೆಟ್ಟು ಮೂಲದ ಉದ್ಯಮಿ ಹಾಗೂ ಸಮಾಜ ಸೇವಕ ಶ್ರೀ ವಿಶ್ವನಾಥ ಬೆಳ್ಚಡ, ಮುಂದಿಬೆಟ್ಟು, ಉಡುಪಿ ಇವರನ್ನು ಆಯ್ಕೆ ಮಾಡಲಾಗಿದೆ.

​ಈ ಆಯ್ಕೆಯನ್ನು ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಾಮನ್ ಇಡ್ಯಾ ಹಾಗೂ ಕ್ಷೇತ್ರದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಮುಕ್ತೇಸರರೂ ಆಗಿರುವ ಶ್ರೀ ಶ್ರೀನಿವಾಸ (ಅಪ್ಪು ಪೂಜಾರಿ) ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

​ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದಲ್ಲಿ ಮಾರ್ಚ್ 4 ರಿಂದ 8 ರವರೆಗೆ ಬ್ರಹ್ಮಕಲಶ, ಏಪ್ರಿಲ್ 10 ರಂದು ನಡಾವಳಿ ಮಹೋತ್ಸವ ಮತ್ತು ಏಪ್ರಿಲ್ 11 ರಿಂದ ಒಂದು ವಾರಗಳ ಕಾಲ ಭರಣಿ ಮಹೋತ್ಸವವು ನಡೆಯಲಿದೆ. ನೂತನ ಆಡಳಿತ ಮುಕ್ತೇಸರ ಹಾಗೂ ಉಪಾಧ್ಯಕ್ಷರ ಸಮರ್ಥ ಮುಂದಾಳತ್ವದಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಲಿವೆ ಎಂದು ಎಳೂರ ಗುರಿಕಾರರು ಹಾಗೂ ದೇವಸ್ಥಾನದ ಟ್ರಸ್ಟಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.



Related posts

ಮೂಲ್ಕಿ ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಆದಿಕಿಲ್ಲಾಡಿ ಶ್ರೀ ಕೊಡ್ದಬ್ಬು ದೈವಸ್ಥಾನದ ಗುರಿಕಾರರಾದ ವಿ ಎಸ್ ವಸಂತ್ ಗುರಿಕಾರಯವರಿಗೆ ಸನ್ಮಾನ

Mumbai News Desk

ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ  ಪ್ರಶಾಂತ್ ಶೆಟ್ಟಿ  ಮಂಡೇಡಿ ಆಯ್ಕೆ 

Mumbai News Desk

ಮೂಲತ್ವ ಫೌಂಡೇಶನ್‌ನಿಂದ ‘ಆಟಿದೊಂಜಿ ದಿನ’ ಆಚರಣೆ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ, ‘ಮೂಲತ್ವ ಲೋಕ ಪೊರ್ಲು’ ಅನಾವರಣ

Mumbai News Desk

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Mumbai News Desk

ಉಡುಪಿ ಕೃಷ್ಣನಿಗೆ ‘ಪಾರ್ಥಸಾರಥಿ’ ಸುವರ್ಣ ರಥ ಸಮರ್ಪಣೆ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಿಮೆ ಸಾರುವ ವೀಡಿಯೋ ಆಲ್ಬಮ್ ಬಿಡುಗಡೆ

Mumbai News Desk