32 C
Mumbai
April 24, 2026
Mumbai News Kannada
ತುಳುನಾಡು

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಮುಷ್ಟಿ ಕಾಣಿಕೆ ಸಮರ್ಪಣೆ





ಮೂಲ್ಕಿ: ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಅಧಿದೇವತೆ ಶ್ರೀ ಕ್ಷೇತ್ರ ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲದ ಜೀರ್ಣೋದ್ಧಾರ ಕಾರ್ಯಗಳು ಭಾನುವಾರ ಮುಷ್ಟಿ ಕಾಣಿಕೆ ಸಮರ್ಪಣೆಯೊಂದಿಗೆ ಆರಂಭಗೊಂಡವು. ಕಳೆದ ತಿಂಗಳು ನಡೆದ ಅಷ್ಟಮಂಗಳ ಪ್ರಶ್ನಾ ಚಿಂತನೆಯ ಆಧಾರದ ಮೇಲೆ, ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಾಗೂ ನೂತನ ಬ್ರಹ್ಮರಥ ನಿರ್ಮಾಣಕ್ಕೆ ಪೂರಕವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

​ಬೆಳಿಗ್ಗೆ 9 ಗಂಟೆಗೆ ದೇಗುಲದ ಸನ್ನಿಧಿಯಲ್ಲಿ ನಡೆದ ಧಾರ್ಮಿಕ ವಿಧಿಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡರು. ಪವಿತ್ರಪಾಣಿ ಅತ್ತೂರು ಬೈಲು ವೆಂಕಟರಾಜ ಉಡುಪ, ತಂತ್ರಿಗಳಾದ ಬ್ರಹ್ಮಶ್ರೀ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕರಾದ ನರಸಿಂಹ ಭಟ್ ಮತ್ತು ಶ್ರೀಪತಿ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು.

​ಮೂಲ್ಕಿ ಒಂಬತ್ತು ಮಾಗಣೆಯ ಭಕ್ತರು ಹಾಗೂ ಬೇರೆ ಬೇರೆ ಊರುಗಳಿಂದ ಆಗಮಿಸಿದ ಭಕ್ತರು ತಮ್ಮ ಭಕ್ತಿಯ ಸಂಕೇತವಾಗಿ ಕಾಣಿಕೆ ಹುಂಡಿಗೆ ಮುಷ್ಟಿ ಕಾಣಿಕೆಯನ್ನು ಅರ್ಪಿಸಿದರು. ದೇವಿಯ ಮೇಲಿನ ಅಪಾರ ನಂಬಿಕೆಯಿಂದ, ಹೊಸ ಬ್ರಹ್ಮರಥ ಮತ್ತು ದೇಗುಲದ ಜೀರ್ಣೋದ್ಧಾರ ಕಾರ್ಯಗಳು ಸುಸೂತ್ರವಾಗಿ ನಡೆಯಲಿ ಎಂದು ಭಕ್ತರು ಪ್ರಾರ್ಥಿಸಿದರು. ಈ ಪುಣ್ಯ ಕಾರ್ಯದಲ್ಲಿ ವಿವಿಧ ಕ್ಷೇತ್ರಗಳ ಆಡಳಿತ ಮೊಕ್ತೇಸರು, ಗುತ್ತು ಬಾವಗಳ ಮುಖ್ಯಸ್ಥರು, ಬೇರೆಬೇರೆ ಊರುಗಳ ಗುರಿಕಾರರು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ವಿವಿಧ ಸಮಾಜದ ಗಣ್ಯರು, ಯುವಕ ಮಂಡಲಗಳು ಮತ್ತು ಇತರೆ ಸೇವಾ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

​ಈ ಕುರಿತು ಮಾಹಿತಿ ನೀಡಿದ ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಅಕ್ಟೋಬರ್ 10ರವರೆಗೆ ದೇವಸ್ಥಾನದಲ್ಲಿ ಮುಷ್ಟಿ ಕಾಣಿಕೆ ಸಮರ್ಪಿಸಲು ಭಕ್ತರಿಗೆ ಅವಕಾಶವಿದೆ ಎಂದು ತಿಳಿಸಿದರು. ಈ ಸಮರ್ಪಣಾ ಕಾರ್ಯವು ದೇವಸ್ಥಾನದ ಅಭಿವೃದ್ಧಿಗೆ ಹೊಸ ಚಾಲನೆ ನೀಡಿದೆ.



Related posts

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk

ಕೆ ಎನ್ ಚಂದ್ರಶೇಖರ್ ಅವರ ಬೀಸು ಬಲೆಗೆ ಭಾರಿ ಗಾತ್ರದ ತೊರಕೆ ಮೀನು (STING RAY FISH)

Mumbai News Desk

ಮಧೂರು ಶ್ರೀ ಮದನಂತೇಶ್ವರ ದೇಗುಲ; ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ

Mumbai News Desk

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ

Mumbai News Desk

ಶ್ರೀ ಬಪ್ಪನಾಡು ಸೌಹರ್ದ ಸಹಕಾರಿ ಸಂಘ(ನಿ)ಇದರ ವಾರ್ಷಿಕ ಮಹಾಸಭೆಯಲ್ಲಿ ಹರಿಶ್ಚಂದ್ರ ಪಿ. ಸಾಲಿಯಾನ್‌ರವರಿಗೆ ಸನ್ಮಾನ

Mumbai News Desk

ಉಡುಪಿ: ಜಿಲ್ಲಾಡಳಿತದ ನಿಷೇಧಾಜ್ಞೆ ನಡುವೆಯೇ ಕಂಬಳ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

Mumbai News Desk