

ಮುಂಬಯಿ,ಸೆ.17. ಕಳೆದ 55 ವರ್ಷಗಳಿಂದ ಧಾರ್ಮಿಕ ಸೇವೆಯೊಂದಿಗೆ ಶೈಕ್ಷಣಿಕ, ವೈದ್ಯಕೀಯ ಸೇವೆಯಲ್ಲಿ ನಿರತ ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಧಾರ್ಮಿಕ ಸಂಸ್ಥೆಯು ತನ್ನ ಬೊರಿವಿಲಿ ಕಚೇರಿಯಲ್ಲಿ ಅಬಲೆಯರಿಗೆ ಹೊಲಿಗೆ ತರಬೇತಿ ತರಗತಿಯನ್ನು ಆರಂಭಿಸಿದೆ. ಇದರಲ್ಲಿ ಈ ತನಕ ಸುಮಾರು 500 ಆರ್ಥಿಕವಾಗಿ ಹಿಂದುಳಿದ ಸ್ತ್ರೀಯರು ಪ್ರಯೋಜನ ಪಡೆದಿದ್ದಾರೆ . ಪ್ರಸ್ತುತ ವರ್ಷದ 16ನೇ ಬ್ಯಾಚಿನಲ್ಲಿ ಹೊಲಿಗೆ ತರಬೇತಿ ಪಡೆದ ಸ್ತ್ರೀಯರ ಪ್ರಮಾಣ ಪತ್ರ ಹಾಗೂ ಹೊಲಿಗೆ ಯಂತ್ರವೊಂದನ್ನು ನೀಡುವ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರಂದು ಬೊರಿವಿಲಿ ಪಶ್ಚಿಮದ ಚುಕ್ಕುವಾಡಿಯ ಭೂಷಣ್ ಪಾರ್ಕ್ ವ್ಯೂ ಕಟ್ಟಡದಲ್ಲಿರುವ ಕಚೇರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ. ಸಮಿತಿಯ ಅಧ್ಯಕ್ಷ ಮಾಧವ ಎಸ್.ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬಂಟರ ಸಂಘ ಮುಂಬಯಿ ಇದರ ಫಂಡ್ ರೈಸಿಂಗ್ ಕಮಿಟಿಯ ಕಾರ್ಯಾಧ್ಯಕ್ಷ, ಸಮಾಜ ಸೇವಕ ಹಾಗೂ ಹೆಸರಾಂತ ಹೋಟೆಲ್ ಉದ್ಯಮಿ ಮುಂಡಪ್ಪ ಪಯ್ಯಡೆಯವರು ಮುಖ್ಯ ಅತಿಥಿಯಾಗಿ ಆಗಮಿಸಲಿರುವರು.
ಇದೇ ಸಂದರ್ಭದಲ್ಲಿ ಸಮಿತಿಯ 31ನೇ ವಾರ್ಷಿಕ ಮಹಾಸಭೆಯು ಜರುಗಲಿದೆ.ಸಮಿತಿಯ ಸರ್ವ ಸದಸ್ಯರು ಸಮಯಕ್ಕೆ ಸರಿಯಾಗಿ ಉಪಸ್ಥಿತರಿರ ಬೇಕಾಗಿ ಸಮಿತಿಯ ಗೌ.ಕಾರ್ಯದರ್ಶಿ ಪ್ರೊ. ಕೇಶವ ಎಚ್.ಕರ್ಕೇರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.




