September 6, 2026
Mumbai News Kannada
ತುಳುನಾಡು

ಮೂಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆಯಿಂದ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಸಾಮಗ್ರಿ ಮತ್ತು ಕುರ್ಚಿಗಳ ಕೊಡುಗೆ





​ಮೂಲ್ಕಿ: ಮೂಲ್ಕಿ ನಗರ ಪಂಚಾಯತಿ ವ್ಯಾಪ್ತಿಯ ಸಮುದಾಯ ಭವನದ ಪಕ್ಕದಲ್ಲಿರುವ ಅಂಗನವಾಡಿಯ ಮಕ್ಕಳಿಗೆ ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆಯ ಮಾಲೀಕರಾದ ಜೋನ್ ಕ್ವಾಡ್ರಸ್ ಅವರು ಕ್ರೀಡಾ ಸಾಮಗ್ರಿ ಮತ್ತು ಕುರ್ಚಿಗಳನ್ನು ಉದಾರವಾಗಿ ಕೊಡುಗೆಯಾಗಿ ನೀಡಿದ್ದಾರೆ.

​ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮೂಲ್ಕಿ ನಗರ ಪಂಚಾಯತಿಯ ನಿವೃತ್ತ ಮುಖ್ಯಾಧಿಕಾರಿ ಹರಿಶ್ಚಂದ್ರ ಸಾಲಿಯಾನ್ ಅವರು ಮಾತನಾಡಿ, “ಸುರಭಿ ಸಂಸ್ಥೆಯು ಪ್ರತಿ ವರ್ಷವೂ ಮೂಲ್ಕಿ ಸುತ್ತಮುತ್ತಲಿನ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಧನಸಹಾಯ ಮತ್ತು ಸಮವಸ್ತ್ರಗಳನ್ನು ನೀಡುತ್ತಾ ಬಂದಿದೆ. ಈ ಸಂಸ್ಥೆಯು ಮುಂದಿನ ದಿನಗಳಲ್ಲಿ ಟ್ರಸ್ಟ್ ಒಂದನ್ನು ಸ್ಥಾಪಿಸಿ, ಅದರ ಮೂಲಕ ಪ್ರತಿ ವರ್ಷವೂ ನಿರಂತರವಾಗಿ ವಿದ್ಯಾರ್ಥಿಗಳಿಗೆ ಧನಸಹಾಯ ಹಾಗೂ ಸಮವಸ್ತ್ರ ಮತ್ತು ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಯೋಜನೆಯನ್ನು ಹೊಂದಿದೆ. ಸುರಭಿ ಸಂಸ್ಥೆಯು ಮೂಲ್ಕಿಯಲ್ಲಿ ಒಂದು ಆದರ್ಶ ಸಂಸ್ಥೆಯಾಗಿ ಜನರ ಮೆಚ್ಚುಗೆ ಗಳಿಸಲಿ” ಎಂದು ಆಶಿಸಿದರು.

​ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆಯ ಮಾಲೀಕರಾದ ಜೋನ್ ಕ್ವಾಡ್ರಸ್ ಅವರು ಮಾತನಾಡಿ, “ನಾನು ಮಕ್ಕಳ ಭವಿಷ್ಯಕ್ಕಾಗಿ ಜಾತಿ-ಮತ ನೋಡದೆ ನನ್ನ ಕೈಲಾದಷ್ಟು ಸಹಾಯ ಮಾಡುತ್ತಾ ಬಂದಿದ್ದೇನೆ. ಮುಂದೆಯೂ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಲು ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಟ್ರಸ್ಟ್ ಅನ್ನು ಸ್ಥಾಪಿಸಿ, ಅದರ ಮೂಲಕ ನೆರವು ನೀಡುವ ಉದ್ದೇಶ ಇದೆ” ಎಂದು ಹೇಳಿದರು.

​ಈ ಕಾರ್ಯಕ್ರಮದಲ್ಲಿ ಮೂಲ್ಕಿ ನಗರ ಪಂಚಾಯತಿಯ ಸದಸ್ಯ ಪುತ್ತುಬಾವ, ಅಂಗನವಾಡಿ ಸಹಾಯಕರು, ಅಂಗನವಾಡಿ ಮೇಲ್ವಿಚಾರಕಿ ಭಾರತಿ, ಮತ್ತು ಅಂಗನವಾಡಿ ಮಕ್ಕಳ ಸಂಘದ ಅಧ್ಯಕ್ಷೆ ಶೈಲಶ್ರೀ ಅವರು ಉಪಸ್ಥಿತರಿದ್ದರು. ಅಂಗನವಾಡಿ ಸಹಾಯಕಿಯಾದ ಮಂಜುಳಾ ಅವರು ಕೊನೆಯಲ್ಲಿ ವಂದನಾರ್ಪಣೆ ಮಾಡಿದರು.



Related posts

ಮೂಲ್ಕಿ: ಕಾರ್ನಾಡು ಸಿ.ಎಸ್.ಐ ಶಾಲೆಯಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ

Mumbai News Desk

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ದಾರದ ನಿಮ್ಮಿತ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ* 

Mumbai News Desk

ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ  ಪ್ರಶಾಂತ್ ಶೆಟ್ಟಿ  ಮಂಡೇಡಿ ಆಯ್ಕೆ 

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk