September 6, 2026
Mumbai News Kannada
ಕ್ರೀಡೆ

ವರ್ಲ್ಡ್ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ –ಉದಯ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಭಾರತ ತಂಡ





ಮುಂಬಯಿ: ಅಮೆರಿಕದ ಲಾಸ್ ವೆಗಾಸ್ ನಗರವು ಸೆಪ್ಟೆಂಬರ್ 6ರಿಂದ 13ರವರೆಗೆ ಜರುಗಲಿರುವ ವರ್ಲ್ಡ್ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ 2025 ಕ್ರೀಡಾಜಗತ್ತಿನ ಪ್ರಮುಖ ಆಕರ್ಷಣೆಯಾಗಿದ್ದು, ಭಾರತವನ್ನು ಪ್ರತಿನಿಧಿಸಲು 9 ಸದಸ್ಯರ ಶಕ್ತಿಶಾಲಿ ಭಾರತೀಯ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ತಂಡ ಹೊರಟಿದೆ. ಈ ತಂಡವನ್ನು ಇಂಡಿಯಾ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ಫೆಡರೇಷನ್ನ ಪ್ರಧಾನ ಕಾರ್ಯದರ್ಶಿ ಮತ್ತು ಖ್ಯಾತ ಕೋಚ್ ಉದಯ ಶೆಟ್ಟಿಯವರು ಮಾರ್ಗದರ್ಶಿಸಲಿದ್ದಾರೆ.

2014ರಿಂದಲೇ ಇಂಡಿಯಾ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉದಯ ಶೆಟ್ಟಿಯವರು, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಅತ್ಯುತ್ತಮ ಕೋಚ್‌ಗಳಲ್ಲೊಬ್ಬರು. ಜೊತೆಗೆ ಅವರು ಅಂತರಾಷ್ಟ್ರೀಯ ತೀರ್ಪುಗಾರ (ರೆಫರೀ) ಆಗಿಯೂ ಅತ್ಯುನ್ನತ ಸ್ಥಾನದಲ್ಲಿದ್ದಾರೆ. ರಾಷ್ಟ್ರೀಯ ಚಾಂಪಿಯನ್ ಆಗಿರುವ ಶೆಟ್ಟಿಯವರು ಅನೇಕ ದಾಖಲಾತಿಗಳನ್ನು ನಿರ್ಮಿಸಿರುವುದಲ್ಲದೆ, ಪ್ರಸ್ತುತ ಏಷಿಯನ್ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ಫೆಡರೇಷನ್ನ ಕಾರ್ಯಕಾರಿ ಮಂಡಳಿಯಲ್ಲಿಯೂ ಮಹತ್ವದ ಸದಸ್ಯರಾಗಿದ್ದಾರೆ.

ಇತ್ತೀಚೆಗೆ ಜೂನ್ 2025ರಲ್ಲಿ ದೋಹಾ, ಖತಾರ್‌ನಲ್ಲಿ ನಡೆದ ಏಷಿಯನ್ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅವರು, ತಮ್ಮ ನಾಯಕತ್ವದಲ್ಲಿ ಭಾರತೀಯ ಆಟಗಾರರು ಅತ್ಯುತ್ತಮ ಸಾಧನೆಗಳನ್ನು ತೋರಿದ್ದು, ಅತಿ ಹೆಚ್ಚು ಚಿನ್ನದ ಪದಕಗಳನ್ನು ಭಾರತಕ್ಕೆ ತಂದುಕೊಟ್ಟಿದ್ದಾರೆ.

ಈ ಬಾರಿ ಲಾಸ್ ವೆಗಾಸ್‌ನಲ್ಲಿ ನಡೆಯಲಿರುವ ವಿಶ್ವಮಟ್ಟದ ಸ್ಪರ್ಧೆಗೆ ಭಾರತೀಯ ಆಟಗಾರರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಕಣಕ್ಕಿಳಿಯಲಿದ್ದು, ಅಲ್ಲಿ ವಾಸಿಸುವ ಭಾರತೀಯ ಕ್ರೀಡಾಭಿಮಾನಿಗಳು ತಂಡಕ್ಕೆ ಆತ್ಮೀಯ ಸ್ವಾಗತ ನೀಡಲು ಹಾಗೂ ಮನೋಬಲ ತುಂಬಲು ಸಜ್ಜಾಗಿದ್ದಾರೆ.

ಈ ಸಂದರ್ಭದಲ್ಲಿ ಭಾರತದ ಕ್ರೀಡಾ ಸಚಿವಾಲಯ ಮತ್ತು ಪ್ರಧಾನಮಂತ್ರಿ ಕಚೇರಿಯಿಂದ ಭಾರತೀಯ ತಂಡಕ್ಕೆ ಶುಭಾಶಯಗಳು ಲಭಿಸಿದ್ದು, ದೇಶದ ಕ್ರೀಡಾ ಪ್ರೇಮಿಗಳಲ್ಲಿ ಉತ್ಸಾಹ ತುಂಬಿದೆ.



Related posts

ಗುರುಪುರ ಬಂಟರ ಮಾತೃ ಸಂಘಕ್ಕೆ  ಪುಣೆ, ಪಡುಬಿದ್ರಿ ಇಲ್ಲಿ ನಡೆದ ಕ್ರೀಡಾಕೂಟದಲ್ಲಿ ಅವಳಿ ಪ್ರಶಸ್ತಿಗಳು

Mumbai News Desk

ಸಮರ್ಥ್ ರೈ, ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಅಂಡರ್-15 ವಿಭಾಗದಲ್ಲಿ ಅತೀ ಹೆಚ್ಚು ಗೋಲ್ ಹೊಡೆತದಿಂದ,ತಂಡ ಟಾಪ್ 3ರ ಸ್ಥಾನಕ್ಕೆ

Mumbai News Desk

ಉಡುಪಿ : ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ, ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಶಾಲೆಗೆ ಪ್ರಥಮ ಸ್ಥಾನ.

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಕಮಿಟಿ (AMW);    ಅಂತರಾಷ್ಟ್ರೀಯ ವೇಟ್ ಲಿಫ್ಟರ್ ಉದಯ  ಶೆಟ್ಟಿ  ಆಯ್ಕೆ

Mumbai News Desk

ಯುವಶಕ್ತಿ ಸಂಘಟನೆಯಿಂದ ಸಮಾಜದ ಏಳಿಗೆ ಸಾಧ್ಯ: ಡೊಂಬಿವಲಿಯಲ್ಲಿ ‘KYD’ (ಕರುನಾಡ ಯೂತ್–ಡೊಂಬಿವಲಿ) ಕ್ರೀಡಾಕೂಟ ಯಶಸ್ವಿ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ (ಮೀರಾ-ಭಾಯಂದರ್ ಶಾಖೆ): ಕ್ರೀಡಾಕೂಟ – 2026 ಸಂಭ್ರಮ

Mumbai News Desk