32 C
Mumbai
March 7, 2026
Mumbai News Kannada
ಮುಂಬಯಿ

ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ: ಸೆಪ್ಟೆಂಬರ್ 7ರಂದು ಪೂರ್ವಭಾವಿ ಸಭೆ





ಇದೇ ಸೆಪ್ಟೆಂಬರ್ 14ರಂದು ಮುಂಬೈ ಮೀರಾ ರೋಡ್‌ನಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ’ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ಷಡ್ಯಂತ್ರಗಳನ್ನು ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಆಂದೋಲನಕ್ಕೆ ಬೆಂಬಲ ಸೂಚಿಸಲು ಈ ಸಮಾವೇಶವನ್ನು ಆಯೋಜಿಸಲಾಗಿದೆ.

​ಈ ಸಮಾವೇಶದ ಪೂರ್ವಭಾವಿ ಸಭೆಯು ಸೆಪ್ಟೆಂಬರ್ 7ರ ಭಾನುವಾರ ಸಂಜೆ 4:30ಕ್ಕೆ ಮೀರಾ ರೋಡ್‌ ಗೋಲ್ಡನ್ ನೆಸ್ಟ್ ಸರ್ಕಲ್ ಬಳಿಯ ಕ್ರೌನ್ ಬಿಸಿನೆಸ್ ಹೋಟೆಲ್‌ನಲ್ಲಿ ನಡೆಯಲಿದೆ. ಮಹೇಶ್ ಶೆಟ್ಟಿ ತೆಳ್ಳಾರ್ ಅವರ ಮುಂದಾಳತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸಮಾವೇಶದ ಯಶಸ್ಸಿಗೆ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

​ಈಗಾಗಲೇ, ಮಹೇಶ್ ಶೆಟ್ಟಿ ತೆಳ್ಳಾರ್ ಅವರ ನೇತೃತ್ವದಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಸಮಾವೇಶ’ದ ಪೂರ್ವಭಾವಿ ಸಭೆಯು ದಹಿಸರ್ ಪೂರ್ವದ ಮಹಾರಾಜ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆದಿದೆ. ಈ ಸಭೆಯಲ್ಲಿ ಮುಂಬೈ, ಮೀರಾ-ಭಯಂದರ್, ಥಾಣೆ, ನವಿ ಮುಂಬೈ ಹಾಗೂ ಕಲ್ಯಾಣ ಸುತ್ತಮುತ್ತಲಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.



Related posts

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ನೂತನ ಸಮಿತಿಯ ರಚನೆ.

Mumbai News Desk

ತುಳುಕೂಟ ಫೌಂಡೇಶನ್ (ರಿ) ನಾಲಾಸೋಪಾರ ಹಾಗೂ ಶ್ರೀದೇವಿ ಯಕ್ಷ ಕಲಾ ನಿಲಯದ ವಾರ್ಷಿಕೋತ್ಸವ, ಸಮಾರೋಪ,

Mumbai News Desk

ಶ್ರೀ ಅಯ್ಯಪ್ಪ ಭಕ್ತ ಮಂಡಳಿ, ಶ್ರೀ ಲಕ್ಷ್ಮೀ ನಾರಾಯಣ ಭಜನಾ ಸಮಿತಿ ಮೀರಾ ರೋಡ್ ಶ್ರೀ ಅಯ್ಯಪ್ಪ ಸ್ವಾಮಿ 29ನೇ ಮಹಾಪೂಜೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಕಚೇರಿ: ದಶಮಾನೋತ್ಸವ ಉದ್ಘಾಟನೆ

Mumbai News Desk

ಮಲಾಡ್ ಶ್ರೀಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ ವಿವಿಧ ಶನಿಮಂದಿರದವರಿಂದ ಶ್ರೀ ಶನಿ ಗ್ರಂಥ ಪಾರಾಯಣ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಸಾಮೂಹಿಕ ಶನಿ ಪೂಜೆ ಮತ್ತು ತಾಳಮದ್ದಳೆ.

Mumbai News Desk