32 C
Mumbai
March 7, 2026
Mumbai News Kannada
ಸುದ್ದಿ

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ





ಡೊಂಬಿವಲಿಯ ಖ್ಯಾತ ಛಾಯಾಗ್ರಾಹಕರೂ, ಮುಂಬೈ ನ್ಯೂಸ್ ನ ಛಾಯಾಗ್ರಾಹಕರೂ, ವರದಿಗಾರರೂ ಆಗಿರುವ ಧನಂಜಯ ಪೂಜಾರಿ ಅವರ ಮಾತೃಶ್ರೀ ಜಲಜಾ ಪೂಜಾರಿ (77 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ (ಇಂದು) ಸೆ. 10ರಂದು ತಮ್ಮ ಸ್ವಗ್ರಹದಲ್ಲಿ ಮುಂಜಾನೆ ನಿಧನ ಹೊಂದಿದರು.

ಮೃತರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಉಡುಪಿ, ಉಚ್ಚಿಲ ನಿವಾಸ ಆಗಿದ್ದ ಅವರು, ತಮ್ಮ ಸದ್ಗುಣ, ಸೌಮ್ಯತೆ ಹಾಗೂ ಧಾರ್ಮಿಕ ನಿಷ್ಠೆಯಿಂದ ಕುಟುಂಬ ಹಾಗೂ ಸಮಾಜದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದರು.

ಅವರ ಅಗಲಿಕೆಯು ಕುಟುಂಬವರ್ಗ ಮಾತ್ರವಲ್ಲದೆ, ಸ್ನೇಹಿತರು ಮತ್ತು ಪರಿಚಿತರ ವಲಯದಲ್ಲಿಯೂ ಆಳವಾದ ಶೋಕವನ್ನುಂಟುಮಾಡಿದೆ.
ದೈವಾದೀನರಾದ ಅವರ ಆತ್ಮಕ್ಕೆ ಪರಮಾತ್ಮನ ಚಿರಶಾಂತಿ ನೀಡಲೆಂದು ಮುಂಬೈ ನ್ಯೂಸ್ ಪರಿವಾರದ ಪ್ರಾರ್ಥನೆ.



Related posts

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ : ಶರನ್ನವರಾತ್ರಿ ಉತ್ಸವ ಆರಂಭ

Mumbai News Desk

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

Mumbai News Desk

ಮುಂಬಯಿಯಲ್ಲಿ ಜರಗಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥರ ಜನ್ಮವರ್ದಂತಿ ಬಗ್ಗೆ ಪೂರ್ವಭಾವಿ ಸಭೆ.

Mumbai News Desk

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.

Mumbai News Desk

ಓಟಗಾರ ಬಾಕಿಯಾದರೂ ಬಹುಮಾನ ಗೆದ್ದ ಹೊಸ್ಮಾರು ಸೂರ್ಯಶ್ರೀ ರತ್ನಾ ಸದಾಶಿವ ಶೆಟ್ಟರ ಕೋಣಗಳು. ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಗುರುಪುರ ಕಂಬಳ.

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Mumbai News Desk