September 6, 2026
Mumbai News Kannada
ತುಳುನಾಡು

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನದ ಪ್ರಯುಕ್ತ ಭವ್ಯ ಶೋಭಾಯಾತ್ರೆ





ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶ್ರೀ ನಾರಾಯಣ ಗುರುಗಳ ೧೭೧ನೇ ಜನ್ಮ ಜಯಂತಿ ಪ್ರಯುಕ್ತ ಮೂಲ್ಕಿ ವ್ಯಾಪ್ತಿಯ ನಾರಾಯಣ ಗುರುಗಳ ಭಕ್ತರು ಪ್ರತಿ ವರ್ಷ ಯಾವುದಾದರೂ ಒಂದು ಮನೆಯಿಂದ ವಿವಿಧ ಬಿರುದಾವಳಿಗಳಿಂದ ನಾರಾಯಣಗುರುಗಳ ಶೋಭಾಯಾತ್ರೆಯನ್ನು ಮೂಲ್ಕಿಯ ಪೇಟೆಗಳಲ್ಲಿ ತಂದು ಜನರಿಗೆ ಮನೋರಂಜನೆಯನ್ನು ಕೊಡುತ್ತಾ ಬಂದಿದ್ದರು.

ಈ ವರ್ಷ ಶ್ರೀಗುರು ಭಾವಚಿತ್ರವನ್ನು ಮೂಲ್ಕಿ ಕಾರ್ನಾಡಿನಿಂದ ಗ್ರಾಮಸ್ಥರ ಕೂಡುವಿಕೆಯಲ್ಲಿ ಶ್ರೀಮತಿ ಶ್ಯಾಮಲ ಮತ್ತು ವಾಸು ಕೋಟ್ಯಾನ್‌ರವರ ಮನೆ ನಂದನದಲ್ಲಿ ಶ್ರೀಗುರು ಪೂಜೆಯ ಬಳಿಕ ವಿವಿಧ ವಾದ್ಯಗೋಷ್ಠಿಗಳು, ಭಜನಾ ಸಂಕೀರ್ತನೆಗಳು ಹಾಗೂ ಭಜನಾ ನೃತ್ಯ ತಂಡದೊoದಿಗೆ ಶೋಭಾಯಾತ್ರೆಯೂ ಹರಿಹರಕ್ಷೇತ್ರ, ಕಾರ್ನಾಡು, ಮೂಲ್ಕಿ ಬಸ್‌ನಿಲ್ದಾಣ, ಬಪ್ಪನಾಡು ದೇವಸ್ಥಾನ, ಪಂಚಮಹಲ್ ರಸ್ತೆಯ ಮೂಲಕ ಸಂಘವನ್ನು ತಲುಪಿ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು.



Related posts

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Mumbai News Desk

ಕಾರ್ಲೆ ಭಗವತಿ ಕ್ಷೇತ್ರದ ದೈವ ಪಾತ್ರಿ, ಮೋಯ ಜನಾಂಗದ ದಿವ್ಯ ಚೇತನ ದಿ.ಕೃಷ್ಣ ಬೆಳ್ಚಪ್ಪಾಡರು ಶಿರಿಯ, ಅವರ 42ನೇ ಪುಣ್ಯ ಸ್ಮರಣೆ

Mumbai News Desk

ಜೇಸಿಐ ಕಾಪು ಘಟಕದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಕಾಪು ಜೇಸಿ ಭವನದಲ್ಲಿ ಆಚರಿಸಲಾಯಿತು.

Mumbai News Desk

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk

ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಹಾಗೂ ಸಾಧಕರ ಗೌರವಾರ್ಪಣೆ: ಕಾರ್ಮಿಕರು ಶ್ರಮ ಮತ್ತು ಪರೋಪಕಾರಿ ಜೀವನದ ನಿಜವಾದ ಸಾಧಕರು – ಡಾ.ಹರಿಕೃಷ್ಣ ಪುನರೂರು

Mumbai News Desk

ಪಡುಮಾರ್ನಾಡು ಯುವಕ ಮಂಡಲದ ಅಧ್ಯಕ್ಷರಾಗಿ ತೀರ್ಥಂಗಡಿ ರಮೇಶ್ ಎಸ್. ಶೆಟ್ಟಿ, ಪ್ರಜ್ಞಾ ಯುವತಿ ಮಂಡಲದ ಅಧ್ಯಕ್ಷೆಯಾಗಿ ಅಮನೊಟ್ಟು ಸುನೀತಾ ಹೆಗ್ಡೆ ಆಯ್ಕೆ

Mumbai News Desk