.ವಿಶ್ವಕರ್ಮ ಸಮಾಜ ಬಾಂಧವರು ಸ್ಥಾಪಿಸಿರುವ ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಶ್ರೀ ವಿಶ್ವಕರ್ಮ ಮಹೋತ್ಸವ ಸೆ 16, ಮಂಗಳವಾರದಂದು ಬೆಳಿಗ್ಗೆ 5.00ರಿಂದ ಸಂಜೆ 7.00 ಘಂಟೆ ವರೆಗೆ ಅಂದೇರಿ ಪಶ್ಚಿಮದ ಬಾವನ್ಸ್ ಕಾಲೇಜ್ ಬಳಿ ಇರುವ ಜಾನಕಿಬ್ಯಾ
ಸಭಾಗ್ರದಲ್ಲಿ ನಡೆಯಲಿದೆ.
ಬೆಳಿಗ್ಗೆ ವಿಶ್ವಕರ್ಮ ಸಮಾಜದ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಹಾಗೂ ಮಕ್ಕಳಿಂದ ವಿವಿದ ಸಾಂಸ್ಕೃತಿಕ ಕಾರ್ಯಕ್ರಮಗಳು, ಶೈಕ್ಷಣಿಕ ಬಹುಮಾನಗಳು, ಸಭಾ ಕಾರ್ಯಕ್ರಮ ಮತ್ತು ಮಹಾ ಮಂಗಳಾರತಿಯೊಂದಿಗೆ ನಡೆಯಲಿದೆ.
ಸಮಾಜ ಬಾಂದವರೆಲ್ಲರೂ ಕುಟುಂಬ ಸಮೇತರಾಗಿ ಮಹೋತ್ಸವದಲ್ಲಿ ಪಾಲ್ಗೊಂಡು ವಿಶ್ವಕರ್ಮ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಸೋಸಿಯೇಷನ್ನ ಅಧ್ಯಕ್ಷರಾದ ರವೀಶ್ ಆಚಾರ್ಯ, ಉಪಾಧ್ಯಕ್ಷ ಗಣೇಶ್ ಕುಮಾರ್, ಕಾರ್ಯದರ್ಶಿಗಳುದ, ಪ್ರಸಾದ್ ಆಚಾರ್ಯ, ಸುಧೀರ್ ಆಚಾರ್ಯ, ಕೋಶಧಿಕಾರಿ ಬಾಬುರಾಜ್ ಆಚಾರ್ಯ,ಜೊತೆ ಕೋಶಧಿಕಾರಿ ರವೀಂದ್ರ ಪಿ ಆಚಾರ್ಯ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಸುಜಾತ ಜಿ ಆಚಾರ್ಯ. ಯುವ ವಿಭಾಗ ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.




