30.9 C
Mumbai
June 8, 2026
Mumbai News Kannada
ಮುಂಬಯಿ

ಕೊಂಕಣಿ ವೆಲ್ಫೇರ್ ಅಸೋಸಿಯೇಷನ್ ಸಯನ್ : ಕನ್ಯಾ ಮರಿಯಮ್ಮನವರ ಜನ್ಮದಿನೋತ್ಸವ ಮೋಂತಿ ಪೆಸ್ತ್





ಕೊಂಕಣಿ ವೆಲ್ಪರ್ ಅಸೋಸಿಯೇಷನ್ ಸಯನ್, ಇದರ ವತಿಯಿಂದ ಯೇಸುಕ್ರಿಸ್ತರ ಮಾತೆ ಕನ್ಯಾ ಮರಿಯಮ್ಮನ ಜನ್ಮೋತ್ಸವದ ಆಚರಣೆಯು ಸೆ. 13ರಂದು ಸಯನ್ ಸ್ಟೇಷನ್ ಪಕ್ಕದ ಅವರ್ ಲೇಡಿ ಆಫ್ ಗುಡ್ ಕನಸೇಲ್ ಇಗರ್ಜಿಯಲ್ಲಿ ಜರಗಿತು.ಅತಿಥಿ ಫಾ! ಶಾವಿಟೊ ಕುರೆಯಾ, ಇಗರ್ಜಿಯ ಧರ್ಮಗುರು ಫಾ! ಟೋನಿ ಡಿ’ಸೋಜ, ಫಾ! ಜೂಲಿಯಸ್, ಫಾ! ಸಾಳ್ವಡೋರ್ ಡಿ’ಸೋಜ, ಫಾ! ಅರವಿಂದ್
ಅವರು ಪ್ರಕೃತಿ ಮಾತೆಯನ್ನು ಸ್ಮರಿಸುತ್ತ, ಅಭಿನಂದನಾ ಪೂಜೆ ನೆರವೇರಿಸಿ, ಮಾತೆಯ ಆರಾಧನೆಗೈದು, ಹೊಸ ಭತ್ತದ ತೆನೆಯನ್ನು ಭಕ್ತರಿಗೆ ವಿತರಿಸಿ ಶುಭ ಹಾರೈಸಿದರು.


ಅಧ್ಯಕ್ಷರಾದ ಹ್ಯಾರಿ ಸಿಕ್ತ್ವೆರಾ ಅವರ ಮುಂದಾಳತ್ವದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಅವರ್ ಲೇಡಿ ಆಫ್ ಗುಡ್ ಕೌನ್ಸಿಲ್ ಚಾನ್ಸ್ಲರ್ ಕೊರಯ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಆಶೀರ್ವಚನ ನೀಡಿದರು.
ಇಗರ್ಜಿಯ ಕ್ರೈಸ್ತ ಸನ್ಯಾಸಿನಿಯರಾದ ಸಿಸ್ಟರ್ ಶಾಂತಿ
ಸಿಸ್ಟರ್ ಗೀತಾ, ಸಿಸ್ಟರ್ ಲೀಸಿ,
ಕಾರ್ಯದರ್ಶಿ ಡೆನಿಸ್ ಡಿ’ಸೋಜ, ಕೋಶಧಿಕಾರಿ ಮೊಲಿ ಸಿಕ್ತ್ವೆರಾ, ಡುಲ್ಸಿನ್ ಫುರ್ತಾದೋ, ಕಾರ್ಯಧ್ಯಕ್ಷ ಪ್ಲಾವಿಯ ಡಿ:ಸೋಜಾ, ರೀಟಾ ಅರಹ್ನ,, ವನಿತಾ ಡಿಸೋಜ, ರಾಯನ್ ಡಿ’ಸೋಜ, ಸಂತಾನ, ಸಿಲ್ವಸ್ಟರ್, ಹೆಲೆನ್ ಡಿಸೋಜ, ಪೀಟರ್ ಡಿಸೋಜ, ನೊಲಿನ್, ರೋಷಲ್, ಉಪಸ್ಥಿತರಿದ್ದು ಸಹಕರಿಸಿದರು.
ಹಬ್ಬದ ಸಂದೇಶವನ್ನು ಲೀನಾ ಪಿಂಟೋ ನೀಡಿದರು.
ವಿಶೇಷ ಆಮಂತ್ರಿಕರಾಗಿ ಹೆನ್ರಿ ಡಿಸೋಜ, ಪಾಲ್ ಡಿಸೋಜ, ಜಾರ್ಜ್ ಪಿಂಟೊ ಭಾಗವಹಿಸಿದರು.
ಈ ಸಂದರ್ಭದಲ್ಲಿ ಎಸೋಸಿಯೇಷನ್ ನ ಸದಸ್ಯರಿಂದ ಸಂಗೀತ, ಕಿರು ಪ್ರಹಸನ, ನೃತ್ಯ ನಡೆಯಿತು.
ಮಾಜಿ ಅಧ್ಯಕ್ಷ ದುಲ್ಸಿನ್ ಫುರ್ತಾದೋ ಧನ್ಯವಾದ ಸಮರ್ಪಸಿದರು.


ಲಕ್ಷ್ಮೀ ಕ್ಯಾಟರರರ್ಸ್ ನ ಮಾಲಕರದ ಸತೀಶ್ ಶೆಟ್ಟಿ, ಭಾರತದ ನೇವಿಯ ನಿವ್ರತ್ತ ಅಧಿಕಾರಿ ಸಂಪತ್ ಶೆಟ್ಟಿ, ಕನ್ನಡ ಸಂಘ ಸಯನ್ ನ ಅಧ್ಯಕ್ಷ ಪ್ರವೀಣ್ ಭಟ್, ಜತೆ ಕೋಶಾಧಿಕಾರಿ ದಯಾನಂದ ಮೂಲ್ಯ, ಜತೆ ಕಾರ್ಯದರ್ಶಿಗಳಾದ ಜಯಶೀಲ ಮೂಲ್ಯ, ಉಮೇಶ್ ಶೆಟ್ಟಿ ಕುಕ್ಕುಂದೂರು,
ಉದ್ಯಮಿ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕೊನೆಗೆ ಎಸೋಸಿಯೇಷನ್ ನ ಸದಸ್ಯರು ತಯಾರಿಸಿದ ಹೊಸ ಅಕ್ಕಿಯ ಊಟದ ವ್ಯವಸ್ಥೆ ಮಾಡಲಾಗಿತ್ತು.



Related posts

ಲಾಲ್ ಬಾಗ್ ಚಾ ರಾಜ ಪಂಡಲ್ ನಲ್ಲಿ ವಿಐಪಿ ದರ್ಶನ ಪಕ್ಷಪಾತವನ್ನು ಖಂಡಿಸಿ, ನೋಟಿಸ್ ಜಾರಿ ಮಾಡಿದ ಮಾನವ ಹಕ್ಕುಗಳ ಆಯೋಗ

Mumbai News Desk

ಗೊರೆಗಾಂವ್ ಕರ್ನಾಟಕ ಸಂಘದ 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ, ಸಮಾರೋಪ ಸಮಾರಂಭ

Mumbai News Desk

ಮೀರಾ – ಭಾಯಂದರ್ ನಲ್ಲಿ ಶ್ರೀ ನಾರಾಯಣ ಗುರು ಭಜನಾ ಮಂಡಳಿ ಉದ್ಘಾಟನೆ. ಕಾರ್ಯಾಧ್ಯಕ್ಷರಾಗಿ ಉದಯ ಡಿ ಸುವರ್ಣ ಆಯ್ಕೆ

Mumbai News Desk

HSC ಪರೀಕ್ಷೆ ಯಲ್ಲಿ ನಿಧಿ ಜಗದೀಶ ಶೆಟ್ಟಿ 90 ಶೇಕಡಾ ಅಂಕ

Mumbai News Desk

ಕಲಂಬೋಲಿ  ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ದ  34 ನೆ  ವಾರ್ಷಿಕ ಮಹಾಪೂಜೆ .

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್, ಇದರ 16ನೇ ವರ್ಷದ ವಾರ್ಷಿಕ  ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk