July 23, 2026
Mumbai News Kannada
ಮುಂಬಯಿ

ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ: ಸೆಪ್ಟೆಂಬರ್ 7ರಂದು ಪೂರ್ವಭಾವಿ ಸಭೆ







ಇದೇ ಸೆಪ್ಟೆಂಬರ್ 14ರಂದು ಮುಂಬೈ ಮೀರಾ ರೋಡ್‌ನಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ’ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ಷಡ್ಯಂತ್ರಗಳನ್ನು ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಆಂದೋಲನಕ್ಕೆ ಬೆಂಬಲ ಸೂಚಿಸಲು ಈ ಸಮಾವೇಶವನ್ನು ಆಯೋಜಿಸಲಾಗಿದೆ.

​ಈ ಸಮಾವೇಶದ ಪೂರ್ವಭಾವಿ ಸಭೆಯು ಸೆಪ್ಟೆಂಬರ್ 7ರ ಭಾನುವಾರ ಸಂಜೆ 4:30ಕ್ಕೆ ಮೀರಾ ರೋಡ್‌ ಗೋಲ್ಡನ್ ನೆಸ್ಟ್ ಸರ್ಕಲ್ ಬಳಿಯ ಕ್ರೌನ್ ಬಿಸಿನೆಸ್ ಹೋಟೆಲ್‌ನಲ್ಲಿ ನಡೆಯಲಿದೆ. ಮಹೇಶ್ ಶೆಟ್ಟಿ ತೆಳ್ಳಾರ್ ಅವರ ಮುಂದಾಳತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸಮಾವೇಶದ ಯಶಸ್ಸಿಗೆ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

​ಈಗಾಗಲೇ, ಮಹೇಶ್ ಶೆಟ್ಟಿ ತೆಳ್ಳಾರ್ ಅವರ ನೇತೃತ್ವದಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಸಮಾವೇಶ’ದ ಪೂರ್ವಭಾವಿ ಸಭೆಯು ದಹಿಸರ್ ಪೂರ್ವದ ಮಹಾರಾಜ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆದಿದೆ. ಈ ಸಭೆಯಲ್ಲಿ ಮುಂಬೈ, ಮೀರಾ-ಭಯಂದರ್, ಥಾಣೆ, ನವಿ ಮುಂಬೈ ಹಾಗೂ ಕಲ್ಯಾಣ ಸುತ್ತಮುತ್ತಲಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.



Related posts

ಮೀರಾರೋಡಿನಲ್ಲಿ ಗೆಜ್ಜೆ ಗಿರಿ ಮೇಳದವರಿಂದ……ಎಡ್ಮೂರ ಮುಗೇರ ಸತ್ಯೊಲು…ಯಕ್ಷಗಾನ ಪ್ರದರ್ಶನ.

Mumbai News Desk

ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್  ಗೋಕುಲ  ಸಂಪನ್ನಗೊಂಡ ತಾಳಮದ್ದಳೆ ಸಪ್ತಾಹ 

Mumbai News Desk

ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ರಾಮ ನಾಮ ಜಪ ಯಜ್ಞ ಸಂಪನ್ನ.

Mumbai News Desk

ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ಪನ್ವೇಲ್‌ನಲ್ಲಿ ಸ್ಥಗಿತ : ರೈಲ್ವೆ ಇಲಾಖೆಯ ಕ್ರಮಕ್ಕೆ ಕರಾವಳಿ ಪ್ರಯಾಣಿಕರ ಆಕ್ರೋಶ – ಕೂಡಲೇ ಸೇವೆ ಪುನರಾರಂಭಿಸಲು ಆಗ್ರಹ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ 66ನೇ ಸಂಸ್ಥಾಪನಾ ದಿನಾಚರಣೆ.

Mumbai News Desk

ಮುಂಬೈ : ಮೊಗವೀರ ಕೋ-ಆಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿ: 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವ ಸಂಪನ್ನ

Mumbai News Desk