28.4 C
Mumbai
March 7, 2026
Mumbai News Kannada
ಮುಂಬಯಿ

ಕೊಂಕಣಿ ವೆಲ್ಫೇರ್ ಅಸೋಸಿಯೇಷನ್ ಸಯನ್ : ಕನ್ಯಾ ಮರಿಯಮ್ಮನವರ ಜನ್ಮದಿನೋತ್ಸವ ಮೋಂತಿ ಪೆಸ್ತ್





ಕೊಂಕಣಿ ವೆಲ್ಪರ್ ಅಸೋಸಿಯೇಷನ್ ಸಯನ್, ಇದರ ವತಿಯಿಂದ ಯೇಸುಕ್ರಿಸ್ತರ ಮಾತೆ ಕನ್ಯಾ ಮರಿಯಮ್ಮನ ಜನ್ಮೋತ್ಸವದ ಆಚರಣೆಯು ಸೆ. 13ರಂದು ಸಯನ್ ಸ್ಟೇಷನ್ ಪಕ್ಕದ ಅವರ್ ಲೇಡಿ ಆಫ್ ಗುಡ್ ಕನಸೇಲ್ ಇಗರ್ಜಿಯಲ್ಲಿ ಜರಗಿತು.ಅತಿಥಿ ಫಾ! ಶಾವಿಟೊ ಕುರೆಯಾ, ಇಗರ್ಜಿಯ ಧರ್ಮಗುರು ಫಾ! ಟೋನಿ ಡಿ’ಸೋಜ, ಫಾ! ಜೂಲಿಯಸ್, ಫಾ! ಸಾಳ್ವಡೋರ್ ಡಿ’ಸೋಜ, ಫಾ! ಅರವಿಂದ್
ಅವರು ಪ್ರಕೃತಿ ಮಾತೆಯನ್ನು ಸ್ಮರಿಸುತ್ತ, ಅಭಿನಂದನಾ ಪೂಜೆ ನೆರವೇರಿಸಿ, ಮಾತೆಯ ಆರಾಧನೆಗೈದು, ಹೊಸ ಭತ್ತದ ತೆನೆಯನ್ನು ಭಕ್ತರಿಗೆ ವಿತರಿಸಿ ಶುಭ ಹಾರೈಸಿದರು.


ಅಧ್ಯಕ್ಷರಾದ ಹ್ಯಾರಿ ಸಿಕ್ತ್ವೆರಾ ಅವರ ಮುಂದಾಳತ್ವದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಅವರ್ ಲೇಡಿ ಆಫ್ ಗುಡ್ ಕೌನ್ಸಿಲ್ ಚಾನ್ಸ್ಲರ್ ಕೊರಯ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಆಶೀರ್ವಚನ ನೀಡಿದರು.
ಇಗರ್ಜಿಯ ಕ್ರೈಸ್ತ ಸನ್ಯಾಸಿನಿಯರಾದ ಸಿಸ್ಟರ್ ಶಾಂತಿ
ಸಿಸ್ಟರ್ ಗೀತಾ, ಸಿಸ್ಟರ್ ಲೀಸಿ,
ಕಾರ್ಯದರ್ಶಿ ಡೆನಿಸ್ ಡಿ’ಸೋಜ, ಕೋಶಧಿಕಾರಿ ಮೊಲಿ ಸಿಕ್ತ್ವೆರಾ, ಡುಲ್ಸಿನ್ ಫುರ್ತಾದೋ, ಕಾರ್ಯಧ್ಯಕ್ಷ ಪ್ಲಾವಿಯ ಡಿ:ಸೋಜಾ, ರೀಟಾ ಅರಹ್ನ,, ವನಿತಾ ಡಿಸೋಜ, ರಾಯನ್ ಡಿ’ಸೋಜ, ಸಂತಾನ, ಸಿಲ್ವಸ್ಟರ್, ಹೆಲೆನ್ ಡಿಸೋಜ, ಪೀಟರ್ ಡಿಸೋಜ, ನೊಲಿನ್, ರೋಷಲ್, ಉಪಸ್ಥಿತರಿದ್ದು ಸಹಕರಿಸಿದರು.
ಹಬ್ಬದ ಸಂದೇಶವನ್ನು ಲೀನಾ ಪಿಂಟೋ ನೀಡಿದರು.
ವಿಶೇಷ ಆಮಂತ್ರಿಕರಾಗಿ ಹೆನ್ರಿ ಡಿಸೋಜ, ಪಾಲ್ ಡಿಸೋಜ, ಜಾರ್ಜ್ ಪಿಂಟೊ ಭಾಗವಹಿಸಿದರು.
ಈ ಸಂದರ್ಭದಲ್ಲಿ ಎಸೋಸಿಯೇಷನ್ ನ ಸದಸ್ಯರಿಂದ ಸಂಗೀತ, ಕಿರು ಪ್ರಹಸನ, ನೃತ್ಯ ನಡೆಯಿತು.
ಮಾಜಿ ಅಧ್ಯಕ್ಷ ದುಲ್ಸಿನ್ ಫುರ್ತಾದೋ ಧನ್ಯವಾದ ಸಮರ್ಪಸಿದರು.


ಲಕ್ಷ್ಮೀ ಕ್ಯಾಟರರರ್ಸ್ ನ ಮಾಲಕರದ ಸತೀಶ್ ಶೆಟ್ಟಿ, ಭಾರತದ ನೇವಿಯ ನಿವ್ರತ್ತ ಅಧಿಕಾರಿ ಸಂಪತ್ ಶೆಟ್ಟಿ, ಕನ್ನಡ ಸಂಘ ಸಯನ್ ನ ಅಧ್ಯಕ್ಷ ಪ್ರವೀಣ್ ಭಟ್, ಜತೆ ಕೋಶಾಧಿಕಾರಿ ದಯಾನಂದ ಮೂಲ್ಯ, ಜತೆ ಕಾರ್ಯದರ್ಶಿಗಳಾದ ಜಯಶೀಲ ಮೂಲ್ಯ, ಉಮೇಶ್ ಶೆಟ್ಟಿ ಕುಕ್ಕುಂದೂರು,
ಉದ್ಯಮಿ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕೊನೆಗೆ ಎಸೋಸಿಯೇಷನ್ ನ ಸದಸ್ಯರು ತಯಾರಿಸಿದ ಹೊಸ ಅಕ್ಕಿಯ ಊಟದ ವ್ಯವಸ್ಥೆ ಮಾಡಲಾಗಿತ್ತು.



Related posts

ನವಿ ಮುಂಬಯಿ ಘನ್ಸೋಲಿಯ ದೇವಿ ಮೂಕಾಂಬಿಕಾಗೆ ಸೋಮನಾಥ ಎಸ್‌. ಕರ್ಕೇರರ ನೂತನ ತುಳು ಕೃತಿ ‘ಪೆರ್ಗ’ ದ ಮೊದಲ ಪ್ರತಿ ಅರ್ಪಣೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಭಾಂಡುಪ್ ಸ್ಥಳೀಯ ಕಚೇರಿಯ ಸಂಯೋಜನೆಯಲ್ಲಿ ಬಾಬು ಶಿವ ಪೂಜಾರಿ ಅವರ “ಬಿಲ್ಲವರ ಗುತ್ತು” ಗ್ರಂಥದ ಮುಂಬಯಿ ಅವೃತಿ ಬಿಡುಗಡೆ.

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ 79 ನೇ ವಾರ್ಷಿಕ ಮಹಾಪೂಜೆ, ಧಾರ್ಮಿಕ ಸಭೆ

Mumbai News Desk

 ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ,

Mumbai News Desk

ಸಾಫಲ್ಯ ಸೇವಾ ಸಂಘದ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ: ಶಿಕ್ಷಣ ಮತ್ತು ಪ್ರಗತಿಯ ಸಂಭ್ರಮ – ವಿದ್ಯಾರ್ಥಿ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್‌ಸೈಟ್ ಲೋಕಾರ್ಪಣಾ ಸಮಾರಂಭ

Mumbai News Desk