32 C
Mumbai
March 7, 2026
Mumbai News Kannada
ಮುಂಬಯಿ

ಪನ್ವೇಲ್ ಕರ್ನಾಟಕ ಸಂಘದಲ್ಲಿ 18ನೇ ವರ್ಷದ ಗಣೇಶೋತ್ಸವ ಸಂಭ್ರಮ





ನವಿ ಮುಂಬಯಿ: ಪನ್ವೇಲ್ ಕರ್ನಾಟಕ ಸಂಘವು ಸತತ 18ನೇ ವರ್ಷದ ಗಣೇಶೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿತು. ಈ ವರ್ಷದ ಆಚರಣೆಯು ಸಂಘದ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ಪದ್ಮ, ಕಾರ್ಯಧ್ಯಕ್ಷರಾದ ಮಾಜಿ ನಗರಸೇವಕ ಸಂತೋಷ್ ಜಿ. ಶೆಟ್ಟಿ, ಮತ್ತು ಸಮಿತಿ ಪದಾಧಿಕಾರಿಗಳು ಹಾಗೂ ಸ್ಥಳೀಯ ಭಕ್ತಾದಿಗಳ ಸಹಯೋಗದಲ್ಲಿ ಯಶಸ್ವಿಯಾಗಿ ನೆರವೇರಿತು.

​ಆಗಸ್ಟ್ 27ರಂದು ಸಂಘದ ಆವರಣದಲ್ಲಿ ಗಣಪತಿಯ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ಪ್ರತಿದಿನ ಬೆಳಿಗ್ಗೆ ಮತ್ತು ಸಾಯಂಕಾಲ ಗಣಪತಿಗೆ ಪೂಜೆ, ಆರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು. ಪ್ರತಿದಿನ ಸಂಜೆ ವಿವಿಧ ಭಜನಾ ತಂಡಗಳು ಮತ್ತು ಭಕ್ತಾದಿಗಳಿಂದ ಭಜನಾ ಕಾರ್ಯಕ್ರಮಗಳು ನಡೆದವು.

​ಸೆಪ್ಟೆಂಬರ್ 2ರಂದು ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮಾತಾ ಕಿ ಚೌಕಿ ಕಾರ್ಯಕ್ರಮಗಳು ಅದ್ದೂರಿಯಾಗಿ ಮೂಡಿಬಂದವು. ಬಳಿಕ ಸ್ಥಳೀಯ ದಾನಿಗಳ ಸಹಕಾರದಿಂದ ಭಕ್ತಾದಿಗಳಿಗೆ ಮಹಾಪ್ರಸಾದ ವಿನಿಯೋಗವಾಯಿತು. ಈ ಕಾರ್ಯಕ್ರಮವು ಸಂಘದ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ ಸದಸ್ಯರ ಸಹಕಾರದಿಂದ ಬಹಳ ಅಚ್ಚುಕಟ್ಟಾಗಿ ನಡೆಯಿತು.

​ಸೆಪ್ಟೆಂಬರ್ 2ರಂದು ಸಂಜೆ ಸುಮಾರು 5:00 ಗಂಟೆಯ ನಂತರ ಗಣಪತಿಯ ವಿಸರ್ಜನೆ ಶಾಸ್ತ್ರೋಕ್ತವಾಗಿ ನೆರವೇರಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಈ ಸಂಪೂರ್ಣ ಗಣೇಶೋತ್ಸವವು ಸೌಹಾರ್ದಯುತ ವಾತಾವರಣದಲ್ಲಿ ನೆರವೇರಿ, ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.



Related posts

ಮುಂಬೈ ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ರಿತು ತಾವ್ಡೆ, ಶಿವಸೇನೆಯ ಸಂಜಯ್ ಘಾಡಿ ಉಪ ಮೇಯರ್ ಅಭ್ಯರ್ಥಿಯಾಗಿ ಘೋಷಣೆ

Mumbai News Desk

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ 4 ಯ ಆರಾಧನ ಮಹೋತ್ಸವ.

Mumbai News Desk

ಬಂಟ್ಸ್ ಮೆಡಿಕಲ್ ಪ್ರಾಕ್ಟೀಶನರ್ಸ್ ಎಸೋಸಿಯೇಶನ್ ಮುಂಬಯಿ 2ನೇ ವೈಜ್ಞಾನಿಕ ಸಭೆ, ಉಪನ್ಯಾಸ.

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೀರಾಗಾಂವ್ 35ನೇ ವಾರ್ಷಿಕ ಮಹಾಪೂಜೆ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ 59ನೇ ನವರಾತ್ರಿ ಉತ್ಸವ ಸಂಪನ್ನ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭವ್ಯ ಶಿವನಂದ್ ಪೂಜಾರಿಗೆ ಶೇ 92.00 ಅಂಕ

Mumbai News Desk