32 C
Mumbai
March 7, 2026
Mumbai News Kannada
ಮುಂಬಯಿ

ಮುಂಬೈನಲ್ಲಿ ಈದ್ -ಎ -ಮಿಲಾದ್ ರಜೆಯನ್ನು ಸೆಪ್ಟಂಬರ್ 8ಕ್ಕೆ ಬದಲಾಯಿಸಿದ ಮಹಾರಾಷ್ಟ್ರ ಸರಕಾರ





ಮಹಾರಾಷ್ಟ್ರ ಸರಕಾರವು ಮುಂಬೈ ನಗರ ಮತ್ತು ಉಪನಗರ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 5ರ ಬದಲಿಗೆ ಸೆಪ್ಟೆಂಬರ್ 8ರಂದು ಆಚರಿಸಲಾಗುವುದು ಎಂದು ಘೋಷಿಸಿತು. ಮುಸ್ಲಿಂ ಸಮುದಾಯವು ಸೆಪ್ಟೆಂಬರ್ 6ರಂದು ಅನಂತ ಚತುರ್ದಶಿ ಇರುವುದರಿಂದ, ಸಾರ್ವಜನಿಕ ಮೆರವಣಿಗೆಳ ನಂತರ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ದಿನವಾಗಿರುವುದರಿಂದ ಸಾಮರಸ್ಯ ಕಾಪಾಡಿಕೊಳ್ಳಲು ಸೆಪ್ಟಂಬರ್ 8ರಂದು ಈದ್ -ಎ -ಮಿಲಾದ್ ಮೆರವಣಿಗೆಯನ್ನು ನಡೆಸಲು ನಿರ್ಧರಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಾಮಾನ್ಯ ಆಡಳಿತ ಇಲಾಖೆ ಸುತ್ತೊಲೆಯಲ್ಲಿ ಸೆಪ್ಟೆಂಬರ್ 5 ರಂದು ರಾಜ್ಯದ ಇತರ ಜಿಲ್ಲೆಗಳಿಗೆ ರಜೆ ಬದಲಾಗದೇ ಇರುತ್ತದೆ, ಆದರೆ ಮುಂಬೈ ನಗರ ಮತ್ತು ಉಪನಗರ ಗಳಲ್ಲಿ ಅದನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ. ಎಂದು ತಿಳಿಸಿದೆ.
ಮುಂಬೈ ನಗರ ಮತ್ತು ಉಪನಗರ ಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5 ರಂದು ಎಂದಿನಂತೆ ತೆರೆದಿರುತ್ತದೆ ಎಂದು ಸುತ್ತೋಲೆ ಸ್ಪಷ್ಟಪಡಿಸಿದೆ.



Related posts

ಚಿಣ್ಣರ ಬಿಂಬದ 21ನೆಯ ವಾರ್ಷಿಕ ಮಕ್ಕಳ ಉತ್ಸವ, ವಿಶ್ವಸ್ಥರ ಪದಗ್ರಹಣ.ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆಯ ಉದ್ಘಾಟನೆ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಿಧೀಶ ಧನಂಜಯ ಪೂಜಾರಿಗೆ ಶೇ 89.20 ಅಂಕ.

Mumbai News Desk

ಮುಂಬೈ: ಬೋರಿವಲಿ ಶ್ರೀ ಜಗದೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶ ಸಂಭ್ರಮ ಸಂಪನ್ನ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ : ಮೀರಾರೋಡ್ ಸಮಿತಿವತಿಯಿಂದ ಧಾರ್ಮಿಕ ಯಾತ್ರೆ

Mumbai News Desk

ಮುಂಬಯಿ : ಏನ್ ಸಿ ಪಿ ಮುಖಂಡ ಬಾಬಾ ಸಿದ್ಧಿಕ್ ಅವರನ್ನು ಗುಂಡಿಕ್ಕಿ ಹತ್ಯೆ

Mumbai News Desk